27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಿತ್ತಬಾಗಿಲು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ: ಕೇಶವ ಫಡಕೆ ಅಧ್ಯಕ್ಷ – ಸಂದೀಪ್ ಪೂಜಾರಿ ಕಾರ್ಯದರ್ಶಿ

ಕೊಲ್ಲಿ: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಮಿತ್ತಬಾಗಿಲು ಇದರ ಮಹಾಸಭೆ ಜು.20 ರಂದು ಸಮಿತಿಯ ಅಧ್ಯಕ್ಷ ಸುರೇಶ್ ಪೂಜಾರಿಯವರ ಅಧ್ಯಕ್ಷತೆಯಲ್ಲಿ ಕೊಲ್ಲಿ ಶ್ರೀ ದುರ್ಗಾದೇವಿ ದೇವಾಸ್ಥಾನದ ವಠಾರದಲ್ಲಿ ಜರುಗಿತು.


ಈ ಸಂದರ್ಭದಲ್ಲಿ ನೂತನ ಸಮಿತಿಗೆ ಪದಾಧಿಕಾರಿಗಳನ್ನು ಆರಿಸಲಾಯಿತು. ಗೌರವಾಧ್ಯಕ್ಷರಾಗಿ ಸುರೇಶ್ ಪೂಜಾರಿ ಬನದಬಾಗಿಲು, ಅಧ್ಯಕ್ಷರಾಗಿ ಕೇಶವ ವಿ. ಫಡಕೆ ಸುಭಾಶ್‌ಭಾಗ್, ಉಪಾಧ್ಯಕ್ಷರಾಗಿ ಶ್ರೀಮತಿ ವನಿತಾ ಕುರುಬರಗುಡ್ಡೆ, ಕಾರ್ಯದರ್ಶಿಯಾಗಿ ಸಂದೀಪ್ ಪೂಜಾರಿ ಬೊಳ್ಳಾಜೆ, ಜೊತೆ ಕಾರ್ಯದರ್ಶಿಯಾಗಿ ಶ್ರೀಮತಿ ಮೀನಾಕ್ಷಿ ಮಾಲೂರು, ಕೋಶಾಧಿಕಾರಿಯಾಗಿ ಮೋನಪ್ಪ ಗೌಡ ಇವರನ್ನು ಆಯ್ಕೆ ಮಾಡಲಾಯಿತು,

ಗೌರವ ಸಲಹೆಗಾರರಾಗಿ ದಾಸಪ್ಪ ಗೌಡ ಕಂಜಾನು, ಕೆ. ವಾಸುದೇವ ರಾವ್ ಕಕ್ಕೆನೇಜಿ, ಕೆ. ಕೃಷ್ಣಪ್ಪ ಪೂಜಾರಿ, ವಿಜಯ ಗೌಡ, ಸುಧಾಕರ ಪೂಜಾರಿ, ಎಸ್. ವಿನಯಚಂದ್ರ, ಸ್ವಸ್ತಿಕ್, ಅಭಿಜಿತ್, ನಾರಾಯಣ ಪೂಜಾರಿ, ಗುರುಪ್ರಸಾದ್, ನಿತೇಶ್, ಪ್ರಶಾಂತ್, ಹರ್ಷಿತ್, ನಿತೇಶ್ ಸಂಜೀವ ಗೌಡ, ರಂಜಿತ್, ರಮೇಶ್, ವಿಜಯ ಪೂಜಾರಿ, ಗೋಪಾಲ ಪೂಜಾರಿ, ಕೃಷ್ಣ ದೇವಾಡಿಗ ಇವರನ್ನು ಆರಿಸಲಾಗಿದೆ.

Related posts

ಧರ್ಮಸ್ಥಳದ ಬುರುಡೆ ಷಡ್ಯಂತ್ರದಲ್ಲಿ ಯೂಟ್ಯೂಬರ್ ಗಳ ಕೈವಾಡ : ಪ್ರಶಾಂತ್ ಸಂಬರಗಿಯಿಂದ ಎಸ್.ಐ.ಟಿಗೆ ದೂರು

Suddi Udaya

ಅಕ್ರಮವಾಗಿ ಮನೆಯಲ್ಲಿ ಜೂಜಾಟ ಆಡುತ್ತಿದ್ದ ಸ್ಥಳಕ್ಕೆ ಬೆಳ್ತಂಗಡಿ ಪೊಲೀಸರ ದಾಳಿ: ಆರೋಪಿಗಳ ಸಹಿತ ನಗದು ಹಾಗೂ ಇತರ ಸೊತ್ತುಗಳು ವಶ

Suddi Udaya

ದೆಹಲಿಯ ಗಣರಾಜ್ಯೋತ್ಸವ: ಉಜಿರೆ ಎಸ್.ಡಿ.ಎಂ ಎನ್.ಸಿ.ಸಿಯ 3 ಕೆಡೆಟ್‌ಗಳ ಆಯ್ಕೆ

Suddi Udaya

ಭಾರಿ ಗಾಳಿ ಮಳೆ: ಉಜಿರೆ ಪೆರ್ಲ ನಿವಾಸಿ ಹೇಮಾವತಿರವರ ಮನೆಗೆ ತೆಂಗಿನ ಮರ ಬಿದ್ದು ಹಾನಿ: ಗ್ರಾ.ಪಂ. ನಿಂದ ನೆರವು

Suddi Udaya

ಬೆಳಾಲು ಶ್ರೀ.ಧ. ಮ ಪ್ರೌಢಶಾಲೆಯ ವಿದ್ಯಾರ್ಥಿಗಳ ಪೋಷಕರ ಸಭೆ

Suddi Udaya

ಬೆಳ್ತಂಗಡಿ ಪಟ್ಟಣ ಪಂಚಾಯತ್ ಹಾಗೂ ಗ್ರಾಮ ಪಂಚಾಯತ್ ಪೌರ ಕಾರ್ಮಿಕರ ಜಂಟಿ ಸಮಾವೇಶ

Suddi Udaya
error: Content is protected !!