37.9 C
ಪುತ್ತೂರು, ಬೆಳ್ತಂಗಡಿ
March 6, 2026
ಅಭಿನಂದನೆಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿವರದಿ

ಉಜಿರೆ ಗ್ರಾ.ಪಂ.ಗೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನರ್ವಡೆ ವಿನಾಯಕ ಕರ್ಬಾರಿ ರವರು ಭೇಟಿ ಗ್ರಾಮ ಪಂಚಾಯತ್ ಕಾರ್ಯ ವೈಖರಿಗೆ ಮೆಚ್ಚುಗೆ

ಉಜಿರೆ: ಉಜಿರೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಜಲ್ ಜೀವನ್ ಮಿಷನ್ ಯೋಜನೆಯ ವಿವಿಧ ಕಾಮಗಾರಿಗಳ ಭೌತಿಕ ಪರಿಶೀಲನೆಗಾಗಿ ಜು.21ರಂದು ಉಜಿರೆ ಗ್ರಾ.ಪಂ.ಗೆ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನರ್ವಡೆ ವಿನಾಯಕ ಕರ್ಬಾರಿ ಐ.ಎ.ಎಸ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಜಲ್ ಜೀವನ್ ಮಿಷನ್ ಯೋಜನೆಯಡಿ ನಿರ್ಮಿಸಿದ ನೀರಚಿಲುಮೆಯ ಕುಡಿಯುವ ನೀರಿನ ಸ್ಥಾವರವನ್ನು ಪರಿಶೀಲಿಸಿದರು. ಬಳಿಕ ಆದಿಪರಾಶಕ್ತಿ ಮಹಿಳಾ ಸ್ವಸಹಾಯ ಸಂಘದವರು ನಡೆಸುತ್ತಿರುವ ಅಕ್ಕ ಕೆಫೆ, ಪ್ರೇರಣಾ ಸಂಜೀವಿನಿ ಮಹಿಳಾ ಒಕ್ಕೂಟದ ಸದಸ್ಯರು ನಡೆಸುತ್ತಿರುವ ಹಳ್ಳಿ ಸಂತೆಯನ್ನು, ಬಳಿಕ ಕೂಸಿನ ಮನೆ, ಡಿಜಿಟಲ್ ಅರಿವು ಕೇಂದ್ರ ಮತ್ತು ಪಂಚಾಯತ್ ಕಚೇರಿಗೆ ಭೇಟಿ ಮೆಚ್ಚುಗೆ ವ್ಯಕ್ತಪಡಿಸಿದರು.

ಗ್ರಾಮ ಕುಡಿಯುವ ನೀರು ನೈರ್ಮಲ್ಯ ಇಲಾಖೆಯ ಕಾರ್ಯಪಾಲಕ ಅಭಿಯಂತರರು, ಸಹಾಯಕ ಕಾರ್ಯಪಾಲಕ ಅಭಿಯಂತರರು, ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ, ಉಜಿರೆ ಗ್ರಾ.ಪಂ. ಅಧ್ಯಕ್ಷೆ ಉಷಾಕಿರಣ್ ಕಾರಂತ್, ಉಪಾಧ್ಯಕ್ಷ ರವಿ ಕುಮಾರ್, ಪಂ. ಅಭಿವೃದ್ಧಿ ಅಧಿಕಾರಿ ಪ್ರಕಾಶ್ ಶೆಟ್ಟಿ, ಕಾರ್ಯದರ್ಶಿ, ಸ್ಥಳೀಯ ಸದಸ್ಯರು, ಪಂ. ಸಿಬ್ಬಂದಿಗಳು, ಪಂಪ್ ಆಪರೇಟರ್ ಗಳು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ: ಅಕ್ರಮ ಜೂಜಾಟ ಆಡುತ್ತಿದ್ದ ಸ್ಥಳಕ್ಕೆ ಪೊಲೀಸರ ದಾಳಿ: ಆರೋಪಿಗಳ ಸಹಿತ ನಗದು ಹಾಗೂ ಇತರ ಸೊತ್ತುಗಳು ಪೊಲೀಸ್ ವಶ

Suddi Udaya

ಧರ್ಮಸ್ಥಳ : ಆಟೋ ಚಾಲಕನ ಮೇಲೆ ಹಲ್ಲೆ ಪ್ರಕರಣ: ಮೂವರು ಆರೋಪಿಗಳ ಬಂಧನ

Suddi Udaya

ಬಂಗಾಡಿ ವಲಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ: ಬೆದ್ರಬೆಟ್ಟು ಮರಿಯಾಂಬಿಕ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಿಗೆ ಸಮಗ್ರ ಪ್ರಶಸ್ತಿ

Suddi Udaya

ಪಡಂಗಡಿ ಗ್ರಾ.ಪಂ. ನಲ್ಲಿ ಕ್ರಿಯಾ ಯೋಜನೆ ತಯಾರಿ ಬಗ್ಗೆ ವಿಶೇಷ ಗ್ರಾಮ ಸಭೆ

Suddi Udaya

ತಣ್ಣೀರುಪಂತ ವಲಯದ ರುದ್ರಗಿರಿ ದೇವಸ್ಥಾನದಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya

ಉಜಿರೆ ಶ್ರೀ ಧ.ಮಂ. ಪಾಲಿಟೆಕ್ನಿಕ್ ನ ಯೋಜನಾಧಿಕಾರಿ ಅವನೀಶ್ ಪಿ ರವರಿಗೆ ಭಾರತೀಯ ರೆಡ್ ಕ್ರಾಸ್ ಸೊಸೈಟಿಯ ರಾಜ್ಯ ಘಟಕದ ವತಿಯಿಂದ ಸನ್ಮಾನ

Suddi Udaya
error: Content is protected !!