23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ರತ್ನ ಮಾನಸ ಜೀವನ-ಶಿಕ್ಷಣ ವಿದ್ಯಾರ್ಥಿ ನಿಲಯದಲ್ಲಿ ನೇಜಿ ನಾಟಿ ಕಾರ್ಯಕ್ರಮ

ಉಜಿರೆ: ಇಲ್ಲಿಯ ರತ್ನ ಮಾನಸ ಜೀವನ-ಶಿಕ್ಷಣ ವಿದ್ಯಾರ್ಥಿ ನಿಲಯದಲ್ಲಿ ವಿದ್ಯಾರ್ಥಿಗಳಿಂದ ಜು. 20ರಂದು ನೇಜಿ ನೆಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

ರತ್ನಮಾನಸದ ನಿಲಯ ಪಾಲಕರಾದ ಯತೀಶ್ ಕೆ ಬಳಂಜ ಇವರು ನೇಜಿ ನೆಡುವ ವಿಧಾನ ಹಾಗೂ ರತ್ನ ಮಾನಸದ ಹಿರಿಯ ವಿದ್ಯಾರ್ಥಿ ಉದ್ಯಮಿ ಜಗದೀಶ ಪ್ರಸಾದ್ ಇವರು ಭತ್ತದ ಕೃಷಿಯ ಬಗ್ಗೆ ಉತ್ತಮ ಮಾಹಿತಿ ನೀಡಿದರು.

ನಿಲಯದ ವಿದ್ಯಾರ್ಥಿಗಳೊಂದಿಗೆ ಉಜಿರೆಯ ಎಸ್ ಡಿ ಎಂ ಕಾಲೇಜು(ಸ್ವಾಯತ್ತ) ಸಸ್ಯಶಾಸ್ತ್ರ ವಿಭಾಗದ ವಿದ್ಯಾರ್ಥಿಗಳು ಉತ್ಸಾಹದಿಂದ ಜೊತೆಗೂಡಿ ನೇಜಿ ನಾಟಿ ಮಾಡಿ, ನಂತರ ಕೆಸರು ಗದ್ದೆಯಲ್ಲಿ ಆಟವಾಡಿ ಸಂಭ್ರಮಿಸಿದರು.
ಸಸ್ಯಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಪ್ರೊಫೆಸರ್ ಶಕುಂತಲಾ. ಬಿ, ಸಹಾಯಕ ಪ್ರಾಧ್ಯಾಪಕರಾದ ಭವ್ಯ ನಾಯಕ್ ಮತ್ತು ಮಂಜುಶ್ರೀ ಉಪಸ್ಥಿತರಿದ್ದರು. ಸಾಮಾಜಿಕ ಕಾರ್ಯಕರ್ತ ಶಿವಪ್ರಸಾದ್ ಮಲೆಬೆಟ್ಟು , ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಪ್ರಭಾಕರ ಹೆಗ್ಡೆ , ನಿಲಯದ ಶಿಕ್ಷಕರಾದ ರವಿಚಂದ್ರ ಹಾಗೂ ಉದಯರಾಜ್ ಮತ್ತು ವಿದ್ಯಾರ್ಥಿಗಳ ಪೋಷಕರು ಭಾಗವಹಿಸಿದ್ದರು.

Related posts

ಬೆಳ್ತಂಗಡಿ: ದೀಪಾವಳಿ ಹಬ್ಬದ ಪ್ರಯುಕ್ತ ಅಪ್ಸರಾ ಫ್ಯಾಶನ್ ಸೆಂಟರ್ ಹಾಗೂ ಮಿಷ್‌ಮಷ್ ಫ್ಯಾನ್ಸಿ & ಗಿಫ್ಟ್ ಸೆಂಟರಿನಲ್ಲಿ ಡಿಸ್ಕೌಂಟ್ ಸೇಲ್: ಪ್ರತಿ ಖರೀದಿಯ ಮೇಲೆ ಶೇ.20 ಡಿಸ್ಕೌಂಟ್

Suddi Udaya

ಕಲ್ಮಂಜ ಸರಕಾರಿ ಪ್ರೌಢಶಾಲಾ ಪ್ರಾರಂಭೋತ್ಸವ ಸಂಭ್ರಮ

Suddi Udaya

ವೇಣೂರು-ಪೆರ್ಮುಡ ಹೊನಲು ಬೆಳಕಿನ 33ನೇ ವರ್ಷದ ಸೂರ್ಯ-ಚಂದ್ರ ಜೋಡುಕರೆ ಬಯಲು ಕಂಬಳ

Suddi Udaya

ಫೆ 8:ಬಳಂಜ ಯುವ ಬಿಲ್ಲವ ವೇದಿಕೆಯಿಂದ ವಾರ್ಷಿಕ ಕ್ರೀಡಾಕೂಟ ಬ್ರಹ್ಮಶ್ರೀ-2026: ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆ ಹಾಗೂ ವಿವಿಧ ಸ್ಪರ್ಧೆಗಳು

Suddi Udaya

ಉಜಿರೆ ಎಸ್‌.ಡಿ.ಎಂ ಸಿ.ಬಿ.ಎಸ್.ಇ ಶಾಲೆಯ ವಿದ್ಯಾರ್ಥಿಗಳ ಪೋಷಕರಿಗೆ “ಔಷಧವಾಗಿ ಆಹಾರ” ಕಾರ್ಯಾಗಾರ

Suddi Udaya

ಕಾಯರ್ತಡ್ಕ : ಪುತ್ಯೆ ನಿವಾಸಿ ಮೋಹನ ಗೌಡ ಹೃದಯಾಘಾತದಿಂದ ನಿಧನ

Suddi Udaya
error: Content is protected !!