25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಳದಂಗಡಿ ಗ್ರಾ. ಪಂ. ನಲ್ಲಿ ಸಾಮಾಜಿಕ ಪರಿಶೋದನಾ ವಿಶೇಷ ಗ್ರಾಮ ಸಭೆ

ಅಳದಂಗಡಿ ಗ್ರಾಮ ಪಂಚಾಯತ್ ನ 2025-26 ನೇ ಸಾಲಿನ ಸಾಮಾಜಿಕ ಪರಿಶೋದನಾ ವಿಶೇಷ ಗ್ರಾಮ ಸಭೆಯ ಜು. 19ರಂದು ಅಳದಂಗಡಿ ಗ್ರಾಮ ಪಂಚಾಯತ್ ಸಭಾಭವನದಲ್ಲಿ ನಡೆಯಿತು.

2024-25 ನೇ ಸಾಲಿನ ಮಹತ್ಮಾಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಮತ್ತು 15 ನೇ ಹಣಕಾಸು ಯೋಜನೆ, 2020 ರಿಂದ 2024-25 ನೇ ರಾಜ್ಯ ಹಣಕಾಸು ಯೋಜನೆಯಲ್ಲಿ ತಾಲೂಕು ಪಂಚಾಯತ್ ಮತ್ತು ಜಿಲ್ಲಾ ಪಂಚಾಯತಿನಿಂದ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಅನುಷ್ಠಾನ ಗೊಂಡ ಕಾಮಗಾರಿಗಳ ಸಾಮಾಜಿಕ ಪರಿಶೋದನೆ ಮಾಡಲಾಯಿತು.

ಸಭೆಯ ಮಾರ್ಗದರ್ಶನ ಅಧಿಕಾರಿಯಾಗಿ ತಾಲೂಕು ಶಿಕ್ಷಣಾಧಿಕಾರಿ ರವರು ಕಾಮಗಾರಿಯ ಗುಣಮಟ್ಟವನ್ನು ಉತ್ತಮ ರೀತಿಯಲ್ಲಿ ಕಾಪಾಡಲು ಸರಕಾರ ಈ ಕಾರ್ಯಕ್ರಮವನ್ನು ಅನುಷ್ಠಾನ ಗೊಳಿಸಲಾಗಿದೆ ಎಂದರು. ಸಭೆಯಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರು, ಸದಸ್ಯರು ಉಪಸ್ಥಿತರಿದ್ದರು.

ಗ್ರಾಮ ಪಂಚಾಯತ್ ನ ಅಭಿವೃದ್ಧಿ ಅಧಿಕಾರಿ ಪೂರ್ಣಿಮ ಜೆ ಸ್ವಾಗತಿಸಿದರು. ಸಾಮಾಜಿಕ ಪರಿಶೋದನೆಯ ತಾಲೂಕು ಸಂಯೋಜಕ ರಾಜೀವ ಸಾಲಿಯಾನ್ ಸಾಮಾಜಿಕ ಪರಿಶೋದನೆ ಮೂಲ ಉದ್ದೇಶವನ್ನು ತಿಳಿಸಿದರು.

ಸಾಮಾಜಿಕ ಪರಿಶೋದನೆಯ ಸಂಪನ್ಮೂಲ ವ್ಯಕ್ತಿಗಳು ಸಾಮಾಜಿಕ ಪರಿಶೋದನೆಯ ವರದಿಯನ್ನು ಸಭೆಯಲ್ಲಿ ಮಂಡಿಸಿದರು. ಸಭೆಯಲ್ಲಿ ನರೇಗ ಯೋಜನೆಯ ಇಂಜಿನಿಯರ್ ಉಪಸ್ಥಿತರಿದ್ದರು. ಗ್ರಾಮ ಪಂಚಾಯತ್ ಲೆಕ್ಕ ಸಹಾಯಕರು, ಸಿಬ್ಬಂದಿವರ್ಗದವರು ಸಭೆಯಲ್ಲಿ ಹಾಜರಿದ್ದರು.

Related posts

ಹಿಂದೂ ಸಂಗಮ ಆಯೋಜನಾ ಸಮಿತಿ ಉರುವಾಲು, ಕಣಿಯೂರು, ಬಂದಾರು ಗ್ರಾಮಗಳನ್ನೊಳಗೊಂಡ ಬಂದಾರು ಮಂಡಲದ ಹಿಂದೂ ಸಂಗಮ ಕಾರ್ಯಕ್ರಮ

Suddi Udaya

ಕೂಕ್ರಬೆಟ್ಟು ಸರ್ಕಾರಿ ಶಾಲೆ: ಸ್ಮಾರ್ಟ್‌ ಕ್ಲಾಸ್‌ ಲೋಕಾರ್ಪಣೆ

Suddi Udaya

ಉಜಿರೆ: ಮಲೆಬೆಟ್ಟುನಲ್ಲಿ ರೈತರಿಗೆ ಹೊರ ಆವರಣ ಕೃಷಿ ತರಬೇತಿ

Suddi Udaya

ಶಿರ್ಲಾಲು: ವಿದ್ಯುತ್ ಅವಘಡದಿಂದ ಹಿತ್ತಿಲು ಪರಿಸರದಲ್ಲಿ ಬೆಂಕಿ

Suddi Udaya

ನಯನಾಡು ಸರಕಾರಿ ಪ್ರೌಢಶಾಲೆಗೆ ಯಸ್ಕಾವ ಕಂಪೆನಿಯ ವತಿಯಿಂದ ಉಪಕರಣಗಳ ಹಸ್ತಾಂತರ

Suddi Udaya

ಭಜನಾ ಪರಿಷತ್ತಿನ ರಾಜ್ಯಾಧ್ಯಕ್ಷರಿಗೆ ಕೊಯ್ಯೂರಿನ ಶ್ರೀ ಕೃಷ್ಣ ಭಜನಾ ಮಂಡಳಿಯಲ್ಲಿ ಅಭಿನಂದನೆ

Suddi Udaya
error: Content is protected !!