23.7 C
ಪುತ್ತೂರು, ಬೆಳ್ತಂಗಡಿ
April 24, 2026
ಅಪರಾಧ ಸುದ್ದಿತಾಲೂಕು ಸುದ್ದಿ

ಪೆರಿಯಶಾಂತಿ-ಕುದ್ರಾಯ: ಅನಧಿಕೃತ ಗೂಡಂಗಡಿಗಳ ತೆರವಿಗೆ ಅರಣ್ಯ ಇಲಾಖೆ ಸೂಚನೆ

ನೆಲ್ಯಾಡಿ: ಪೆರಿಯಶಾಂತಿ-ಕುದ್ರಾಯವರೆಗಿನ ಮೀಸಲು ಅರಣ್ಯದ ಪಕ್ಕದ ರಸ್ತೆಯಲ್ಲಿ ಅನಧಿಕೃತವಾಗಿ ಇರುವ ಗೂಡಂಗಡಿಗಳನ್ನು ತೆರವುಗೊಳಿಸುವಂತೆ ಉಪ್ಪಿನಂಗಡಿ ವಲಯ ಪ್ರೊಫೆಷನಲ್ ಅರಣ್ಯಾಧಿಕಾರಿ ಹಸ್ತ ಶೆಟ್ಟಿ ಮತ್ತು ವಲಯ ಅರಣ್ಯಾಧಿಕಾರಿ ರಾಘವೇಂದ್ರ ಖಡಕ್ ಸೂಚನೆ ನೀಡಿದ್ದಾರೆ.

ಪ್ರಜಾಪ್ರತಿನಿಧಿಗಳು ಹಾಗೂ ಸಾರ್ವಜನಿಕರಿಂದ ದಾಖಲಾಗಿರುವ ದೂರುಗಳ ಹಿನ್ನೆಲೆ ಮತ್ತು ಪ್ರಧಾನಮಂತ್ರಿ ಕಾರ್ಯಾಲಯದಿಂದ ಬಂದಿರುವ ಸೂಚನೆ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಪೆರಿಯಶಾಂತಿಯಿಂದ ಕುದ್ರಾಯವರೆಗಿನ ಮೀಸಲು ಅರಣ್ಯ ಪ್ರದೇಶದಲ್ಲಿ ಅನಧಿಕೃತವಾಗಿ ವ್ಯಾಪಾರ ನಡೆಸುತ್ತಿರುವವರಿಗೆ ಮೌಖಿಕ ಆದೇಶ ನೀಡಲಾಗಿತ್ತು. ಈ ವ್ಯಾಪಾರಸ್ಥರು ಜುಲೈ 15ರೊಳಗೆ ಗೂಡಂಗಡಿಗಳನ್ನು ಸ್ವಯಂ ಪ್ರೇರಿತವಾಗಿ ತೆರವುಗೊಳಿಸುವ ಭರವಸೆ ನೀಡಿದ್ದರೂ ಈಗಾಗಲೇ ನಿಗದಿತ ಅವಧಿ ಕಳೆದರೂ ಇವುಗಳಲ್ಲಿ ಬಹುಪಾಲು ಇನ್ನೂ ತೆರವುಗೊಳ್ಳಿಲ್ಲ ಎಂದು ಅಧಿಕಾರಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದರಿಂದಾಗಿ ಅರಣ್ಯ ಪ್ರದೇಶದ ಶಾಂತತೆಯನ್ನು ಹದಗೆಡಿಸುವ ಸಂದರ್ಭ ಉಂಟಾಗಿದ್ದು, ಇದರ ಬೆನ್ನಲ್ಲೇ ವ್ಯಾಪಾರಿಗಳು ರಸ್ತೆ ಬದಿ ಇಡುತ್ತಿರುವ ಹಲಸಿನ ಹಣ್ಣು, ಅನನಾಸು ಮುಂತಾದ ಹಣ್ಣುಗಳ ವಾಸನೆಗೆ ಆಕರ್ಷಿತರಾಗಿ ಆನೆಗಳು ಗೂಡಂಗಡಿ ಕಡೆಗೆ ಬರಲಾರಂಭಿಸಿದೆ. ಪರಿಣಾಮವಾಗಿ ಆನೆಗಳ ಚಲನವಲನಕ್ಕೆ ತೊಂದರೆ ಉಂಟಾಗುತ್ತಿದೆ. ಈಗಾಗಲೇ ಈ ಭಾಗದಲ್ಲಿ ಆನೆ ದಾಳಿ ವರದಿಯಾಗಿರುವ ಹಿನ್ನೆಲೆ, ಜೈವಿಕ ಜೀವವೈವಿಧ್ಯ ಹಾಗೂ ಸಾರ್ವಜನಿಕರ ರಕ್ಷಣೆಯ ದೃಷ್ಟಿಯಿಂದ ಅನಧಿಕೃತ ವ್ಯಾಪಾರ ತಕ್ಷಣವೇ ನಿಲ್ಲಿಸಬೇಕಾಗಿದೆ ಎಂದು ಅರಣ್ಯಾಧಿಕಾರಿಗಳು ಖಡಕ್ ಎಚ್ಚರಿಕೆ ನೀಡಿದ್ದಾರೆ.

