September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಹಲವಾರು ಶವಗಳನ್ನು ಹೂತಿದ್ದೆ ಎಂಬ ದೂರು ಪ್ರಕರಣ: ಎಸ್.ಐ.ಟಿ. ತನಿಖಾ ತಂಡದಿಂದ ಸತ್ಯಾಂಶ ಅತಿ ಶೀಘ್ರವಾಗಿ ಬಹಿರಂಗ ಪಡಿಸಲಿ: ಕೆ. ಪಾರ್ಶ್ವನಾಥ್ ಜೈನ್

ಧರ್ಮಸ್ಥಳ ಗ್ರಾಮದ ಪೊಲೀಸ್ ಠಾಣೆಯಲ್ಲಿ ದಾಖಲಿಸಿರುವ “ಹಲವಾರು ಶವಗಳನ್ನು ಹೂತಿದ್ದೆ” ಎಂಬ ದೂರು ಪ್ರಕರಣವು ಇತ್ತೀಚಿನ ದಿನಗಳಲ್ಲಿ ರಾಷ್ಟ್ರೀಯ ಮಟ್ಟದಲ್ಲಿ ಹಲವಾರು ತರ್ಕವಾತರ್ಕಗಳು, ಊಹಾಪೋಹಗಳು ಹಾಗೂ ಗೊಂದಲಗಳನ್ನು ಹುಟ್ಟುಹಾಕಿದೆ. ಈ ಘಟನೆಗೆ ಸಂಬಂಧಿಸಿದಂತೆ ಪ್ರಾಮಾಣಿಕವಾಗಿ ತನಿಖೆ ನಡೆಯಬೇಕೆಂಬ ನಮ್ಮ ಹಾಗೂ ಸಾರ್ವಜನಿಕರ ನಿರೀಕ್ಷೆಯ ಹಿನ್ನೆಲೆಯಲ್ಲಿ, ಈ ಪ್ರಕರಣವನ್ನು ವಿಶೇಷ ತನಿಖಾ ತಂಡ (ಎಸ್.ಐ.ಟಿ.) ಗೆ ರಾಜ್ಯ ಸರ್ಕಾರ ಹಸ್ತಾಂತರಿಸಿದೆ ಎಂಬುದು ತಿಳಿದು ಬಂದಿದೆ. ಸರ್ಕಾರದ ಈ ನಿಲುವು ಉತ್ತಮವಾಗಿದೆ.

ಸಮಾಜದ ನೈತಿಕತೆ ಹಾಗೂ ಶ್ರದ್ಧೆಗೆ ನಿಲುಕುವ ಬಲವಾದ ಆಧಾರವೆಂದರೆ “ಸತ್ಯ” ಆದ್ದರಿಂದ, ಈ ಪ್ರಕರಣದಲ್ಲಿ ಎಸ್.ಐ.ಟಿ. ತನಿಖಾ ತಂಡ ಸತ್ಯಾಂಶವನ್ನು ಅತಿ ಶೀಘ್ರವಾಗಿ ಪ್ರಾಮಾಣಿಕ ತನಿಖೆ ನಡೆಸಿ ಸಾರ್ವಜನಿಕರ ಮುಂದೆ ಬಹಿರಂಗಪಡಿಸಬೇಕು ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ವಕ್ತಾರರು ಕೆ. ಪಾರ್ಶ್ವನಾಥ್ ಜೈನ್ ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Related posts

ಶ್ರೀ ಕ್ಷೇತ್ರ ಮಂಗಳಗಿರಿಯ ಆಡಳಿತ ಮೋಕ್ತೇಸರಾದ ರಾಜೀವ ಇವರ ವತಿಯಿಂದ ಮುಂಡೂರು ಶಾಲಾ ಮಕ್ಕಳಿಗೆ ಬರೆಯುವ ಪುಸ್ತಕ ವಿತರಣೆ

Suddi Udaya

ಸಾಮಾಜಿಕ ಜಾಲತಾಣದಲ್ಲಿ ಎಸ್‌ಡಿಪಿಐ ವಿರುದ್ಧ ಅವಹೇಳನಕಾರಿ ಪೋಸ್ಟ್: ಬೆಳ್ತಂಗಡಿ ಕ್ಷೇತ್ರ ಸಮಿತಿ ವತಿಯಿಂದ ಧರ್ಮಸ್ಥಳ ಠಾಣೆಗೆ ದೂರು

Suddi Udaya

ಬಂದಾರು: ಕಳೆದು ಹೋಗಿದ್ದ ರೂ.2.50 ಲಕ್ಷ ಮೌಲ್ಯದ ಚಿನ್ನ ಹಾಗೂ 10 ಸಾವಿರ ನಗದನ್ನು ಹಿಂದುರುಗಿಸಿ ಕೊಟ್ಟು ಮಾನವೀಯ ಮೆರೆದ ವಿನಯ್ ನಿವೇದಿತಾ

Suddi Udaya

ಇಳಂತಿಲ ಗ್ರಾ.ಪಂ. ಗ್ರಾಮ ಸಭೆ

Suddi Udaya

ಕಳೆಂಜ ಗ್ರಾ.ಪಂ. ನಲ್ಲಿ ಕಸ್ತೂರಿ ರಂಗನ್ ವರದಿ ವಿರೋಧಿಸಿ ಪ್ರತಿಭಟನೆ: ಸರಕಾರಕ್ಕೆ ಮನವಿ

Suddi Udaya

ಸಿವಿಲ್ ಇಂಜಿನಿಯರಿಂಗ್ ನಲ್ಲಿ ನ್ಯಾಯತರ್ಫುವಿನ ಮೋಹಿನಿ ಹೆಚ್ ರವರಿಗೆ ಚಿನ್ನದ ಪದಕ

Suddi Udaya
error: Content is protected !!