22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ರತ್ನ ಮಾನಸ ಜೀವನ-ಶಿಕ್ಷಣ ವಿದ್ಯಾರ್ಥಿ ನಿಲಯದಲ್ಲಿ ನೇಜಿ ನಾಟಿ ಕಾರ್ಯಕ್ರಮ

ಉಜಿರೆ: ಇಲ್ಲಿಯ ರತ್ನ ಮಾನಸ ಜೀವನ-ಶಿಕ್ಷಣ ವಿದ್ಯಾರ್ಥಿ ನಿಲಯದಲ್ಲಿ ವಿದ್ಯಾರ್ಥಿಗಳಿಂದ ಜು. 20ರಂದು ನೇಜಿ ನೆಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

ರತ್ನಮಾನಸದ ನಿಲಯ ಪಾಲಕರಾದ ಯತೀಶ್ ಕೆ ಬಳಂಜ ಇವರು ನೇಜಿ ನೆಡುವ ವಿಧಾನ ಹಾಗೂ ರತ್ನ ಮಾನಸದ ಹಿರಿಯ ವಿದ್ಯಾರ್ಥಿ ಉದ್ಯಮಿ ಜಗದೀಶ ಪ್ರಸಾದ್ ಇವರು ಭತ್ತದ ಕೃಷಿಯ ಬಗ್ಗೆ ಉತ್ತಮ ಮಾಹಿತಿ ನೀಡಿದರು.

ನಿಲಯದ ವಿದ್ಯಾರ್ಥಿಗಳೊಂದಿಗೆ ಉಜಿರೆಯ ಎಸ್ ಡಿ ಎಂ ಕಾಲೇಜು(ಸ್ವಾಯತ್ತ) ಸಸ್ಯಶಾಸ್ತ್ರ ವಿಭಾಗದ ವಿದ್ಯಾರ್ಥಿಗಳು ಉತ್ಸಾಹದಿಂದ ಜೊತೆಗೂಡಿ ನೇಜಿ ನಾಟಿ ಮಾಡಿ, ನಂತರ ಕೆಸರು ಗದ್ದೆಯಲ್ಲಿ ಆಟವಾಡಿ ಸಂಭ್ರಮಿಸಿದರು.
ಸಸ್ಯಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಪ್ರೊಫೆಸರ್ ಶಕುಂತಲಾ. ಬಿ, ಸಹಾಯಕ ಪ್ರಾಧ್ಯಾಪಕರಾದ ಭವ್ಯ ನಾಯಕ್ ಮತ್ತು ಮಂಜುಶ್ರೀ ಉಪಸ್ಥಿತರಿದ್ದರು. ಸಾಮಾಜಿಕ ಕಾರ್ಯಕರ್ತ ಶಿವಪ್ರಸಾದ್ ಮಲೆಬೆಟ್ಟು , ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಪ್ರಭಾಕರ ಹೆಗ್ಡೆ , ನಿಲಯದ ಶಿಕ್ಷಕರಾದ ರವಿಚಂದ್ರ ಹಾಗೂ ಉದಯರಾಜ್ ಮತ್ತು ವಿದ್ಯಾರ್ಥಿಗಳ ಪೋಷಕರು ಭಾಗವಹಿಸಿದ್ದರು.

Related posts

ಗೇರುಕಟ್ಟೆ: ಬಾಲಕ ಶವ ಪತ್ತೆ ಪ್ರಕರಣ: ಘಟನಾ ಸ್ಥಳಕ್ಕೆ ಶಾಸಕ ಹರೀಶ್ ಪೂಂಜ ಭೇಟಿ: ಸಮಗ್ರ ತನಿಖೆಗೆ ಆಗ್ರಹ

Suddi Udaya

ಉಜಿರೆ ಹಾ.ಉ.ಸ. ಸಂಘದ ವತಿಯಿಂದ ಬದನಾಜೆ ಶಾಲೆಯ ನೂತನ ಸಭಾಂಗಣಕ್ಕೆ ದೇಣಿಗೆ ಹಸ್ತಾಂತರ

Suddi Udaya

ಉಜಿರೆ ಎಸ್‌.ಡಿ.ಎಂ ಸಿ.ಬಿ.ಎಸ್.ಇ ಶಾಲೆಯ ವಿದ್ಯಾರ್ಥಿಗಳಿಗೆ “ಪೌಷ್ಠಿಕ ಆಹಾರ ಮತ್ತು ಮಾನಸಿಕ ಆರೋಗ್ಯ” ಕಾರ್ಯಕ್ರಮ

Suddi Udaya

ಮಚ್ಚಿನದಲ್ಲಿ ಪಾಲು ಬಿದ್ದ ಹಿರಿಯ ಆರೋಗ್ಯ ಸಹಾಯಕಿ ವಸತಿಗೃಹ: ಸ್ವತ್ತುಗಳು ಕಳ್ಳರ ಪಾಲು

Suddi Udaya

ಇಚ್ಚಿಲಂಪಾಡಿ ನಿವಾಸಿ ಜಯಂತ್ ಟಿ. ರವರ ಮೇಲೆ ಹಲ್ಲೆಗೆ ಯತ್ನ: ಧರ್ಮಸ್ಥಳ ಠಾಣೆಯಲ್ಲಿ ದೂರು ದಾಖಲು

Suddi Udaya

ಉಜಿರೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಪುನರ್ ನಿರ್ಮಾಣ ಯಶೋನಮನ ಶೀರ್ಷಿಕೆಯಡಿಅಭಿವೃದ್ಧಿ ಕಾರ್ಯಗಳ ಹಸ್ತಾಂತರ

Suddi Udaya
error: Content is protected !!