September 6, 2026
ಶಾಲಾ ಕಾಲೇಜು

ವೇಣೂರು ಸರಕಾರಿ ಪ್ರೌಢ ಶಾಲೆಯ ವಿದ್ಯಾರ್ಥಿ ಸಂಘ ಮತ್ತು ಇತರ ಸಂಘಗಳ ಉದ್ಘಾಟನಾ ಸಮಾರಂಭ

ವೇಣೂರು: ಸರಕಾರಿ ಪ್ರೌಢ ಶಾಲೆಯ 2025-26 ನೇ ಶೈಕ್ಷಣಿಕ ವರ್ಷದ ವಿದ್ಯಾರ್ಥಿ ಸಂಘ ಮತ್ತು ಇತರ ಸಂಘಗಳ ಉದ್ಘಾಟನಾ ಸಮಾರಂಭವು ಜು.19ರಂದು ನಡೆಯಿತು.

ಎಸ್.ಡಿ.ಎಂ.ಸಿ ಉಪಾಧ್ಯಕ್ಷ ರಾಜೇಶ್ ಪೂಜಾರಿ ಮೂಡುಕೋಡಿ ಕಾರ್ಯಕ್ರಮ ಉದ್ಘಾಟಿಸಿ ಗ್ರಾಮೀಣ ಪ್ರದೇಶದ ವೇಣೂರು ಪ್ರೌಢ ಶಾಲೆಯು ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡುತ್ತಿದೆ.ತಾನು ಕಲಿತ ಶಾಲೆ ಮತ್ತು ಗುರುಗಳನ್ನು ವಿದ್ಯಾರ್ಥಿಗಳು ಮರೆಯದೆ ಒಳ್ಳೆಯ ಉದ್ಯೋಗ ಪಡೆದು ಸಮಾಜಕ್ಕೆ ಶಕ್ತಿಯಾಗಬೇಕು ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಉಪ ಪ್ರಾಂಶುಪಾಲ ವೆಂಕಟೇಶ್ ತುಳುಪುಳೆ ಅವರು ವಹಿಸಿದ್ದರು.

ವೇದಿಕೆಯಲ್ಲಿ ರೋಟರಿ ಕ್ಲಬ್ ಫಲ್ಗುಣಿ ಸಿದ್ಧಕಟ್ಟೆಯ ಅಧ್ಯಕ್ಷ ರೊ. ದುರ್ಗಾದಾಸ್ ಶೆಟ್ಟಿ, ಕಾರ್ಯದರ್ಶಿ ರೊ. ಟೀನಾ ಡಿಕೋಸ್, ಲಯನ್ಸ್‌ ಕ್ಲಬ್ ವೇಣೂರಿನ ಕಾರ್ಯದರ್ಶಿ ಲ. ಜಯರಾಮ ಹೆಗ್ಡೆ,ಹಿರಿಯ ಶಿಕ್ಷಕಿ ಸುಕನ್ಯ ಪ್ರಭು, ನೆಲ್ಸನ್ ಹೆರಾಲ್ಡ್ ಕ್ಯಾಸ್ಟಲಿನೊ,ವಿದ್ಯಾರ್ಥಿ ನಾಯಕಿ ಕುಮಾರಿ ಶಬರಿ, ಉಪನಾಯಕ ನರಸಿಂಹ ಕಾಮತ್,ವಿರೋಧ ಪಕ್ಷದ ನಾಯಕಿ ಧೃತಿ ಉಪಸ್ಥಿತರಿದ್ದರು.

ರೋಟರಿ ಕ್ಲಬ್ ಸಿದ್ದ ಕಟ್ಟೆ, ಲಯನ್ಸ್ ಕ್ಲಬ್ ವೇಣೂರು, ಎನ್.ಎಸ್.ಎಸ್ ಘಟಕ ಮತ್ತು ಮತದಾನ ಸಾಕ್ಷರತಾ ಸಂಘದ ಸಹಯೋಗದಲ್ಲಿ ಕಾರ್ಯಕ್ರಮ ನೆರವೇರಿತು.

ಎನ್.ಎಸ್.ಎಸ್ ಕಾರ್ಯಕ್ರಮ ಅಧಿಕಾರಿ ರವೀಂದ್ರ ಕೆ. ಸ್ವಾಗತಿಸಿದರು.ಶಿಕ್ಷಕಿ ಸುಶೀಲಾ ಜಿ. ಕಾರ್ಯಕ್ರಮದ ನಿರೂಪಣೆ ಮಾಡಿದರು. ಶಿಕ್ಷಕಿ ಪ್ರೇಮ ಕೆ. ಧನ್ಯವಾದವಿತ್ತರು.

Related posts

ಎಕ್ಸೆಲ್ ಕಾಲೇಜು ಭರವಸೆಯ ಪ್ರತೀಕ, ಶಕ್ತಿಯ ಮೂಲ,ಭವಿಷ್ಯದ ಕೇಂದ್ರ ಶೈಕ್ಷಣಿಕ ಕ್ಷೇತ್ರದ ಅದ್ಬುತ ಯುವ ಸಾಧಕ ಸುಮಂತ್ ಕುಮಾರ್ ರವರ ಇಚ್ಚಾಶಕ್ತಿ ಮತ್ತು ಬದ್ಧತೆಯನ್ನು ಮೆಚ್ಚುವಂತದ್ದು ಎಕ್ಸೆಲ್ ಕಾಲೇಜಿನ ಶೈಕ್ಷಣಿಕ ಸಾಧನೆಯನ್ನು ಕೊಂಡಾಡಿದ ಖ್ಯಾತ ಚಿತ್ರನಟ ರಮೇಶ್ ಅರವಿಂದ್

Suddi Udaya

ತೋಟತ್ತಾಡಿ ಶಾಲಾ ಪ್ರಭಾರ ಮುಖ್ಯ ಶಿಕ್ಷಕ ದಿನಕರ ನಾಯಕ್ ಬೆಳ್ತಂಗಡಿ ಮಾದರಿ ಶಾಲೆಗೆ ವಗಾ೯ವಣೆ

Suddi Udaya

ರಾಜ್ಯಮಟ್ಟದ ಜನಪದ ಗೀತಗಾಯನ ಸ್ಪರ್ಧೆ :ವಾಣಿ ಪ.ಪೂ. ಕಾಲೇಜಿನ ರೋವರ್ಸ್- ರೇಂಜರ್ಸ್ ತಂಡ ಪ್ರಥಮ ಸ್ಥಾನ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಬಕ್ರೀದ್ ಆಚರಣೆ

Suddi Udaya

ವಾಣಿ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ಸಾಧಕ ವಿದ್ಯಾರ್ಥಿಗಳಿಗೆ ಗೌರವ

Suddi Udaya

ಸವಣಾಲು: ಗುತ್ತಿನಬೈಲು ಸ.ಹಿ.ಪ್ರಾ.ಶಾಲೆಯಲ್ಲಿ ಉಚಿತ ಪುಸ್ತಕ ವಿತರಣಾ ಕಾರ್ಯಕ್ರಮ

Suddi Udaya
error: Content is protected !!