September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜು

ಉಜಿರೆ ಎಸ್.ಡಿ.ಎಮ್ ಬಿ. ವೋಕ್ ಡಿಜಿಟಲ್ ಮೀಡಿಯಾ ಮತ್ತು ಫಿಲ್ಮ್ ಮೇಕಿಂಗ್ ವಿಭಾಗದ ಲೂಮೋಸ್ ವಿದ್ಯಾರ್ಥಿ ಸಂಘದ ಶೈಕ್ಷಣಿಕ ವರ್ಷದ ಚಟುವಟಿಕೆಗಳಿಗೆ ಚಾಲನೆ

ಉಜಿರೆ : “ಯಾವ ವಿಶ್ವವಿದ್ಯಾಲಯವೂ ಮಾತನಾಡುವುದನ್ನು ಕಲಿಸುವುದಿಲ್ಲ. ಅದು ನಿರಂತರ ಅಭ್ಯಾಸದಿಂದ ಮಾತ್ರ ಬರಲು ಸಾಧ್ಯ. ಆ ಕೌಶಲ್ಯವನ್ನು ಬಳಸಿ ಪ್ರತಿಯೊಬ್ಬರೂ ತಮ್ಮ ಐಡೆಂಟಿಟಿಯನ್ನ ಬೆಳೆಸಿಕೊಳ್ಳಬೇಕು” ಎಂದು ರೇಡಿಯೋ ಸಾರಂಗ್‌ನ ಮುಖ್ಯ ಕಾರ್ಯಕ್ರಮ ನಿರ್ಮಾಪಕ ಆರ್‌ಜೆ ಅಭಿಷೇಕ್ ಶೆಟ್ಟಿ ಹೇಳಿದರು.

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಕಾಲೇಜು ಉಜಿರೆ ಇದರ ಬಿ. ವೋಕ್ ಡಿಜಿಟಲ್ ಮೀಡಿಯಾ ಮತ್ತು ಫಿಲ್ಮ್ ಮೇಕಿಂಗ್ ವಿಭಾಗದ ಲೂಮೋಸ್ ವಿದ್ಯಾರ್ಥಿ ಸಂಘದ ಶೈಕ್ಷಣಿಕ ವರ್ಷದ ಚಟುವಟಿಕೆಗಳಿಗೆ ಚಾಲನೆ ನೀಡಿ ಮಾತನಾಡಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ವಿಭಾಗದ ಮುಖ್ಯಸ್ಥ ಮಾಧವ ಹೊಳ್ಳ, “ಪಠ್ಯೇತರ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳು ತೊಡಗಿಕೊಂಡಷ್ಟು ಅವರ ವ್ಯಕ್ತಿತ್ವ ವಿಕಸನ ಸಾಧ್ಯ. ಇದಕ್ಕಾಗಿ ಬೇಕಾದಂತೆ ವಿದ್ಯಾರ್ಥಿ ಸಂಘಗಳು ರೂಪುಗೊಳ್ಳಬೇಕು. ತಮ್ಮ ಕೌಶಲ್ಯಗಳನ್ನು ಪ್ರಸ್ತುತಪಡಿಸಲು ವಿದ್ಯಾರ್ಥಿಗಳು ಇಂತಹ ವೇದಿಕೆಗಳನ್ನು ಬಳಸಬೇಕು” ಎಂದರು.

ಸಹಾಯಕ ಪ್ರಾಧ್ಯಾಪಕ ಇಂದುಧರ ಕಿಣಿ ಲೂಮೋಸ್ ವಿದ್ಯಾರ್ಥಿ ಸಂಘದ 2024-25ನೇ ಸಾಲಿನ ವಾರ್ಷಿಕ ವರದಿ ವಾಚಿಸಿ, ನೂತನ ಪದಾಧಿಕಾರಿಗಳಿಗೆ ಪ್ರಮಾಣವಚನ ಬೋಧಿಸಿದರು. ಲುಮೋಸ್ ವಿದ್ಯಾರ್ಥಿ ಸಂಘದ 2025-26 ನೇ ಸಾಲಿನ ಅಧ್ಯಕ್ಷರಾಗಿ ಅಂಕಿತಾ, ಕಾರ್ಯದರ್ಶಿಯಾಗಿ ಪವನ್ ಕುಮಾರ್, ದ್ವಿತೀಯ ಹಾಗೂ ಪ್ರಥಮ ವರ್ಷದ ವಿದ್ಯಾರ್ಥಿ ಪ್ರತಿನಿಧಿಯಾಗಿ ಆಶಿಕಾ ಮತ್ತು ಲುಬ್ನಾ ಮರಿಯಮ್ ಪ್ರಮಾಣವಚನ ಸ್ವೀಕರಿಸಿದರು.

ಅಂತಿಮ ವರ್ಷದ ವಿದ್ಯಾರ್ಥಿನಿ ರಶ್ಮಿ ಕಾರ್ಯಕ್ರಮವನ್ನು ನಿರೂಪಿಸಿದರು. ವಿದ್ಯಾರ್ಥಿನಿ ಅಕ್ಷಿತಾ ಅತಿಥಿಗಳ ಪರಿಚಯ ಮಾಡಿಕೊಟ್ಟರು. ಸಹಾಯಕ ಪ್ರಾಧ್ಯಾಕಪರಾದ ಅಶ್ವಿನಿ ಜೈನ್ ಸ್ವಾಗತಿಸಿ, ತೇಜಸ್ವಿನಿ ಆರ್ ಎಸ್ ವಂದಿಸಿದರು.

Related posts

ಉತ್ತರಾಖಂಡ ಹ್ರಾಸಿಕೇಶದಲ್ಲಿ ಶ್ರೀರಾಮ ಕ್ಷೇತ್ರ ಮಹಾ ಸಂಸ್ಥಾನದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಂದ ಗಂಗಪೂಜೆ

Suddi Udaya

ಪುತ್ತಿಲ ಪರಿವಾರದ ಮುಖ್ಯಸ್ಥ ಅರುಣ್‌ ಕುಮಾ‌ರ್ ಪುತ್ತಿಲ ಬಿಜೆಪಿ ಪಕ್ಷಕ್ಕೆ ಸೇರ್ಪಡೆ

Suddi Udaya

ಪತಂಜಲಿ ಯೋಗ ಕೇಂದ್ರ: ಪರಶುರಾಮ ಜಯಂತಿ ಮತ್ತು ಮಹಾಭಾರತ ರಸಪ್ರಶ್ನೆ

Suddi Udaya

ಭೀಕರ ಗಾಳಿ -ಮಳೆ: ಬೆಳ್ತಂಗಡಿ ಸೈಂಟ್ ತೆರೇಸಾ ಕಾನ್ವೆಂಟ್ ಗೆ ತೆಂಗಿನ ಮರ ಬಿದ್ದು ಹಾನಿ

Suddi Udaya

ಮುಂಡಾಜೆ ಶಾಂಭವಿ ರೈ ನಿಧನ

Suddi Udaya

ಅಳದಂಗಡಿ ದೈಲ ಮರಿಯಣ್ ಡಿಸೋಜ ನಿವಾಸಕ್ಕೆ ಸ್ಪೀಕರ್ ಯು ಟಿ ಖಾದರ್ ಭೇಟಿ

Suddi Udaya
error: Content is protected !!