23.7 C
ಪುತ್ತೂರು, ಬೆಳ್ತಂಗಡಿ
April 24, 2026
ಅಭಿನಂದನೆಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿವರದಿ

ಉಜಿರೆ ಗ್ರಾ.ಪಂ.ಗೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನರ್ವಡೆ ವಿನಾಯಕ ಕರ್ಬಾರಿ ರವರು ಭೇಟಿ ಗ್ರಾಮ ಪಂಚಾಯತ್ ಕಾರ್ಯ ವೈಖರಿಗೆ ಮೆಚ್ಚುಗೆ

ಉಜಿರೆ: ಉಜಿರೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಜಲ್ ಜೀವನ್ ಮಿಷನ್ ಯೋಜನೆಯ ವಿವಿಧ ಕಾಮಗಾರಿಗಳ ಭೌತಿಕ ಪರಿಶೀಲನೆಗಾಗಿ ಜು.21ರಂದು ಉಜಿರೆ ಗ್ರಾ.ಪಂ.ಗೆ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನರ್ವಡೆ ವಿನಾಯಕ ಕರ್ಬಾರಿ ಐ.ಎ.ಎಸ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಜಲ್ ಜೀವನ್ ಮಿಷನ್ ಯೋಜನೆಯಡಿ ನಿರ್ಮಿಸಿದ ನೀರಚಿಲುಮೆಯ ಕುಡಿಯುವ ನೀರಿನ ಸ್ಥಾವರವನ್ನು ಪರಿಶೀಲಿಸಿದರು. ಬಳಿಕ ಆದಿಪರಾಶಕ್ತಿ ಮಹಿಳಾ ಸ್ವಸಹಾಯ ಸಂಘದವರು ನಡೆಸುತ್ತಿರುವ ಅಕ್ಕ ಕೆಫೆ, ಪ್ರೇರಣಾ ಸಂಜೀವಿನಿ ಮಹಿಳಾ ಒಕ್ಕೂಟದ ಸದಸ್ಯರು ನಡೆಸುತ್ತಿರುವ ಹಳ್ಳಿ ಸಂತೆಯನ್ನು, ಬಳಿಕ ಕೂಸಿನ ಮನೆ, ಡಿಜಿಟಲ್ ಅರಿವು ಕೇಂದ್ರ ಮತ್ತು ಪಂಚಾಯತ್ ಕಚೇರಿಗೆ ಭೇಟಿ ಮೆಚ್ಚುಗೆ ವ್ಯಕ್ತಪಡಿಸಿದರು.

ಗ್ರಾಮ ಕುಡಿಯುವ ನೀರು ನೈರ್ಮಲ್ಯ ಇಲಾಖೆಯ ಕಾರ್ಯಪಾಲಕ ಅಭಿಯಂತರರು, ಸಹಾಯಕ ಕಾರ್ಯಪಾಲಕ ಅಭಿಯಂತರರು, ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ, ಉಜಿರೆ ಗ್ರಾ.ಪಂ. ಅಧ್ಯಕ್ಷೆ ಉಷಾಕಿರಣ್ ಕಾರಂತ್, ಉಪಾಧ್ಯಕ್ಷ ರವಿ ಕುಮಾರ್, ಪಂ. ಅಭಿವೃದ್ಧಿ ಅಧಿಕಾರಿ ಪ್ರಕಾಶ್ ಶೆಟ್ಟಿ, ಕಾರ್ಯದರ್ಶಿ, ಸ್ಥಳೀಯ ಸದಸ್ಯರು, ಪಂ. ಸಿಬ್ಬಂದಿಗಳು, ಪಂಪ್ ಆಪರೇಟರ್ ಗಳು ಉಪಸ್ಥಿತರಿದ್ದರು.

Related posts

ಕುತ್ಲೂರು ಶಾಲಾ ಮಕ್ಕಳಿಗೆ ನೋಟ್ ಬುಕ್ ಕಲಿಕಾ ಸಾಮಾಗ್ರಿ ವಿತರಣೆ

Suddi Udaya

ಚಾರ್ಮಾಡಿ: ಕಂದಕಕ್ಕೆ ಉರುಳಿ ಬಿದ್ದ ಕಾರು: ಓರ್ವ ಮಹಿಳೆ ಸಾವು, ಮಕ್ಕಳು ಸಹಿತ ನಾಲ್ವರಿಗೆ ಗಂಭೀರ ಗಾಯ

Suddi Udaya

ಬಿಜೆಪಿ ಜಿಲ್ಲಾ ಎಸ್.ಟಿ ಮೋರ್ಚಾ ವತಿಯಿಂದ ಎಸ್.ಟಿ ಮೋರ್ಚಾ ಅಧ್ಯಕ್ಷ ರಾಜೇಶ್ ರವರ ಮೇಲೆ ಮಾರಣಾಂತಿಕ ಹಲ್ಲೆಯನ್ನು ಖಂಡಿಸಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಮನವಿ

Suddi Udaya

ತಾಲೂಕು ಮಟ್ಟದ ಕರಾಟೆ ಸ್ಪರ್ಧೆ: ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯ ವಿದ್ಯಾರ್ಥಿನಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಬೆಳಾಲು: ಶ್ರೀಮತಿ ಸುಲೋಚನಾ ಎಸ್. ಕೆರ್ಮುಣ್ಣಾಯ ನಿಧನ

Suddi Udaya

ದೇವಸ್ಥಾನದ ಅಭಿವೃದ್ದಿಗೆ ಪ್ರಸಾದಂ ಯೋಜನೆಯಡಿಯಲ್ಲಿ ಅನುದಾನ ಒದಗಿಸುವಂತೆ ಕೇಂದ್ರ ಪ್ರವಾಸೋದ್ಯಮ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ರವರಿಗೆ ಶಾಸಕ ಹರೀಶ್ ಪೂಂಜ ಮನವಿ

Suddi Udaya
error: Content is protected !!