September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಳದಂಗಡಿ ಗ್ರಾ. ಪಂ. ನಲ್ಲಿ ಸಾಮಾಜಿಕ ಪರಿಶೋದನಾ ವಿಶೇಷ ಗ್ರಾಮ ಸಭೆ

ಅಳದಂಗಡಿ ಗ್ರಾಮ ಪಂಚಾಯತ್ ನ 2025-26 ನೇ ಸಾಲಿನ ಸಾಮಾಜಿಕ ಪರಿಶೋದನಾ ವಿಶೇಷ ಗ್ರಾಮ ಸಭೆಯ ಜು. 19ರಂದು ಅಳದಂಗಡಿ ಗ್ರಾಮ ಪಂಚಾಯತ್ ಸಭಾಭವನದಲ್ಲಿ ನಡೆಯಿತು.

2024-25 ನೇ ಸಾಲಿನ ಮಹತ್ಮಾಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಮತ್ತು 15 ನೇ ಹಣಕಾಸು ಯೋಜನೆ, 2020 ರಿಂದ 2024-25 ನೇ ರಾಜ್ಯ ಹಣಕಾಸು ಯೋಜನೆಯಲ್ಲಿ ತಾಲೂಕು ಪಂಚಾಯತ್ ಮತ್ತು ಜಿಲ್ಲಾ ಪಂಚಾಯತಿನಿಂದ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಅನುಷ್ಠಾನ ಗೊಂಡ ಕಾಮಗಾರಿಗಳ ಸಾಮಾಜಿಕ ಪರಿಶೋದನೆ ಮಾಡಲಾಯಿತು.

ಸಭೆಯ ಮಾರ್ಗದರ್ಶನ ಅಧಿಕಾರಿಯಾಗಿ ತಾಲೂಕು ಶಿಕ್ಷಣಾಧಿಕಾರಿ ರವರು ಕಾಮಗಾರಿಯ ಗುಣಮಟ್ಟವನ್ನು ಉತ್ತಮ ರೀತಿಯಲ್ಲಿ ಕಾಪಾಡಲು ಸರಕಾರ ಈ ಕಾರ್ಯಕ್ರಮವನ್ನು ಅನುಷ್ಠಾನ ಗೊಳಿಸಲಾಗಿದೆ ಎಂದರು. ಸಭೆಯಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರು, ಸದಸ್ಯರು ಉಪಸ್ಥಿತರಿದ್ದರು.

ಗ್ರಾಮ ಪಂಚಾಯತ್ ನ ಅಭಿವೃದ್ಧಿ ಅಧಿಕಾರಿ ಪೂರ್ಣಿಮ ಜೆ ಸ್ವಾಗತಿಸಿದರು. ಸಾಮಾಜಿಕ ಪರಿಶೋದನೆಯ ತಾಲೂಕು ಸಂಯೋಜಕ ರಾಜೀವ ಸಾಲಿಯಾನ್ ಸಾಮಾಜಿಕ ಪರಿಶೋದನೆ ಮೂಲ ಉದ್ದೇಶವನ್ನು ತಿಳಿಸಿದರು.

ಸಾಮಾಜಿಕ ಪರಿಶೋದನೆಯ ಸಂಪನ್ಮೂಲ ವ್ಯಕ್ತಿಗಳು ಸಾಮಾಜಿಕ ಪರಿಶೋದನೆಯ ವರದಿಯನ್ನು ಸಭೆಯಲ್ಲಿ ಮಂಡಿಸಿದರು. ಸಭೆಯಲ್ಲಿ ನರೇಗ ಯೋಜನೆಯ ಇಂಜಿನಿಯರ್ ಉಪಸ್ಥಿತರಿದ್ದರು. ಗ್ರಾಮ ಪಂಚಾಯತ್ ಲೆಕ್ಕ ಸಹಾಯಕರು, ಸಿಬ್ಬಂದಿವರ್ಗದವರು ಸಭೆಯಲ್ಲಿ ಹಾಜರಿದ್ದರು.

Related posts

ರಿಷಿಕಾ ಕುಂದೇಶ್ವರರಿಗೆ ಕುರಿಯ ವಿಠಲ ಶಾಸ್ತ್ರಿ ಪ್ರತಿಭಾ ಪುರಸ್ಕಾರ

Suddi Udaya

ಬೆಳ್ತಂಗಡಿ ವಕೀಲರ ಸಂಘದಿಂದ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಭೇಟಿ

Suddi Udaya

ಆರಂಬೋಡಿ: ಕುದುಂಬುಡ -ಕೊಮ್ಮಡ ರಸ್ತೆ ಬದಿಯ ತಡೆಗೋಡೆ ನಿರ್ಮಾಣಕ್ಕೆ ರೂ.1.00 ಕೋಟಿ ಅನುದಾನ: ಶಾಸಕ ಹರೀಶ್ ಪೂಂಜರಿಗೆ ಗ್ರಾಮಸ್ಥರಿಂದ ಅಭಿನಂದನೆ

Suddi Udaya

ಮುಂಡಾಜೆ ಹಾ.ಉ. ಸ. ಸಂಘದ ಅಧ್ಯಕ್ಷರಾಗಿ ಅನಂತ ಭಟ್ ಮಚ್ಚಿಮಲೆ 5 ನೇ ಬಾರಿ ಆಯ್ಕೆ : ಉಪಾಧ್ಯಕ್ಷರಾಗಿ ಜಯಂತ ಗೌಡ ಎಂ.ಅವಿರೋಧ ಆಯ್ಕೆ

Suddi Udaya

ಶಿರ್ಲಾಲು ಯುವವಾಹಿನಿ ಸಂಚಲನ ಸಮಿತಿಯಿಂದ ಸೇವಾ ಯೋಜನೆ ಹಸ್ತಾಂತರ

Suddi Udaya

ಗಣೇಶೋತ್ಸವಕ್ಕೆಂದು ಹೋದ ವ್ಯಕ್ತಿಯಮೃತ ದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ

Suddi Udaya
error: Content is protected !!