July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಾಶಿಪಟ್ಣ ಗ್ರಾಮ ಪಂಚಾಯತ್ ನ ಪ್ರಥಮ ಸುತ್ತಿನ ಗ್ರಾಮಸಭೆ

ಕಾಶಿಪಟ್ಣ:ಕಾಶಿಪಟ್ಣ ಗ್ರಾಮ ಪಂಚಾಯತ್ ನ 2025-26 ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮಸಭೆಯು ಪಂಚಾಯತ್ ಅಧ್ಯಕ್ಷ ಸತೀಶ್ ಕೆ ಕಾಶಿಪಟ್ಣ ಇವರ ಅಧ್ಯಕ್ಷತೆಯಲ್ಲಿ ಪಂಚಾಯತ್ ಸಭಾಂಗಣದಲ್ಲಿ ಜು.21 ರಂದು ನಡೆಯಿತು.

ಮಾರ್ಗದರ್ಶಿ ಅಧಿಕಾರಿ ಬೆಳ್ತಂಗಡಿ ತೋಟಗಾರಿಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಚಂದ್ರಶೇಖರ್ ಸಭೆಯನ್ನು ಮುನ್ನಡೆಸಿದರು.

ಗ್ರಾಮಸಭೆಯಲ್ಲಿ ಅಕ್ರಮ ಮದ್ಯ ಮಾರಾಟ ಮಾಡುವವರ ವಿರುದ್ದ ಕಾನೂನು ಕ್ರಮ ಕೈಗೊಳ್ಳಲು ಗ್ರಾಮಸ್ಥರು ಆಗ್ರಹಿಸಿದರು. ಬೀದಿ ದೀಪ ವಿಸ್ತರಣೆ, ರಸ್ತೆ ಸರಿಪಡಿಸುವಿಕೆ, ಪೊಲೀಸರು ರಾತ್ರಿ ಹೊತ್ತು ಗಸ್ತು ತಿರುಗುವಿಕೆ ಮಾಡಬೇಕು.ಕಾಶಿಪಟ್ಣದಲ್ಲಿ ಪಶು ಆಸ್ಪತ್ರೆ ನಿರ್ಮಿಸಬೇಕೆಂದು ಗ್ರಾಮಸ್ಥರು ಒತ್ತಾಯಿಸಿದರು.

ಪಂಚಾಯತ್ ಅಧ್ಯಕ್ಷ ಸತೀಶ್ ಕಾಶಿಪಟ್ಣ ಮಾತನಾಡಿ ಗ್ರಾಮದ ಸರ್ವತೋಮುಖ ಬೆಳವಣಿಗೆಗೆ ಸದಾ ಗ್ರಾಮಸ್ಥರು, ಅಧಿಕಾರಿಗಳು ಸಹಕಾರ ನೀಡಿದ್ದು ಸಂತೋಷ ತಂದಿದೆ‌.ನಾನು ಕಳೆದ ಹಲವಾರು ವರ್ಷಗಳಿಂದ ಪಂಚಾಯತ್ ಅಧ್ಯಕ್ಷನಾಗಿ, ಸದಸ್ಯನಾಗಿ ಸುಮಾರು 50 ಗ್ರಾಮ ಸಭೆಯಲ್ಲಿ ಭಾಗವಹಿಸಿದ್ದೇನೆ. ಗ್ರಾಮದ ಜನರ ಕಷ್ಟ ಸುಖಗಳಿಗೆ ಪ್ರಾಮಾಣಿಕವಾಗಿ ಸ್ಪಂದಿಸಿದ್ದೇನೆ ಎಂದರು.

ಪಂಚಾಯತ್ ಅಭಿವೃದ್ಧಿ ಅಧಿಕಾರಿ ಆಶಾಲತಾ ಎಚ್, ಉಪಾಧ್ಯಕ್ಷೆ ಶುಭವಿ ,ಕಾರ್ಯದರ್ಶಿ ಲೀನಾ ಬೆನಡಿಕ್ಟ ಲೋಬೋ, ಪಂಚಾಯತ್ ಸದಸ್ಯರಾದ ಶಿಲ್ಪಾ, ಸುಶೀಲ, ಅಶೋಕ್ ಕುಮಾರ್, ರವೀಂದ್ರ ಪಿ, ಸವಿತಾ ಹಾಗೂ ವಿವಿಧ ಇಲಾಖೆಯ ಇಲಾಖಾಧಿಕಾರಿಗಳು ಉಪಸ್ಥಿತರಿದ್ದರು.

ಪಂಚಾಯತ್ ಸಿಬ್ಬಂದಿಗಳು ಸಹಕರಿಸಿದರು. ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

Related posts

ಬಜಿರೆ ಗ್ರಾಮದ ಬಾಡಾರು ಮನೆಯ ನಾರಾಯಣ ಪೂಜಾರಿ ನಿಧನ

Suddi Udaya

ಲಯನ್ಸ್ ಕ್ಲಬ್ ಬೆಳ್ತಂಗಡಿ ವತಿಯಿಂದ ಶಿಕ್ಷಕರ ದಿನಾಚರಣೆ: ಪ್ರತಿಯೊಬ್ಬರೂ ಉನ್ನತವಾದ ಸ್ಥಾನದಲ್ಲಿ ಇರಬೇಕಾದರೆ ಮುಖ್ಯ ಕಾರಣ ಶಿಕ್ಷಕರು: ಕಿಶೋರ್ ಕುಮಾರ್

Suddi Udaya

ಧರ್ಮಸ್ಥಳ: ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ : ವಾರೀಸುದಾರರು ಧರ್ಮಸ್ಥಳ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

Suddi Udaya

ಉಜಿರೆ: ಎಸ್. ಡಿ. ಎಂ ಆಂ.ಮಾ. ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ವೃತ್ತಿ ಮಾರ್ಗದರ್ಶನ

Suddi Udaya

ಬೆಳ್ತಂಗಡಿ: ನಾಲ್ಕು ಮಂದಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರು ಎಸ್.ಐ.ಟಿ ವಿಚಾರಣೆಗೆ ಹಾಜರು

Suddi Udaya

ಕರ್ನಾಟಕ ಔಷಧಿ ವ್ಯಾಪಾರಿಗಳ ಸಂಘದಿಂದ ಉಜಿರೆಯ ಶ್ರೀಧರ‌ ಕೆ.ವಿ ರವರಿಗೆ ಸನ್ಮಾನ

Suddi Udaya
error: Content is protected !!