July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಅಭಿವೃದ್ಧಿ ಚಾರಿಟೇಬಲ್ ಟ್ರಸ್ಟ್ ಸಭೆ

ಬೆಳ್ತಂಗಡಿ: ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಅಭಿವೃದ್ಧಿ ಚಾರಿಟೇಬಲ್ ಟ್ರಸ್ಟ್ ಇದರ ಸಭೆಯು ಮಂಗಳೂರಿನ ಕಂಕನಾಡಿ ಬ್ರಹ್ಮ ಬೈದರ್ಕಳ ಗರಡಿಯಲ್ಲಿ ಟ್ರಸ್ಟ್ ಅಧ್ಯಕ್ಷ ಸಂಜೀವ ಪೂಜಾರಿ ಬಿರ್ವ ಇವರ ಅಧ್ಯಕ್ಷತೆಯಲ್ಲಿ ಜರಗಿತು.

ಸಭೆಯ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಸಂಜೀವ ಪೂಜಾರಿಯವರು ವಿಶ್ವದ ಬಿಲ್ಲವರು ಸೇರಿ ನಿರ್ಮಿಸಿದ ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಅಭಿವೃದ್ಧಿಗೆ ಪೂರಕವಾಗಿ ಹಾಗೂ ಮಾತೆ ದೇಯಿ ಬೈದ್ಯೆತಿ ಕೋಟಿ ಚೆನ್ನಯರ ಆದರ್ಶಗಳ ಜೊತೆ ನಾಟಿ ವೈದ್ಯದ ವಿಶೇಷತೆಯನ್ನು ಜಗತ್ತಿಗೆ ಸಾರುವ ಕೆಲಸ ಮಾಡುವ ಬಗ್ಗೆ ಟ್ರಸ್ಟ್ ಕೆಲಸ ಮಾಡಲಿದೆ ಎಂದರು.

ವಿಶ್ವದ ಬಿಲ್ಲವರನ್ನು ಸೇರಿಸಿಕೊಂಡು ಗೆಜ್ಜೆಗಿರಿ ಕ್ಷೇತ್ರದ ಅಭಿವೃದ್ಧಿಗೆ ಪೂರಕವಾಗಿ ಕ್ಷೇತ್ರದ ಪಕ್ಕದಲ್ಲಿ ಕ್ಷೇತ್ರಾಡಳಿತ ಸಮಿತಿ ಖರೀದಿಸಿದ ಜಾಗದಲ್ಲಿ ಯಾತ್ರಿ ನಿವಾಸವನ್ನು ನಿರ್ಮಾಣ ಮಾಡುವ ಬಗ್ಗೆ ಮತ್ತು ಅದರ ಶಂಕುಸ್ಥಾಪನೆ ಮಾಡುವ ಬಗ್ಗೆ ಸಭೆಯಲ್ಲಿ ತೀರ್ಮಾನಿಸಲಾಯಿತು.

ಸಭೆಯಲ್ಲಿ ಗೆಜ್ಜೆಗಿರಿ ಕ್ಷೇತ್ರಾಡಳಿತ ಸಮಿತಿಯ ಗೌರವ ಅಧ್ಯಕ್ಷ ಪೀತಾಂಬರ ಹೆರಾಜೆ, ಅಧ್ಯಕ್ಷ ರವಿ ಪೂಜಾರಿ ಚಿಲಿಂಬಿ, ವಾಸ್ತುತಜ್ಞ ಆರ್ಕಿಟೆಕ್ಟ್ ಪ್ರಮಲ್ ಕುಮಾರ್ ಕಾರ್ಕಳ, ಕ್ಷೇತ್ರಾಡಳಿತ ಉಪಾಧ್ಯಕ್ಷರು ಹಾಗೂ ಟ್ರಸ್ಟ್ ನ ಪ್ರಧಾನ ಕಾರ್ಯದರ್ಶಿಯಾದ ಉಲ್ಲಾಸ್ ಕೋಟ್ಯಾನ್, ಕ್ಷೇತ್ರಾಡಳಿತ ಸಮಿತಿಯ ಉಪಾಧ್ಯಕ್ಷ ದೀಪಕ್ ಕೋಟ್ಯಾನ್, ಪ್ರಧಾನ ಕಾರ್ಯದರ್ಶಿ ಡಾ. ರಾಜಾರಾಂ, ಕೋಶಾಧಿಕಾರಿ ಮೋಹನ್ ದಾಸ್ ವಾಮಂಜೂರು,ಟ್ರಸ್ಟ್ ನ ಕೋಶಾಧಿಕಾರಿ ಹರೀಶ್ ಸಾಲ್ಯಾನ್ ಬಜಗೋಳಿ,ಪ್ರಮುಖರಾದ ಡಾ. ಸಂತೋಷ್ ಕುಮಾರ್ ಬೈರಂಪಳ್ಳಿ, ನಾರಾಯಣ ಮಚ್ಚಿನ, ರಾಜೇಂದ್ರ ಚಿಲಿಂಬಿ, ಜಯವಿಕ್ರಂ ಕಲ್ಲಾಪು, ಹರೀಶ್ ಕೆ ಪೂಜಾರಿ, ಕುಮಾರ್ ಇರುವೈಲ್, ಜಯರಾಮ ಪೂಜಾರಿ ಬೆಳುವಾಯಿ, ಜಯರಾಂ ಬಂಗೇರ ಹೆರಾಜೆ ಬೆಳ್ತಂಗಡಿ ಮುಂತಾದವರು ಉಪಸ್ಥಿತರಿದ್ದರು.

Related posts

ಫೆ 14, 15: ಮುಗೇರಡ್ಕ ಜೈ ಶ್ರೀ ರಾಮ್ ಫ್ರೆಂಡ್ಸ್ ಕ್ಲಬ್ ಅಲೆಕ್ಕಿ ರಜತ ಸಂಭ್ರಮದ ಪ್ರಯುಕ್ತ ರಜತ ಪಥ : ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ವೇಣೂರು ಶ್ರೀ ಬಾಹುಬಲಿ ಬೆಟ್ಟದ ಪರಿಸರದಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya

ಜಿಲ್ಲಾಮಟ್ಟದ ರಸಪ್ರಶ್ನೆ: ವೇಣೂರು ಸ. ಪ.ಪೂ. ಕಾಲೇಜು (ಪ್ರೌಢಶಾಲಾ ವಿಭಾಗ ) ವಿದ್ಯಾರ್ಥಿಗಳು ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಮಿಯ್ಯಾರು ಶ್ರೀ ವನದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾಮಹೋತ್ಸವ, ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ಮತ್ತು ರಂಗಪೂಜೆ

Suddi Udaya

ವಿದ್ವತ್ ಪಿ.ಯು. ಕಾಲೇಜಿನಲ್ಲಿ ಗಾಂಧಿಜಯಂತಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರೀ ಜನ್ಮದಿನಾಚರಣೆ

Suddi Udaya

ಬಂದಾರು: ಸಂಯೋಗ ಆಯುರ್ವೇದಾಲಯ ಶುಭಾರಂಭ

Suddi Udaya
error: Content is protected !!