22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಳದಂಗಡಿ ಗ್ರಾ. ಪಂ. ನಲ್ಲಿ ಸಾಮಾಜಿಕ ಪರಿಶೋದನಾ ವಿಶೇಷ ಗ್ರಾಮ ಸಭೆ

ಅಳದಂಗಡಿ ಗ್ರಾಮ ಪಂಚಾಯತ್ ನ 2025-26 ನೇ ಸಾಲಿನ ಸಾಮಾಜಿಕ ಪರಿಶೋದನಾ ವಿಶೇಷ ಗ್ರಾಮ ಸಭೆಯ ಜು. 19ರಂದು ಅಳದಂಗಡಿ ಗ್ರಾಮ ಪಂಚಾಯತ್ ಸಭಾಭವನದಲ್ಲಿ ನಡೆಯಿತು.

2024-25 ನೇ ಸಾಲಿನ ಮಹತ್ಮಾಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಮತ್ತು 15 ನೇ ಹಣಕಾಸು ಯೋಜನೆ, 2020 ರಿಂದ 2024-25 ನೇ ರಾಜ್ಯ ಹಣಕಾಸು ಯೋಜನೆಯಲ್ಲಿ ತಾಲೂಕು ಪಂಚಾಯತ್ ಮತ್ತು ಜಿಲ್ಲಾ ಪಂಚಾಯತಿನಿಂದ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಅನುಷ್ಠಾನ ಗೊಂಡ ಕಾಮಗಾರಿಗಳ ಸಾಮಾಜಿಕ ಪರಿಶೋದನೆ ಮಾಡಲಾಯಿತು.

ಸಭೆಯ ಮಾರ್ಗದರ್ಶನ ಅಧಿಕಾರಿಯಾಗಿ ತಾಲೂಕು ಶಿಕ್ಷಣಾಧಿಕಾರಿ ರವರು ಕಾಮಗಾರಿಯ ಗುಣಮಟ್ಟವನ್ನು ಉತ್ತಮ ರೀತಿಯಲ್ಲಿ ಕಾಪಾಡಲು ಸರಕಾರ ಈ ಕಾರ್ಯಕ್ರಮವನ್ನು ಅನುಷ್ಠಾನ ಗೊಳಿಸಲಾಗಿದೆ ಎಂದರು. ಸಭೆಯಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರು, ಸದಸ್ಯರು ಉಪಸ್ಥಿತರಿದ್ದರು.

ಗ್ರಾಮ ಪಂಚಾಯತ್ ನ ಅಭಿವೃದ್ಧಿ ಅಧಿಕಾರಿ ಪೂರ್ಣಿಮ ಜೆ ಸ್ವಾಗತಿಸಿದರು. ಸಾಮಾಜಿಕ ಪರಿಶೋದನೆಯ ತಾಲೂಕು ಸಂಯೋಜಕ ರಾಜೀವ ಸಾಲಿಯಾನ್ ಸಾಮಾಜಿಕ ಪರಿಶೋದನೆ ಮೂಲ ಉದ್ದೇಶವನ್ನು ತಿಳಿಸಿದರು.

ಸಾಮಾಜಿಕ ಪರಿಶೋದನೆಯ ಸಂಪನ್ಮೂಲ ವ್ಯಕ್ತಿಗಳು ಸಾಮಾಜಿಕ ಪರಿಶೋದನೆಯ ವರದಿಯನ್ನು ಸಭೆಯಲ್ಲಿ ಮಂಡಿಸಿದರು. ಸಭೆಯಲ್ಲಿ ನರೇಗ ಯೋಜನೆಯ ಇಂಜಿನಿಯರ್ ಉಪಸ್ಥಿತರಿದ್ದರು. ಗ್ರಾಮ ಪಂಚಾಯತ್ ಲೆಕ್ಕ ಸಹಾಯಕರು, ಸಿಬ್ಬಂದಿವರ್ಗದವರು ಸಭೆಯಲ್ಲಿ ಹಾಜರಿದ್ದರು.

Related posts

ಕನ್ನಡಿಕಟ್ಟೆ ಬಳಿ ಬೈಕ್- ಕಾರು ನಡುವೆ ಭೀಕರ ರಸ್ತೆ ಅಪಘಾತ: ಮಹಿಳೆ ಸಾವು

Suddi Udaya

ಎಸ್ ಬಿಐ ಲೈಫ್‌ ಕಾರ್ಕಳ ಬ್ರಾಂಚ್ ಬೆಳ್ತಂಗಡಿಯ ಘಟಕದ ಮಂಜುನಾಥ್ ಗುಡಿಗಾರ್ ರವರಿಗೆ ಇಂಟರ್ನ್ಯಾಷನಲ್ ಕ್ವಾಲಿಟಿ ಅವಾರ್ಡ್

Suddi Udaya

ಲಾರಿ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಬೆಳ್ತಂಗಡಿ ಮುರ ನಿವಾಸಿ ಬೈಕ್ ಸವಾರ ಗಂಭೀರ, ಬೈಕ್ ನಲ್ಲಿದ್ದ ಪುಟ್ಟ ಮಗು ಸ್ಥಳದಲ್ಲೇ ಮೃತ್ಯು

Suddi Udaya

ನಾಳೆ (ಮೇ 7): ಬೆಳ್ತಂಗಡಿ ತಾಲೂಕಿನ ವಿವಿಧೆಡೆ ವಿದ್ಯುತ್ ನಿಲುಗಡೆ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಸಿವಿಲ್‌ ಇಂಜಿನಿಯರಿಂಗ್‌ ಪ್ರಾಜೆಕ್ಟ್ ಆವಿಷ್ಕಾರಕ್ಕೆ ಇಂಗ್ಲೆಂಡ್‌ ಮೂಲದ ಪೇಟೆಂಟ್ ಲಭ್ಯ

Suddi Udaya
error: Content is protected !!