23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಅಭಿವೃದ್ಧಿ ಚಾರಿಟೇಬಲ್ ಟ್ರಸ್ಟ್ ಸಭೆ

ಬೆಳ್ತಂಗಡಿ: ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಅಭಿವೃದ್ಧಿ ಚಾರಿಟೇಬಲ್ ಟ್ರಸ್ಟ್ ಇದರ ಸಭೆಯು ಮಂಗಳೂರಿನ ಕಂಕನಾಡಿ ಬ್ರಹ್ಮ ಬೈದರ್ಕಳ ಗರಡಿಯಲ್ಲಿ ಟ್ರಸ್ಟ್ ಅಧ್ಯಕ್ಷ ಸಂಜೀವ ಪೂಜಾರಿ ಬಿರ್ವ ಇವರ ಅಧ್ಯಕ್ಷತೆಯಲ್ಲಿ ಜರಗಿತು.

ಸಭೆಯ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಸಂಜೀವ ಪೂಜಾರಿಯವರು ವಿಶ್ವದ ಬಿಲ್ಲವರು ಸೇರಿ ನಿರ್ಮಿಸಿದ ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಅಭಿವೃದ್ಧಿಗೆ ಪೂರಕವಾಗಿ ಹಾಗೂ ಮಾತೆ ದೇಯಿ ಬೈದ್ಯೆತಿ ಕೋಟಿ ಚೆನ್ನಯರ ಆದರ್ಶಗಳ ಜೊತೆ ನಾಟಿ ವೈದ್ಯದ ವಿಶೇಷತೆಯನ್ನು ಜಗತ್ತಿಗೆ ಸಾರುವ ಕೆಲಸ ಮಾಡುವ ಬಗ್ಗೆ ಟ್ರಸ್ಟ್ ಕೆಲಸ ಮಾಡಲಿದೆ ಎಂದರು.

ವಿಶ್ವದ ಬಿಲ್ಲವರನ್ನು ಸೇರಿಸಿಕೊಂಡು ಗೆಜ್ಜೆಗಿರಿ ಕ್ಷೇತ್ರದ ಅಭಿವೃದ್ಧಿಗೆ ಪೂರಕವಾಗಿ ಕ್ಷೇತ್ರದ ಪಕ್ಕದಲ್ಲಿ ಕ್ಷೇತ್ರಾಡಳಿತ ಸಮಿತಿ ಖರೀದಿಸಿದ ಜಾಗದಲ್ಲಿ ಯಾತ್ರಿ ನಿವಾಸವನ್ನು ನಿರ್ಮಾಣ ಮಾಡುವ ಬಗ್ಗೆ ಮತ್ತು ಅದರ ಶಂಕುಸ್ಥಾಪನೆ ಮಾಡುವ ಬಗ್ಗೆ ಸಭೆಯಲ್ಲಿ ತೀರ್ಮಾನಿಸಲಾಯಿತು.

