September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ರತ್ನ ಮಾನಸ ಜೀವನ-ಶಿಕ್ಷಣ ವಿದ್ಯಾರ್ಥಿ ನಿಲಯದಲ್ಲಿ ನೇಜಿ ನಾಟಿ ಕಾರ್ಯಕ್ರಮ

ಉಜಿರೆ: ಇಲ್ಲಿಯ ರತ್ನ ಮಾನಸ ಜೀವನ-ಶಿಕ್ಷಣ ವಿದ್ಯಾರ್ಥಿ ನಿಲಯದಲ್ಲಿ ವಿದ್ಯಾರ್ಥಿಗಳಿಂದ ಜು. 20ರಂದು ನೇಜಿ ನೆಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

ರತ್ನಮಾನಸದ ನಿಲಯ ಪಾಲಕರಾದ ಯತೀಶ್ ಕೆ ಬಳಂಜ ಇವರು ನೇಜಿ ನೆಡುವ ವಿಧಾನ ಹಾಗೂ ರತ್ನ ಮಾನಸದ ಹಿರಿಯ ವಿದ್ಯಾರ್ಥಿ ಉದ್ಯಮಿ ಜಗದೀಶ ಪ್ರಸಾದ್ ಇವರು ಭತ್ತದ ಕೃಷಿಯ ಬಗ್ಗೆ ಉತ್ತಮ ಮಾಹಿತಿ ನೀಡಿದರು.

ನಿಲಯದ ವಿದ್ಯಾರ್ಥಿಗಳೊಂದಿಗೆ ಉಜಿರೆಯ ಎಸ್ ಡಿ ಎಂ ಕಾಲೇಜು(ಸ್ವಾಯತ್ತ) ಸಸ್ಯಶಾಸ್ತ್ರ ವಿಭಾಗದ ವಿದ್ಯಾರ್ಥಿಗಳು ಉತ್ಸಾಹದಿಂದ ಜೊತೆಗೂಡಿ ನೇಜಿ ನಾಟಿ ಮಾಡಿ, ನಂತರ ಕೆಸರು ಗದ್ದೆಯಲ್ಲಿ ಆಟವಾಡಿ ಸಂಭ್ರಮಿಸಿದರು.
ಸಸ್ಯಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಪ್ರೊಫೆಸರ್ ಶಕುಂತಲಾ. ಬಿ, ಸಹಾಯಕ ಪ್ರಾಧ್ಯಾಪಕರಾದ ಭವ್ಯ ನಾಯಕ್ ಮತ್ತು ಮಂಜುಶ್ರೀ ಉಪಸ್ಥಿತರಿದ್ದರು. ಸಾಮಾಜಿಕ ಕಾರ್ಯಕರ್ತ ಶಿವಪ್ರಸಾದ್ ಮಲೆಬೆಟ್ಟು , ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಪ್ರಭಾಕರ ಹೆಗ್ಡೆ , ನಿಲಯದ ಶಿಕ್ಷಕರಾದ ರವಿಚಂದ್ರ ಹಾಗೂ ಉದಯರಾಜ್ ಮತ್ತು ವಿದ್ಯಾರ್ಥಿಗಳ ಪೋಷಕರು ಭಾಗವಹಿಸಿದ್ದರು.

Related posts

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ‘ಜೀವನ ಕೌಶಲ’ ಕಾರ್ಯಾಗಾರ

Suddi Udaya

ಉಜಿರೆಯ ಎಸ್.ಡಿ.ಎಂ ಪ.ಪೂ ಕಾಲೇಜಿನ ಐವತ್ತು ವಿದ್ಯಾರ್ಥಿಗಳಿಗೆ ಸಂಸ್ಕೃತಭಾಷಾ ವಿದ್ಯಾರ್ಥಿವೇತನ

Suddi Udaya

ಭಾರತೀಯ ಜೈನ್ ಮಿಲನ್ ಬೆಳ್ತಂಗಡಿ ವತಿಯಿಂದ ಶ್ರವಣಬೆಳಗೊಳ ಶ್ರೀ ಗಳಿಗೆ ವಿನಯಾಂಜಲಿ ಕಾರ್ಯಕ್ರಮ

Suddi Udaya

ಚಾರ್ಮಾಡಿ ಘಾಟಿಯಲ್ಲಿ ಬಸ್ ಪಲ್ಟಿ ಹಲವರಿಗೆ ಗಾಯ

Suddi Udaya

ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರಿಂದ ವೀಡಿಯೊ ಹಾಗೂ ಮಾಹಿತಿಪತ್ರ ಅನಾವರಣ

Suddi Udaya

ಇಳಂತಿಲದಲ್ಲಿ ಕುಣಿತ ಭಜನಾ ತರಬೇತಿ ಆರಂಭೋತ್ಸವ

Suddi Udaya
error: Content is protected !!