“ಅನಧಿಕೃತವಾಗಿ ಗೂಡಂಗಡಿ ನಡೆಸಿ ಆನೆ ಅಥವಾ ಇತರ ಕಾಡುಪ್ರಾಣಿಗಳಿಂದ ಸಾರ್ವಜನಿಕರಿಗೆ ಏನೇನಾದರೂ ಅನಾಹುತ ಸಂಭವಿಸಿದರೆ, ಅದರ ಹೊಣೆಗಾರರು ನಾವಲ್ಲ. ಕಾನೂನು ಕ್ರಮ ತಪ್ಪದೇ ಜರುಗಲಿದೆ,” ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.ವ್ಯಾಪಾರಸ್ಥರು ತಮ್ಮ ಗೂಡಂಗಡಿಗಳನ್ನು ತೆರವುಗೊಳಿಸದಿದ್ದರೆ, ಪೊಲೀಸ್ ಭದ್ರತೆ ಜೊತೆಗಿಸಿಕೊಂಡು ಅರಣ್ಯ ಇಲಾಖೆ ನೇರವಾಗಿ ಕಾರ್ಯಾಚರಣೆಗೆ ಇಳಿಯುವುದಾಗಿ ಮಾಧ್ಯಮಗಳಿಗೆ ಮಾಹಿತಿ ನೀಡಲಾಗಿದೆ.

Related posts

ಉಜಿರೆ: ಹೊಳೆಯಂತಾದ ಉಜಿರೆ ಹಳೆಪೇಟೆ ರಸ್ತೆ, ಹಲವೆಡೆ ಅಂಗಡಿಗೆ ನುಗ್ಗಿದ ನೀರು, ಶಾಶ್ವತ ಪರಿಹಾರಕ್ಕೆ ಆಗ್ರಹ

Suddi Udaya

ಸುದ್ದಿ ಉದಯ ವಾರಪತ್ರಿಕೆ’ ನೇತೃತ್ವ ‘ಮುಳಿಯ ಸಂಸ್ಥೆ’ಯ ಪ್ರಾಯೋಜಕತ್ವ – ‘ರಾಧೆ-ಕೃಷ್ಣ’ ಫೋಟೋ ಸ್ಪರ್ಧಾ ವಿಜೇತ ಮಕ್ಕಳಿಗೆ ಬಹುಮಾನ ವಿತರಣೆ

Suddi Udaya

ಬೆಳ್ತಂಗಡಿ ಬಿಜೆಪಿ ಯುವ ಮೋರ್ಚಾ ಮಂಡಲದ ಸದಸ್ಯರಿಂದ 100ಕ್ಕಿಂತ ಹೆಚ್ಚು ಸದಸ್ಯತ್ವ ನಡೆಸಿ ರಾಜ್ಯಕ್ಕೆ ಮಾದರಿ

Suddi Udaya

ಲಾಯಿಲ: ರಸ್ತೆ ದಾಟುತ್ತಿರುವ ವೇಳೆ ಪಿಕಪ್ ಡಿಕ್ಕಿ: ಪಾರೆಂಕಿಯ ಬಾಲಕ ರಂಝಿನ್ ಸಾವು

Suddi Udaya

ಜಿಲ್ಲಾ ಮಟ್ಟದ ಸ್ಕೌಟ್ಸ್ ಮತ್ತು ಗೈಡ್ಸ್ ಕ್ರೀಡೋತ್ಸವ: ನಡ ಸರಕಾರಿ ಪದವಿ ಪೂರ್ವ ಕಾಲೇಜು ರೇಂಜರ್ಸ್ ವಿದ್ಯಾರ್ಥಿಗಳಿಗೆ ಬಹುಮಾನ

Suddi Udaya

ಧರ್ಮಸ್ಥಳ ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಯಲ್ಲಿ ಪ್ರತಿಭಾ ದಿನಾಚರಣೆ, ನಿವೃತ್ತ ಶಿಕ್ಷಕರಿಗೆ ಸನ್ಮಾನ

Suddi Udaya
error: Content is protected !!