22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಳದಂಗಡಿ ಗ್ರಾ. ಪಂ. ನಲ್ಲಿ ಸಾಮಾಜಿಕ ಪರಿಶೋದನಾ ವಿಶೇಷ ಗ್ರಾಮ ಸಭೆ

ಅಳದಂಗಡಿ ಗ್ರಾಮ ಪಂಚಾಯತ್ ನ 2025-26 ನೇ ಸಾಲಿನ ಸಾಮಾಜಿಕ ಪರಿಶೋದನಾ ವಿಶೇಷ ಗ್ರಾಮ ಸಭೆಯ ಜು. 19ರಂದು ಅಳದಂಗಡಿ ಗ್ರಾಮ ಪಂಚಾಯತ್ ಸಭಾಭವನದಲ್ಲಿ ನಡೆಯಿತು.

2024-25 ನೇ ಸಾಲಿನ ಮಹತ್ಮಾಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಮತ್ತು 15 ನೇ ಹಣಕಾಸು ಯೋಜನೆ, 2020 ರಿಂದ 2024-25 ನೇ ರಾಜ್ಯ ಹಣಕಾಸು ಯೋಜನೆಯಲ್ಲಿ ತಾಲೂಕು ಪಂಚಾಯತ್ ಮತ್ತು ಜಿಲ್ಲಾ ಪಂಚಾಯತಿನಿಂದ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಅನುಷ್ಠಾನ ಗೊಂಡ ಕಾಮಗಾರಿಗಳ ಸಾಮಾಜಿಕ ಪರಿಶೋದನೆ ಮಾಡಲಾಯಿತು.

ಸಭೆಯ ಮಾರ್ಗದರ್ಶನ ಅಧಿಕಾರಿಯಾಗಿ ತಾಲೂಕು ಶಿಕ್ಷಣಾಧಿಕಾರಿ ರವರು ಕಾಮಗಾರಿಯ ಗುಣಮಟ್ಟವನ್ನು ಉತ್ತಮ ರೀತಿಯಲ್ಲಿ ಕಾಪಾಡಲು ಸರಕಾರ ಈ ಕಾರ್ಯಕ್ರಮವನ್ನು ಅನುಷ್ಠಾನ ಗೊಳಿಸಲಾಗಿದೆ ಎಂದರು. ಸಭೆಯಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರು, ಸದಸ್ಯರು ಉಪಸ್ಥಿತರಿದ್ದರು.

ಗ್ರಾಮ ಪಂಚಾಯತ್ ನ ಅಭಿವೃದ್ಧಿ ಅಧಿಕಾರಿ ಪೂರ್ಣಿಮ ಜೆ ಸ್ವಾಗತಿಸಿದರು. ಸಾಮಾಜಿಕ ಪರಿಶೋದನೆಯ ತಾಲೂಕು ಸಂಯೋಜಕ ರಾಜೀವ ಸಾಲಿಯಾನ್ ಸಾಮಾಜಿಕ ಪರಿಶೋದನೆ ಮೂಲ ಉದ್ದೇಶವನ್ನು ತಿಳಿಸಿದರು.

ಸಾಮಾಜಿಕ ಪರಿಶೋದನೆಯ ಸಂಪನ್ಮೂಲ ವ್ಯಕ್ತಿಗಳು ಸಾಮಾಜಿಕ ಪರಿಶೋದನೆಯ ವರದಿಯನ್ನು ಸಭೆಯಲ್ಲಿ ಮಂಡಿಸಿದರು. ಸಭೆಯಲ್ಲಿ ನರೇಗ ಯೋಜನೆಯ ಇಂಜಿನಿಯರ್ ಉಪಸ್ಥಿತರಿದ್ದರು. ಗ್ರಾಮ ಪಂಚಾಯತ್ ಲೆಕ್ಕ ಸಹಾಯಕರು, ಸಿಬ್ಬಂದಿವರ್ಗದವರು ಸಭೆಯಲ್ಲಿ ಹಾಜರಿದ್ದರು.

Related posts

ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ : ಆರೋಪಿಗಳ ವಿರುದ್ಧ ಕಠಿಣ ಕ್ರಮಕೈಗೊಳ್ಳುವಂತೆ ವಿ.ಪ. ಸದಸ್ಯ ಪ್ರತಾಪ್ ಸಿಂಹ ನಾಯಕ್ ಆಗ್ರಹ

Suddi Udaya

ಧರ್ಮಸ್ಥಳ : ನಡುಗುಡ್ಡೆಕುಡುಮ ಶ್ರೀ ಟೈಗರ್ಸ್ ವತಿಯಿಂದ ಬಡ ಕುಟುಂಬಗಳಿಗೆ ಆರ್ಥಿಕ ಸಹಾಯಾರ್ಥ ಹಾಗೂ ವಿದ್ಯಾನಿಧಿ ವಿತರಣೆ

Suddi Udaya

ಧರ್ಮಸ್ಥಳ : ನೇರ್ತನೆಯಲ್ಲಿ ದನದ ಕರುವಿನ ಮೇಲೆ ಚಿರತೆ ದಾಳಿ

Suddi Udaya

ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ಮಹಾಕಾಳಿ ಅಮ್ಮನವರ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾಗಿ ಕೆ. ರಾಧಾಕೃಷ್ಣ ಆಯ್ಕೆ

Suddi Udaya

ಬರೆಂಗಾಯ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

Suddi Udaya

ವಿಶ್ವ ಹಿಂದೂ ಪರಿಷತ್ ಭಜರಂಗದಳ ಮಚ್ಚಿನ ಘಟಕ ಹಾಗೂ ವಿವಿಧ ಸಂಘಗಳಿಂದ ರಾಮ ದೀಪೋತ್ಸವ

Suddi Udaya
error: Content is protected !!