22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜು

ಉಜಿರೆ ಎಸ್.ಡಿ.ಎಮ್ ಬಿ. ವೋಕ್ ಡಿಜಿಟಲ್ ಮೀಡಿಯಾ ಮತ್ತು ಫಿಲ್ಮ್ ಮೇಕಿಂಗ್ ವಿಭಾಗದ ಲೂಮೋಸ್ ವಿದ್ಯಾರ್ಥಿ ಸಂಘದ ಶೈಕ್ಷಣಿಕ ವರ್ಷದ ಚಟುವಟಿಕೆಗಳಿಗೆ ಚಾಲನೆ

ಉಜಿರೆ : “ಯಾವ ವಿಶ್ವವಿದ್ಯಾಲಯವೂ ಮಾತನಾಡುವುದನ್ನು ಕಲಿಸುವುದಿಲ್ಲ. ಅದು ನಿರಂತರ ಅಭ್ಯಾಸದಿಂದ ಮಾತ್ರ ಬರಲು ಸಾಧ್ಯ. ಆ ಕೌಶಲ್ಯವನ್ನು ಬಳಸಿ ಪ್ರತಿಯೊಬ್ಬರೂ ತಮ್ಮ ಐಡೆಂಟಿಟಿಯನ್ನ ಬೆಳೆಸಿಕೊಳ್ಳಬೇಕು” ಎಂದು ರೇಡಿಯೋ ಸಾರಂಗ್‌ನ ಮುಖ್ಯ ಕಾರ್ಯಕ್ರಮ ನಿರ್ಮಾಪಕ ಆರ್‌ಜೆ ಅಭಿಷೇಕ್ ಶೆಟ್ಟಿ ಹೇಳಿದರು.

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಕಾಲೇಜು ಉಜಿರೆ ಇದರ ಬಿ. ವೋಕ್ ಡಿಜಿಟಲ್ ಮೀಡಿಯಾ ಮತ್ತು ಫಿಲ್ಮ್ ಮೇಕಿಂಗ್ ವಿಭಾಗದ ಲೂಮೋಸ್ ವಿದ್ಯಾರ್ಥಿ ಸಂಘದ ಶೈಕ್ಷಣಿಕ ವರ್ಷದ ಚಟುವಟಿಕೆಗಳಿಗೆ ಚಾಲನೆ ನೀಡಿ ಮಾತನಾಡಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ವಿಭಾಗದ ಮುಖ್ಯಸ್ಥ ಮಾಧವ ಹೊಳ್ಳ, “ಪಠ್ಯೇತರ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳು ತೊಡಗಿಕೊಂಡಷ್ಟು ಅವರ ವ್ಯಕ್ತಿತ್ವ ವಿಕಸನ ಸಾಧ್ಯ. ಇದಕ್ಕಾಗಿ ಬೇಕಾದಂತೆ ವಿದ್ಯಾರ್ಥಿ ಸಂಘಗಳು ರೂಪುಗೊಳ್ಳಬೇಕು. ತಮ್ಮ ಕೌಶಲ್ಯಗಳನ್ನು ಪ್ರಸ್ತುತಪಡಿಸಲು ವಿದ್ಯಾರ್ಥಿಗಳು ಇಂತಹ ವೇದಿಕೆಗಳನ್ನು ಬಳಸಬೇಕು” ಎಂದರು.

ಸಹಾಯಕ ಪ್ರಾಧ್ಯಾಪಕ ಇಂದುಧರ ಕಿಣಿ ಲೂಮೋಸ್ ವಿದ್ಯಾರ್ಥಿ ಸಂಘದ 2024-25ನೇ ಸಾಲಿನ ವಾರ್ಷಿಕ ವರದಿ ವಾಚಿಸಿ, ನೂತನ ಪದಾಧಿಕಾರಿಗಳಿಗೆ ಪ್ರಮಾಣವಚನ ಬೋಧಿಸಿದರು. ಲುಮೋಸ್ ವಿದ್ಯಾರ್ಥಿ ಸಂಘದ 2025-26 ನೇ ಸಾಲಿನ ಅಧ್ಯಕ್ಷರಾಗಿ ಅಂಕಿತಾ, ಕಾರ್ಯದರ್ಶಿಯಾಗಿ ಪವನ್ ಕುಮಾರ್, ದ್ವಿತೀಯ ಹಾಗೂ ಪ್ರಥಮ ವರ್ಷದ ವಿದ್ಯಾರ್ಥಿ ಪ್ರತಿನಿಧಿಯಾಗಿ ಆಶಿಕಾ ಮತ್ತು ಲುಬ್ನಾ ಮರಿಯಮ್ ಪ್ರಮಾಣವಚನ ಸ್ವೀಕರಿಸಿದರು.

