ತೆಂಕಕಾರಂದೂರು: ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ತೆಂಕಕಾರಂದೂರು ಇದರ ವತಿಯಿಂದ ವರ ಮಹಾಲಕ್ಷ್ಮಿ ಪೂಜಾ ಸಮಿತಿಯನ್ನು ಕ್ಷೇತ್ರದ ಆಡಳಿತ ಮೊಕ್ತೇಸರರಾದ ಕೆ.ಕೃಷ್ಣ ಸಂಪಿಗೆತ್ತಾಯ ಇವರ ಸಮ್ಮುಖದಲ್ಲಿ ದೇವಸ್ಥಾನದ ವಠಾರದಲ್ಲಿ ಜು. 20 ರಂದು ರಚಿಸಲಾಯಿತು.
ವರ ಮಹಾಲಕ್ಷ್ಮಿ ಸಮಿತಿಯ ನೂತನ ಅಧ್ಯಕ್ಷರಾಗಿ ರೂಪಲತಾ ರಮಾನಂದ ಇವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.
ಪ್ರಧಾನ ಕಾರ್ಯದರ್ಶಿಯಾಗಿ ಚೈತ್ರ ಪ್ರವೀಣ್, ಹಾಗೂ ರೂಪ ಶುಭಕರ ಬದ್ಯಾರು, ಜೊತೆ ಕಾರ್ಯದರ್ಶಿಯಾಗಿ
ಗೀತಾ ಬದ್ಯಾರು, ಕೋಶಾಧಿಕಾರಿಯಾಗಿ ಪ್ರಮೀಳಾ ವಿದ್ಯಾನಂದ, ಉಪಾಧ್ಯಕ್ಷರಾಗಿ ಲೀಲಾವತಿ ಜಗದೀಶ್ ಕೆಮ್ಮಟೆ ಆಯ್ಕೆಯಾದರು.
ವರ ಮಹಾಲಕ್ಷ್ಮಿ ಪೂಜೆಯು ಆ.8 ರಂದು ಬೆಳಿಗ್ಗೆ 9ಗಂಟೆಗೆ ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ನಡೆಯಲಿದೆ ಎಂದು ಸಂಘಟಕರು ತಿಳಿಸಿದರು.











