23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಳದಂಗಡಿ ಗ್ರಾ. ಪಂ. ನಲ್ಲಿ ಸಾಮಾಜಿಕ ಪರಿಶೋದನಾ ವಿಶೇಷ ಗ್ರಾಮ ಸಭೆ

ಅಳದಂಗಡಿ ಗ್ರಾಮ ಪಂಚಾಯತ್ ನ 2025-26 ನೇ ಸಾಲಿನ ಸಾಮಾಜಿಕ ಪರಿಶೋದನಾ ವಿಶೇಷ ಗ್ರಾಮ ಸಭೆಯ ಜು. 19ರಂದು ಅಳದಂಗಡಿ ಗ್ರಾಮ ಪಂಚಾಯತ್ ಸಭಾಭವನದಲ್ಲಿ ನಡೆಯಿತು.

2024-25 ನೇ ಸಾಲಿನ ಮಹತ್ಮಾಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಮತ್ತು 15 ನೇ ಹಣಕಾಸು ಯೋಜನೆ, 2020 ರಿಂದ 2024-25 ನೇ ರಾಜ್ಯ ಹಣಕಾಸು ಯೋಜನೆಯಲ್ಲಿ ತಾಲೂಕು ಪಂಚಾಯತ್ ಮತ್ತು ಜಿಲ್ಲಾ ಪಂಚಾಯತಿನಿಂದ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಅನುಷ್ಠಾನ ಗೊಂಡ ಕಾಮಗಾರಿಗಳ ಸಾಮಾಜಿಕ ಪರಿಶೋದನೆ ಮಾಡಲಾಯಿತು.

ಸಭೆಯ ಮಾರ್ಗದರ್ಶನ ಅಧಿಕಾರಿಯಾಗಿ ತಾಲೂಕು ಶಿಕ್ಷಣಾಧಿಕಾರಿ ರವರು ಕಾಮಗಾರಿಯ ಗುಣಮಟ್ಟವನ್ನು ಉತ್ತಮ ರೀತಿಯಲ್ಲಿ ಕಾಪಾಡಲು ಸರಕಾರ ಈ ಕಾರ್ಯಕ್ರಮವನ್ನು ಅನುಷ್ಠಾನ ಗೊಳಿಸಲಾಗಿದೆ ಎಂದರು. ಸಭೆಯಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರು, ಸದಸ್ಯರು ಉಪಸ್ಥಿತರಿದ್ದರು.

ಗ್ರಾಮ ಪಂಚಾಯತ್ ನ ಅಭಿವೃದ್ಧಿ ಅಧಿಕಾರಿ ಪೂರ್ಣಿಮ ಜೆ ಸ್ವಾಗತಿಸಿದರು. ಸಾಮಾಜಿಕ ಪರಿಶೋದನೆಯ ತಾಲೂಕು ಸಂಯೋಜಕ ರಾಜೀವ ಸಾಲಿಯಾನ್ ಸಾಮಾಜಿಕ ಪರಿಶೋದನೆ ಮೂಲ ಉದ್ದೇಶವನ್ನು ತಿಳಿಸಿದರು.

ಸಾಮಾಜಿಕ ಪರಿಶೋದನೆಯ ಸಂಪನ್ಮೂಲ ವ್ಯಕ್ತಿಗಳು ಸಾಮಾಜಿಕ ಪರಿಶೋದನೆಯ ವರದಿಯನ್ನು ಸಭೆಯಲ್ಲಿ ಮಂಡಿಸಿದರು. ಸಭೆಯಲ್ಲಿ ನರೇಗ ಯೋಜನೆಯ ಇಂಜಿನಿಯರ್ ಉಪಸ್ಥಿತರಿದ್ದರು. ಗ್ರಾಮ ಪಂಚಾಯತ್ ಲೆಕ್ಕ ಸಹಾಯಕರು, ಸಿಬ್ಬಂದಿವರ್ಗದವರು ಸಭೆಯಲ್ಲಿ ಹಾಜರಿದ್ದರು.

Related posts

ಪುತ್ತೂರು ನರಿಮೊಗರು ಕೊಡಿನೀರುನಲ್ಲಿ, ಮಾರುತಿ ಕಾರುಗಳ ನಡುವೆ ಅಪಘಾತ: ಕೊಕ್ಕಡದ ಮಹಿಳೆಗೆ ಗಾಯ ಆಸ್ಪತ್ರೆಗೆ ದಾಖಲು

Suddi Udaya

ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜಿನಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನಕ್ಕೆ ಕೊಡಿಮರ ಸಮರ್ಪಣೆ

Suddi Udaya

ಮರುಮೌಲ್ಯಮಾಪನ: ಎಸ್‌ಡಿಎಂ ಪಿಯು ಕಾಲೇಜಿನ ವಿದ್ಯಾರ್ಥಿನಿಯರ ಅದ್ಭುತ ಸಾಧನೆ

Suddi Udaya

ಎಸ್‌ಡಿಎಂ ಡಿ.ಎಡ್. ಹಾಗೂ ಬಿ.ಎಡ್. ಸಂಸ್ಥೆಯಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ

Suddi Udaya

ಕಡಿರುದ್ಯಾವರ: ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಓಮ್ನಿ ಕಾರು

Suddi Udaya
error: Content is protected !!