ಅಂತಿಮ ವರ್ಷದ ವಿದ್ಯಾರ್ಥಿನಿ ರಶ್ಮಿ ಕಾರ್ಯಕ್ರಮವನ್ನು ನಿರೂಪಿಸಿದರು. ವಿದ್ಯಾರ್ಥಿನಿ ಅಕ್ಷಿತಾ ಅತಿಥಿಗಳ ಪರಿಚಯ ಮಾಡಿಕೊಟ್ಟರು. ಸಹಾಯಕ ಪ್ರಾಧ್ಯಾಕಪರಾದ ಅಶ್ವಿನಿ ಜೈನ್ ಸ್ವಾಗತಿಸಿ, ತೇಜಸ್ವಿನಿ ಆರ್ ಎಸ್ ವಂದಿಸಿದರು.

Related posts

ಉರುವಾಲು: ಶ್ರೀ ಭಾರತೀ ವಿದ್ಯಾಸಂಸ್ಥೆಯಲ್ಲಿ ವನಮಹೋತ್ಸವ ಮತ್ತು ಸಸಿ ವಿತರಣಾ ಕಾರ್ಯಕ್ರಮ

Suddi Udaya

ಕುರಾಯ ಶ್ರೀ ಸದಾಶಿವ ದೇವಸ್ಥಾನ ಪ್ರತಿಷ್ಠಾ ಮಹೋತ್ಸವ ಹಾಗೂ ವಾರ್ಷಿಕ ಜಾತ್ರೋತ್ಸವಕ್ಕೆ ನವಶಕ್ತಿ ಶಶಿಧರ ಶೆಟ್ಟಿ ಬರೋಡ ಭೇಟಿ

Suddi Udaya

ಅಶಕ್ತರ ಪಾಲಿನ ಆಶಾಕಿರಣ ದೀಪಕ್ ಜಿ. ಮಂಗಳೂರು ಪ್ರೆಸ್ ಕ್ಲಬ್ ವಾರ್ಷಿಕ ಪ್ರಶಸ್ತಿಗೆ ಆಯ್ಕೆ

Suddi Udaya

ಕಾನರ್ಪ ಕೋಡಿಯಾಲ್ ಬೈಲ್ ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಕಾನರ್ಪ ಪ್ರೀಮಿಯರ್ ಲೀಗ್ – 2024 ಕ್ರಿಕೇಟ್ ಪಂದ್ಯಾಟ

Suddi Udaya

ಚೈತನ್ಯ ಸಂಜೀವಿನಿ ಮಹಿಳಾ ಒಕ್ಕೂಟ ಸುಲ್ಕೇರಿ ಗ್ರಾ.ಪಂ. ಸಹಭಾಗಿತ್ವದಲ್ಲಿ ಚೈತನ್ಯ ಹಾಳೆ ತಟ್ಟೆ ಉತ್ಪಾದನೆಯ ಉದ್ಘಾಟನೆ

Suddi Udaya

ನಾವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಂಭ್ರಮ: ವಿವಿಧ ಡೊಳ್ಳು ಕುಣಿತ, ಕುಣಿತಾ ಭಜನೆ ಹಾಗೂ ಸಾವಿರಾರು ಭಕ್ತರ ಕೂಡುವಿಕೆಯೊಂದಿಗೆ ವೈಭವದ ಹಸಿರುವಾಣಿ ಮೆರವಣಿಗೆ

Suddi Udaya
error: Content is protected !!