ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಸಂಜಯ್ ಗ್ಲೋಬಲ್ ಫೌಂಡೇಶನ್ ಇದರ ನೂತನ ಪದಾಧಿಕಾರಿಗಳ ಆಯ್ಕೆ

ಬೆಳ್ತಂಗಡಿ : ಸಂಜಯ್ ಗ್ಲೋಬಲ್ ಫೌಂಡೇಶನ್ ಬೆಳ್ತಂಗಡಿ ಇದರ ವಾರ್ಷಿಕ ಸಭೆಯು ಜು. 20ರಂದು ಬೆಳ್ತಂಗಡಿ ಜಮೀಯತುಲ್ ಫಲಾಹ್ ಸಭಾಭವನದಲ್ಲಿ ರಶೀದ್ ಬೆಳ್ತಂಗಡಿ ಅಧ್ಯಕ್ಷತೆಯಲ್ಲಿ ನಡೆಯಿತು.

ಸಂಪನ್ಮೂಲ ವ್ಯಕ್ತಿಯಾಗಿ ಸಾಮಾಜಿಕ ಹೋರಾಟಗಾರ ಅಬ್ಬುಲ್ ರಹಮಾನ್ ನಾವೂರು ಆಗಮಿಸಿದ್ದರು. 2024-25ನೇ ಸಾಲಿನ ವರದಿಯನ್ನು ಪ್ರಧಾನ ಕಾರ್ಯದರ್ಶಿಯಾದ ಮಹಮ್ಮದ್ ಕುದ್ರಡ್ಕ ಮಂಡಿಸಿದರು.

ನೂತನ ಸಾಲಿನ ಅಧ್ಯಕ್ಷರಾಗಿ ಅಕ್ಬರ್ ಬೆಳ್ತಂಗಡಿ , ಪ್ರಧಾನ ಕಾರ್ಯದರ್ಶಿಯಾಗಿ ಹನೀಫ್ ವರ್ಷಾ, ಉಪಾಧ್ಯಕ್ಷರಾಗಿ ಇಸ್ಮಾಲಿ ಐ ಬಿ, ಜೊತೆಕಾರ್ಯದರ್ಶಿಯಾಗಿ ಮಹಮ್ಮದ್ ಕುದ್ರಡ್ಕ, ಕೋಶಾಧಿಕಾರಿಯಾಗಿ ರಿಝ್ವಾನ್ ಬಿಕೆ ಹಾಗೂ ಕಾರ್ಯಕಾರಿ ಸಮಿತಿಯ ಸದಸ್ಯರುಗಳಾಗಿ ರಶೀದ್ ಬೆಳ್ತಂಗಡಿ, ರಿಯಾಝ್ ಸಂಜಯನಗರ, ಅಬ್ಬಾಸ್ ಸಂಜಯನಗರ, ಶೈರೊಝ್ ಉದಯನಗರ ಇವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.

ಈ ಸಂದರ್ಭದಲ್ಲಿ ಸಂಜಯ್ ಗ್ಲೋಬಲ್ ಫೌಂಡೇಶನ್ ಸದಸ್ಯರು ಉಪಸ್ಥಿತರಿದ್ದರು. ಹನೀಫ್ ವರ್ಷಾ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.

Related posts

ಬೆಳ್ತಂಗಡಿ: ಶ್ರೀ ದುರ್ಗಾ ಬೆಂಗಳೂರು ಅಯ್ಯಂಗಾರ್ ಬೇಕರಿ ಶುಭಾರಂಭ

Suddi Udaya

ಬಳಂಜ: ಅಟ್ಲಾಜೆ ಅಂಗನವಾಡಿ ಶಿಕ್ಷಕಿ ಜಾನಕಿ ಹೃದಯಾಘಾತದಿಂದ ನಿಧನ

Suddi Udaya

ವಾಲಿಬಾಲ್ ಪಂದ್ಯಾಟ; ಯಕ್ಷಿತ ಜೆ ರಾಷ್ಟ್ರಮಟ್ಟಕ್ಕೆ ಆಯ್ಕೆ

Suddi Udaya

ನಿಡ್ಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವಾರ್ಷಿಕ ಮಹಾಸಭೆ: ರೂ. 59.78 ಲಕ್ಷ ಲಾಭ , ಸದಸ್ಯರಿಗೆ ಶೇ. 7 ಡಿವಿಡೆಂಟ್ ಘೋಷಣೆ

Suddi Udaya

ಮಡಂತ್ಯಾರು ಪುಂಜಾಲಕಟ್ಟೆಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಸ್ಥಳೀಯ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಹದಗೆಟ್ಟಿರುವ ರಸ್ತೆಯ ಶ್ರಮದಾನ

Suddi Udaya

ಚಿತ್ರೀಕರಣ ಪೂರ್ಣಗೊಳಿಸಿದ ಕೃಷ್ಣ ಬೆಳ್ತಂಗಡಿ ನಿರ್ದೇಶನದ “ಇದು ನಮ್ ಶಾಲೆ”

Suddi Udaya
error: Content is protected !!