ಸಭೆಯಲ್ಲಿ ಗೆಜ್ಜೆಗಿರಿ ಕ್ಷೇತ್ರಾಡಳಿತ ಸಮಿತಿಯ ಗೌರವ ಅಧ್ಯಕ್ಷ ಪೀತಾಂಬರ ಹೆರಾಜೆ, ಅಧ್ಯಕ್ಷ ರವಿ ಪೂಜಾರಿ ಚಿಲಿಂಬಿ, ವಾಸ್ತುತಜ್ಞ ಆರ್ಕಿಟೆಕ್ಟ್ ಪ್ರಮಲ್ ಕುಮಾರ್ ಕಾರ್ಕಳ, ಕ್ಷೇತ್ರಾಡಳಿತ ಉಪಾಧ್ಯಕ್ಷರು ಹಾಗೂ ಟ್ರಸ್ಟ್ ನ ಪ್ರಧಾನ ಕಾರ್ಯದರ್ಶಿಯಾದ ಉಲ್ಲಾಸ್ ಕೋಟ್ಯಾನ್, ಕ್ಷೇತ್ರಾಡಳಿತ ಸಮಿತಿಯ ಉಪಾಧ್ಯಕ್ಷ ದೀಪಕ್ ಕೋಟ್ಯಾನ್, ಪ್ರಧಾನ ಕಾರ್ಯದರ್ಶಿ ಡಾ. ರಾಜಾರಾಂ, ಕೋಶಾಧಿಕಾರಿ ಮೋಹನ್ ದಾಸ್ ವಾಮಂಜೂರು,ಟ್ರಸ್ಟ್ ನ ಕೋಶಾಧಿಕಾರಿ ಹರೀಶ್ ಸಾಲ್ಯಾನ್ ಬಜಗೋಳಿ,ಪ್ರಮುಖರಾದ ಡಾ. ಸಂತೋಷ್ ಕುಮಾರ್ ಬೈರಂಪಳ್ಳಿ, ನಾರಾಯಣ ಮಚ್ಚಿನ, ರಾಜೇಂದ್ರ ಚಿಲಿಂಬಿ, ಜಯವಿಕ್ರಂ ಕಲ್ಲಾಪು, ಹರೀಶ್ ಕೆ ಪೂಜಾರಿ, ಕುಮಾರ್ ಇರುವೈಲ್, ಜಯರಾಮ ಪೂಜಾರಿ ಬೆಳುವಾಯಿ, ಜಯರಾಂ ಬಂಗೇರ ಹೆರಾಜೆ ಬೆಳ್ತಂಗಡಿ ಮುಂತಾದವರು ಉಪಸ್ಥಿತರಿದ್ದರು.

Related posts

ಉಜಿರೆ: ಧರ್ಮ ಸಂರಕ್ಷಣಾ ಯಾತ್ರೆಯ ಬಗ್ಗೆ ಸಮಾಲೋಚನೆ ಸಭೆ

Suddi Udaya

ಬಿ.ವಿ.ಎಫ್. ಬೆಳ್ತಂಗಡಿ ತಾ. ಘಟಕದಿಂದ ’ಭಾರತೀಯ ಸಂವಿಧಾನ ದಿನಾಚರಣೆ’

Suddi Udaya

ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ಪದಗ್ರಹಣ ಸಮಾರಂಭದಲ್ಲಿ ಧರ್ಮಸ್ಥಳದ ಸ್ನೇಕ್ ಪ್ರಕಾಶ್ ಶೆಟ್ಟಿ ರಿಗೆ ಸನ್ಮಾನ

Suddi Udaya

ವಿದ್ಯುತ್ ಸ್ಪರ್ಶಿಸಿ ಮೃತಪಟ್ಟ ಯುವತಿಯ ಕುಟುಂಬಸ್ಥರಿಗೆ ಮೆಸ್ಕಾಂ ಇಲಾಖೆಯ ಪರಿಹಾರದ ಚೆಕ್ ನ್ನು ಶಾಸಕ ಹರೀಶ್ ಪೂಂಜರಿಂದ ಹಸ್ತಾಂತರ

Suddi Udaya

ಗರ್ಡಾಡಿ ಶಕ್ತಿ ಕೇಂದ್ರದಲ್ಲಿ ಡಾ.ಶ್ಯಾಮ್ ಪ್ರಸಾದ್ ಮುಖರ್ಜಿಯವರ ಬಲಿದಾನದ ಅಂಗವಾಗಿ ಮುಗೇರಡ್ಕ‌ ದೈವಸ್ಥಾನದಲ್ಲಿ‌ ಗಿಡ ನಾಟಿ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದ ಡಿ. ಹರ್ಷೇಂದ್ರ ಕುಮಾರ್ ರವರಿಂದ ಉಜಿರೆ ಶ್ರೀ ಜನಾರ್ಧನ ದೇವಸ್ಥಾನದ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!