September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಂದಾರು: ಪೆರ್ಲ -ಬೈಪಾಡಿ ಸ.ಹಿ.ಪ್ರಾ. ಶಾಲೆಯ ವಿವೇಕ ಕೊಠಡಿ ಉದ್ಘಾಟನೆ

ಬಂದಾರು: ಇಲ್ಲಿಯ ಪೆರ್ಲ -ಬೈಪಾಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಇದರ ವಿವೇಕ ಕೊಠಡಿ ಉದ್ಘಾಟನಾ ಕಾರ್ಯಕ್ರಮ ಜು. 21 ರಂದು ನಡೆಯಿತು.

ಕೊಠಡಿಯ ಉದ್ಘಾಟನೆಯನ್ನು ಶಾಸಕ ಹರೀಶ್ ಪೂಂಜ ನೆರವೇರಿಸಿ ಮಾತನಾಡಿ ಸರಕಾರಿ ಶಾಲೆಗಳ ಉಳಿವಿನ ಬಗ್ಗೆ ಮಾತನಾಡುತ್ತಾ ಅವರು ಪೋಷಕರು ತಮ್ಮ ಮಕ್ಕಳನ್ನು ಸರಕಾರಿ ಶಾಲೆಗೆ ಸೇರಿಸುವುದರ ಮೂಲಕ ಶಾಲೆಯನ್ನು ಉಳಿಸಿ ಬೆಳೆಸುವ ಕಾರ್ಯ ಆಗಬೇಕಿದೆ. ಉತ್ತಮ ಗುಣಮಟ್ಟದ ಶಿಕ್ಷಣ ಸರಕಾರಿ ಶಾಲೆಗಳಲ್ಲಿ ದೊರೆಯುತ್ತಿದ್ದು, ಶಾಲೆಗಳನ್ನು ಉಳಿಸಿಕೊಳ್ಳುವತ್ತ ಊರಿನವರು ಗಮನ ಹರಿಸಬೇಕಾಗಿದೆ ಎಂದರು.

ಈ ಸಂದರ್ಭದಲ್ಲಿ ಬಂದಾರು ಗ್ರಾಮ ಪಂಚಾಯತ್ ಅಧ್ಯಕ್ಷ ದಿನೇಶ್ ಗೌಡ ಖಂಡಿಗ, ಪಂಚಾಯತ್ ಸದಸ್ಯರಾದ ಅನಿತ. ಕೆ, ಕುರುಡಂಗೆ, ಭಾರತಿ ಕೋಡಿಯೆಲ್ , ತಾಲೂಕು ಪಂಚಾಯತ್ ಮಾಜಿ ಸದಸ್ಯರಾದ ಮಹಾಬಲ ಗೌಡ, ಕೃಷ್ಣಯ್ಯ ಆಚಾರ್ಯ, ಪದ್ಮುಂಜ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ರಕ್ಷಿತ್ ಪಣೆಕ್ಕರ, ಹೊನ್ನಪ್ಪ ಗೌಡ, ಡೀಕಯ್ಯ ಗೌಡ, ಪೆರ್ಲ- ಬೈಪಾಡಿ ಹಾಲು ಉತ್ಪಾದಕರ ಸಂಘದ ಅಧ್ಯಕ್ಷರಾದ ಉಮೇಶ್ ಗೌಡ ಉಪಸ್ಥಿತರಿದ್ದರು.


ಕಾರ್ಯಕ್ರಮದಲ್ಲಿ ಶಾಲೆಯ ಎಸ್ ಡಿ ಎಂ ಸಿ ಅಧ್ಯಕ್ಷ ದಾಮೋದರ ಗೌಡ ಕಾಡoಡ, ಪದಾಧಿಕಾರಿಗಳು- ಸದಸ್ಯರು, ಶಾಲಾ ಶಿಕ್ಷಕರು, ಪೋಷಕರು ಹಾಗೂ ಊರಿನ ನಾಗರಿಕರು ಪಾಲ್ಗೊಂಡಿದ್ದರು.

Related posts

ಹೊಕ್ಕಾಡಿಗೋಳಿ ಶಾಲಾ ಪ್ರಾರಂಭೋತ್ಸವ

Suddi Udaya

ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ನಗರ ಮಹಾಶಕ್ತಿಕೇಂದ್ರ ದಿಂದ ವಿಧಾನಸಭಾ ಚುನಾವಣಾ ಪೂರ್ವ ತಯಾರಿ ಸಭೆ

Suddi Udaya

ಕನ್ಯಾಡಿ: ನೇರೊಳ್ದಪಲ್ಕೆ ಅಂಗನವಾಡಿಗೆ ಗ್ಯಾಸ್ ಸ್ಟೌವ್ ಕೊಡುಗೆ

Suddi Udaya

ಭಜನಾ ಕಮ್ಮಟ; ಭಜನೆಗಳು ಜೀವನ ಶಿಕ್ಷಣ ಕಲಿಸುತ್ತವೆ: ಬಿ.ಕೆ. ಧನಂಜಯ ರಾವ್

Suddi Udaya

ಬೆಳ್ತಂಗಡಿ ಡಿ.ಕೆ.ಆರ್. ಡಿ.ಎಸ್ ನೇತೃತ್ವದಲ್ಲಿ ವಿಶ್ವ ಕ್ಯಾನ್ಸರ್ ದಿನಾಚರಣೆ ಹಾಗೂ ಕ್ಯಾನ್ಸರ್ ರೋಗಿಗಳಿಗಾಗಿ ಧನ ಸಹಾಯ ಸಂಗ್ರಹಣಾ ಅಭಿಯಾನ

Suddi Udaya

ಕಡಿರುದ್ಯಾವರ: ಕೃಷಿ ತೋಟಗಳಿಗೆ ಕಾಡಾನೆ ದಾಳಿ

Suddi Udaya
error: Content is protected !!