22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಿತ್ತಬಾಗಿಲು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ: ಕೇಶವ ಫಡಕೆ ಅಧ್ಯಕ್ಷ – ಸಂದೀಪ್ ಪೂಜಾರಿ ಕಾರ್ಯದರ್ಶಿ

ಕೊಲ್ಲಿ: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಮಿತ್ತಬಾಗಿಲು ಇದರ ಮಹಾಸಭೆ ಜು.20 ರಂದು ಸಮಿತಿಯ ಅಧ್ಯಕ್ಷ ಸುರೇಶ್ ಪೂಜಾರಿಯವರ ಅಧ್ಯಕ್ಷತೆಯಲ್ಲಿ ಕೊಲ್ಲಿ ಶ್ರೀ ದುರ್ಗಾದೇವಿ ದೇವಾಸ್ಥಾನದ ವಠಾರದಲ್ಲಿ ಜರುಗಿತು.


ಈ ಸಂದರ್ಭದಲ್ಲಿ ನೂತನ ಸಮಿತಿಗೆ ಪದಾಧಿಕಾರಿಗಳನ್ನು ಆರಿಸಲಾಯಿತು. ಗೌರವಾಧ್ಯಕ್ಷರಾಗಿ ಸುರೇಶ್ ಪೂಜಾರಿ ಬನದಬಾಗಿಲು, ಅಧ್ಯಕ್ಷರಾಗಿ ಕೇಶವ ವಿ. ಫಡಕೆ ಸುಭಾಶ್‌ಭಾಗ್, ಉಪಾಧ್ಯಕ್ಷರಾಗಿ ಶ್ರೀಮತಿ ವನಿತಾ ಕುರುಬರಗುಡ್ಡೆ, ಕಾರ್ಯದರ್ಶಿಯಾಗಿ ಸಂದೀಪ್ ಪೂಜಾರಿ ಬೊಳ್ಳಾಜೆ, ಜೊತೆ ಕಾರ್ಯದರ್ಶಿಯಾಗಿ ಶ್ರೀಮತಿ ಮೀನಾಕ್ಷಿ ಮಾಲೂರು, ಕೋಶಾಧಿಕಾರಿಯಾಗಿ ಮೋನಪ್ಪ ಗೌಡ ಇವರನ್ನು ಆಯ್ಕೆ ಮಾಡಲಾಯಿತು,

ಗೌರವ ಸಲಹೆಗಾರರಾಗಿ ದಾಸಪ್ಪ ಗೌಡ ಕಂಜಾನು, ಕೆ. ವಾಸುದೇವ ರಾವ್ ಕಕ್ಕೆನೇಜಿ, ಕೆ. ಕೃಷ್ಣಪ್ಪ ಪೂಜಾರಿ, ವಿಜಯ ಗೌಡ, ಸುಧಾಕರ ಪೂಜಾರಿ, ಎಸ್. ವಿನಯಚಂದ್ರ, ಸ್ವಸ್ತಿಕ್, ಅಭಿಜಿತ್, ನಾರಾಯಣ ಪೂಜಾರಿ, ಗುರುಪ್ರಸಾದ್, ನಿತೇಶ್, ಪ್ರಶಾಂತ್, ಹರ್ಷಿತ್, ನಿತೇಶ್ ಸಂಜೀವ ಗೌಡ, ರಂಜಿತ್, ರಮೇಶ್, ವಿಜಯ ಪೂಜಾರಿ, ಗೋಪಾಲ ಪೂಜಾರಿ, ಕೃಷ್ಣ ದೇವಾಡಿಗ ಇವರನ್ನು ಆರಿಸಲಾಗಿದೆ.

Related posts

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಲ್ಯಾಬ್ ಪರೀಕ್ಷೆಯಲ್ಲಿ ನಿಖರ ವರದಿ ನೀಡಬಲ್ಲ ಅತ್ಯಾಧುನಿಕ ಸಿಎಲ್‌ಐಎ ಮೆಶಿನ್ ಅಳವಡಿಕೆ

Suddi Udaya

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ಬೆಳ್ತಂಗಡಿಯ ವಾರ್ಷಿಕ ಮಹಾಸಭೆ

Suddi Udaya

ನಾವೂರು :ಕಿರ್ನಡ್ಕ ನಿವಾಸಿ ಪ್ರದೀಪ್ ಹೃದಯಾಘಾತದಿಂದ ನಿಧನ

Suddi Udaya

ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನಲ್ಲಿ “ ಕಲೆಗಳ ದೃಷ್ಟಿಕೋನದಿಂದ ಶಿಕ್ಷಣದ ವ್ಯಾಖ್ಯಾನ” ಉಪನ್ಯಾಸಮಾಲಿಕೆ

Suddi Udaya

ಮದ್ದಡ್ಕ ಪಲ್ಕೆ ಎಂಬಲ್ಲಿ ಮಾರಿ ಪೂಜೆ ಹಾಗೂ ಗುಳಿಗ ದೈವದ ಗಗ್ಗರ ಸೇವೆ

Suddi Udaya

ಲಿಫ್ಟ್‌ನಲ್ಲಿ ಸಿಲುಕಿ ಬೆಳಾಲಿನ ಯುವಕ ಸಾವು

Suddi Udaya
error: Content is protected !!