July 23, 2026
ಅಭಿನಂದನೆಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿವರದಿ

ಉಜಿರೆ ಗ್ರಾ.ಪಂ.ಗೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನರ್ವಡೆ ವಿನಾಯಕ ಕರ್ಬಾರಿ ರವರು ಭೇಟಿ ಗ್ರಾಮ ಪಂಚಾಯತ್ ಕಾರ್ಯ ವೈಖರಿಗೆ ಮೆಚ್ಚುಗೆ

ಉಜಿರೆ: ಉಜಿರೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಜಲ್ ಜೀವನ್ ಮಿಷನ್ ಯೋಜನೆಯ ವಿವಿಧ ಕಾಮಗಾರಿಗಳ ಭೌತಿಕ ಪರಿಶೀಲನೆಗಾಗಿ ಜು.21ರಂದು ಉಜಿರೆ ಗ್ರಾ.ಪಂ.ಗೆ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನರ್ವಡೆ ವಿನಾಯಕ ಕರ್ಬಾರಿ ಐ.ಎ.ಎಸ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಜಲ್ ಜೀವನ್ ಮಿಷನ್ ಯೋಜನೆಯಡಿ ನಿರ್ಮಿಸಿದ ನೀರಚಿಲುಮೆಯ ಕುಡಿಯುವ ನೀರಿನ ಸ್ಥಾವರವನ್ನು ಪರಿಶೀಲಿಸಿದರು. ಬಳಿಕ ಆದಿಪರಾಶಕ್ತಿ ಮಹಿಳಾ ಸ್ವಸಹಾಯ ಸಂಘದವರು ನಡೆಸುತ್ತಿರುವ ಅಕ್ಕ ಕೆಫೆ, ಪ್ರೇರಣಾ ಸಂಜೀವಿನಿ ಮಹಿಳಾ ಒಕ್ಕೂಟದ ಸದಸ್ಯರು ನಡೆಸುತ್ತಿರುವ ಹಳ್ಳಿ ಸಂತೆಯನ್ನು, ಬಳಿಕ ಕೂಸಿನ ಮನೆ, ಡಿಜಿಟಲ್ ಅರಿವು ಕೇಂದ್ರ ಮತ್ತು ಪಂಚಾಯತ್ ಕಚೇರಿಗೆ ಭೇಟಿ ಮೆಚ್ಚುಗೆ ವ್ಯಕ್ತಪಡಿಸಿದರು.

ಗ್ರಾಮ ಕುಡಿಯುವ ನೀರು ನೈರ್ಮಲ್ಯ ಇಲಾಖೆಯ ಕಾರ್ಯಪಾಲಕ ಅಭಿಯಂತರರು, ಸಹಾಯಕ ಕಾರ್ಯಪಾಲಕ ಅಭಿಯಂತರರು, ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ, ಉಜಿರೆ ಗ್ರಾ.ಪಂ. ಅಧ್ಯಕ್ಷೆ ಉಷಾಕಿರಣ್ ಕಾರಂತ್, ಉಪಾಧ್ಯಕ್ಷ ರವಿ ಕುಮಾರ್, ಪಂ. ಅಭಿವೃದ್ಧಿ ಅಧಿಕಾರಿ ಪ್ರಕಾಶ್ ಶೆಟ್ಟಿ, ಕಾರ್ಯದರ್ಶಿ, ಸ್ಥಳೀಯ ಸದಸ್ಯರು, ಪಂ. ಸಿಬ್ಬಂದಿಗಳು, ಪಂಪ್ ಆಪರೇಟರ್ ಗಳು ಉಪಸ್ಥಿತರಿದ್ದರು.

Related posts

ಅಳದಂಗಡಿಯಲ್ಲಿ ನಡೆದ ತುಳುನಾಡ ಸಿಂಗಾರ ಕಾರ್ಯಕ್ರಮದಲ್ಲಿ ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆಗೆ ಚಿತ್ರಕಲೆಯಲ್ಲಿ ಪ್ರಥಮ ಸ್ಥಾನ

Suddi Udaya

ಬೆಳ್ತಂಗಡಿ ಗ್ರಾಮೀಣ ಮತ್ತು ನಗರ ಕಾಂಗ್ರೆಸ್ ಎಸ್ ಸಿ ಘಟಕದ ನೂತನ ಅಧ್ಯಕ್ಷರ ಮತ್ತು ಜಿಲ್ಲಾ ಉಪಾಧ್ಯಕ್ಷರ ನೇಮಕ

Suddi Udaya

ಬೆಳ್ತಂಗಡಿ: ತಾಳೆ ಬೆಳೆಯ ಬಗ್ಗೆ ಮಾಹಿತಿ

Suddi Udaya

ಜ.3 -4: ಭಾರತೀಯ ಜೈನ್ ಮಿಲನ್ ವಲಯ 8 ರ ಆಶ್ರಯದಲ್ಲಿ ರಾಜ್ಯ ಮಟ್ಟದ ಜಿನ ಭಜನಾ ಸ್ಪರ್ಧೆ ಸೀಸನ್ 9

Suddi Udaya

ಬೆಳ್ತಂಗಡಿ ವಾಣಿ ಶಿಕ್ಷಣ ಸಂಸ್ಥೆಯಿಂದ ನಿವೃತ್ತ ಶಿಕ್ಷಕ ದಿ| ದೇವಪ್ಪ ಗೌಡರಿಗೆ ಸಂತಾಪ

Suddi Udaya

ಉಜಿರೆ: ಎಸ್. ಡಿ. ಎಂ. ಪದವಿ ಪೂರ್ವ ಕಾಲೇಜಿನಲ್ಲಿ ‘ಪ್ರತಿಭಾ ಸಮ್ಮಾನ್-2025’

Suddi Udaya
error: Content is protected !!