37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಳದಂಗಡಿ ಗ್ರಾ. ಪಂ. ನಲ್ಲಿ ಸಾಮಾಜಿಕ ಪರಿಶೋದನಾ ವಿಶೇಷ ಗ್ರಾಮ ಸಭೆ

ಅಳದಂಗಡಿ ಗ್ರಾಮ ಪಂಚಾಯತ್ ನ 2025-26 ನೇ ಸಾಲಿನ ಸಾಮಾಜಿಕ ಪರಿಶೋದನಾ ವಿಶೇಷ ಗ್ರಾಮ ಸಭೆಯ ಜು. 19ರಂದು ಅಳದಂಗಡಿ ಗ್ರಾಮ ಪಂಚಾಯತ್ ಸಭಾಭವನದಲ್ಲಿ ನಡೆಯಿತು.

2024-25 ನೇ ಸಾಲಿನ ಮಹತ್ಮಾಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಮತ್ತು 15 ನೇ ಹಣಕಾಸು ಯೋಜನೆ, 2020 ರಿಂದ 2024-25 ನೇ ರಾಜ್ಯ ಹಣಕಾಸು ಯೋಜನೆಯಲ್ಲಿ ತಾಲೂಕು ಪಂಚಾಯತ್ ಮತ್ತು ಜಿಲ್ಲಾ ಪಂಚಾಯತಿನಿಂದ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಅನುಷ್ಠಾನ ಗೊಂಡ ಕಾಮಗಾರಿಗಳ ಸಾಮಾಜಿಕ ಪರಿಶೋದನೆ ಮಾಡಲಾಯಿತು.

ಸಭೆಯ ಮಾರ್ಗದರ್ಶನ ಅಧಿಕಾರಿಯಾಗಿ ತಾಲೂಕು ಶಿಕ್ಷಣಾಧಿಕಾರಿ ರವರು ಕಾಮಗಾರಿಯ ಗುಣಮಟ್ಟವನ್ನು ಉತ್ತಮ ರೀತಿಯಲ್ಲಿ ಕಾಪಾಡಲು ಸರಕಾರ ಈ ಕಾರ್ಯಕ್ರಮವನ್ನು ಅನುಷ್ಠಾನ ಗೊಳಿಸಲಾಗಿದೆ ಎಂದರು. ಸಭೆಯಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರು, ಸದಸ್ಯರು ಉಪಸ್ಥಿತರಿದ್ದರು.

ಗ್ರಾಮ ಪಂಚಾಯತ್ ನ ಅಭಿವೃದ್ಧಿ ಅಧಿಕಾರಿ ಪೂರ್ಣಿಮ ಜೆ ಸ್ವಾಗತಿಸಿದರು. ಸಾಮಾಜಿಕ ಪರಿಶೋದನೆಯ ತಾಲೂಕು ಸಂಯೋಜಕ ರಾಜೀವ ಸಾಲಿಯಾನ್ ಸಾಮಾಜಿಕ ಪರಿಶೋದನೆ ಮೂಲ ಉದ್ದೇಶವನ್ನು ತಿಳಿಸಿದರು.

ಸಾಮಾಜಿಕ ಪರಿಶೋದನೆಯ ಸಂಪನ್ಮೂಲ ವ್ಯಕ್ತಿಗಳು ಸಾಮಾಜಿಕ ಪರಿಶೋದನೆಯ ವರದಿಯನ್ನು ಸಭೆಯಲ್ಲಿ ಮಂಡಿಸಿದರು. ಸಭೆಯಲ್ಲಿ ನರೇಗ ಯೋಜನೆಯ ಇಂಜಿನಿಯರ್ ಉಪಸ್ಥಿತರಿದ್ದರು. ಗ್ರಾಮ ಪಂಚಾಯತ್ ಲೆಕ್ಕ ಸಹಾಯಕರು, ಸಿಬ್ಬಂದಿವರ್ಗದವರು ಸಭೆಯಲ್ಲಿ ಹಾಜರಿದ್ದರು.

Related posts

ಮೆಣಸಿನ ವ್ಯಾಪಾರಿಯ ಬೈಕ್ ಕಳವು

Suddi Udaya

ವಾಲಿಬಾಲ್ ಪಂದ್ಯಾಟದಲ್ಲಿ ಸತತ 9ನೇ ಬಾರಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ಬಂದಾರು ಶಾಲೆಯ ವಿದ್ಯಾರ್ಥಿಗಳಿಗೆ ಬೆಳ್ತಂಗಡಿಯಲ್ಲಿ ಅದ್ದೂರಿ ಸ್ವಾಗತ

Suddi Udaya

ಉಜಿರೆ ಶಾಂತಿವನದಲ್ಲಿ “ಅತಿಸ್ಥೂಲ ನಿರ್ವಹಣೆಗೆ ಯೋಗ ಮತ್ತು ನೈಸರ್ಗಿಕ ಚಿಕಿತ್ಸೆ ಕಾರ್ಯಾಗಾರ ಸಂಪನ್ನ

Suddi Udaya

ಉಜಿರೆ:ಎಸ್.ಡಿ.ಎಮ್ ಆಂ.ಮಾ. ಶಾಲೆಯಲ್ಲಿ ಕಲಾ ಸಿಂಧು ಸಾಂಸ್ಕೃತಿಕ ಸಂಘದ ವತಿಯಿಂದ ‘ವೃಕ್ಷಾಬಂಧನ’ ಕಾರ್ಯಕ್ರಮ

Suddi Udaya

ಉಜಿರೆ : ಕರಿಗಂಧ ಸೇವಾ ಟ್ರಸ್ಟ್ ಇದರ ಆಶ್ರಯದಲ್ಲಿ ಅಣಬೆ ಬೇಸಾಯ ಪ್ರಾತ್ಯಕ್ಷಿಕೆಯ ತರಬೇತಿ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 30ನೇ ವರ್ಷದ ಜ್ಞಾನ ದರ್ಶಿನಿ ಮತ್ತು ಜ್ಞಾನ ವರ್ಷಿಣಿ ನೈತಿಕ ಮೌಲ್ಯಧಾರಿತ ಪುಸ್ತಕ ಲೋಕಾರ್ಪಣೆ,ಅಂಚೆ-ಕುಂಚ ವಿಜೇತರಿಗೆ ಪುರಸ್ಕಾರ

Suddi Udaya
error: Content is protected !!