July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ತೆಂಕಕಾರಂದೂರು: ವರ ಮಹಾಲಕ್ಷ್ಮಿ ಪೂಜಾ ಸಮಿತಿ ರಚನೆ, ಅಧ್ಯಕ್ಷರಾಗಿ ರೂಪಲತಾ ಆಯ್ಕೆ

ತೆಂಕಕಾರಂದೂರು: ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ತೆಂಕಕಾರಂದೂರು ಇದರ ವತಿಯಿಂದ ವರ ಮಹಾಲಕ್ಷ್ಮಿ ಪೂಜಾ ಸಮಿತಿಯನ್ನು ಕ್ಷೇತ್ರದ ಆಡಳಿತ ಮೊಕ್ತೇಸರರಾದ ಕೆ‌.ಕೃಷ್ಣ ಸಂಪಿಗೆತ್ತಾಯ ಇವರ ಸಮ್ಮುಖದಲ್ಲಿ ದೇವಸ್ಥಾನದ ವಠಾರದಲ್ಲಿ ಜು. 20 ರಂದು ರಚಿಸಲಾಯಿತು.

ವರ ಮಹಾಲಕ್ಷ್ಮಿ ಸಮಿತಿಯ ನೂತನ ಅಧ್ಯಕ್ಷರಾಗಿ ರೂಪಲತಾ ರಮಾನಂದ ಇವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.

ಪ್ರಧಾನ ಕಾರ್ಯದರ್ಶಿಯಾಗಿ ಚೈತ್ರ ಪ್ರವೀಣ್, ಹಾಗೂ ರೂಪ ಶುಭಕರ ಬದ್ಯಾರು, ಜೊತೆ ಕಾರ್ಯದರ್ಶಿಯಾಗಿ
ಗೀತಾ‌ ಬದ್ಯಾರು, ಕೋಶಾಧಿಕಾರಿಯಾಗಿ ಪ್ರಮೀಳಾ ವಿದ್ಯಾನಂದ, ಉಪಾಧ್ಯಕ್ಷರಾಗಿ ಲೀಲಾವತಿ ಜಗದೀಶ್ ಕೆಮ್ಮಟೆ ಆಯ್ಕೆಯಾದರು.

ವರ ಮಹಾಲಕ್ಷ್ಮಿ ಪೂಜೆಯು‌ ಆ.8 ರಂದು ಬೆಳಿಗ್ಗೆ 9ಗಂಟೆಗೆ ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ನಡೆಯಲಿದೆ ಎಂದು ಸಂಘಟಕರು ತಿಳಿಸಿದರು.

Related posts

ಉಜಿರೆ: ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶ ಪ್ರಕರಣ: ತಿಮರೋಡಿ ಗಡಿಪಾರು ಬಗ್ಗೆ ಪೊಲೀಸರಿಂದ ಮೈಕ್ ಮೂಲಕ ಪ್ರಕಟಣೆ

Suddi Udaya

ಮನೆಯ ಅಂಗಳದಲ್ಲಿ ಆಟವಾಡುತ್ತಿದ್ದ ಮಗು ತೋಟದ ಕೆರೆಗೆ ಬಿದ್ದು ಮೃತ್ಯು

Suddi Udaya

ಬಿಜೆಪಿ ಶಿರ್ಲಾಲು ಬೂತ್ ಸಂಖ್ಯೆ 9ರ ಅಧ್ಯಕ್ಷರಾಗಿ ವಿಜಯಕುಮಾರ್, ಕಾರ್ಯದರ್ಶಿಯಾಗಿ ರಮೇಶ್ ಎನ್ ಆಯ್ಕೆ

Suddi Udaya

ವೃಕ್ಷಮಾತೆ, ಶತಾಯುಷಿ ಸಾಲುಮರದ ತಿಮ್ಮಕ್ಕ ವಿಧಿವಶ

Suddi Udaya

ಉಜಿರೆ: ಮಗ ಆತ್ಮಹತ್ಯೆ ಮಾಡಿಕೊಂಡ 13 ದಿನಕ್ಕೆ ತಂದೆ ಕೂಡ ನೇಣುಬಿಗಿದು ಆತ್ಮಹತ್ಯೆ

Suddi Udaya

ಬೆಳ್ತಂಗಡಿ ನಗರದಲ್ಲಿ ವಿದ್ಯುತ್ ಕಣ್ಣ ಮುಚ್ಚಾಲೆ: ರಾತ್ರೋ ರಾತ್ರಿ ಮೆಸ್ಕಾಂ ಕಛೇರಿಗೆ ಮುತ್ತಿಗೆ ಹಾಕಿದ ನಾಗರೀಕರು

Suddi Udaya
error: Content is protected !!