25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮುಂಡಾಜೆ ಕೀರ್ತನ ಕಲಾತಂಡದಿಂದ ‘ಆಟಿಡೊಂಜಿ ಐತಾರಾ’ ಕಾರ್ಯಕ್ರಮ

ಮುಂಡಾಜೆ : ಇಲ್ಲಿಯ ಕೀರ್ತನ ಕಲಾತಂಡ ಇದರ ಆಶಯದಲ್ಲಿ ಆಟಿಡೊಂಜಿ ಐತಾರಾ ಕಾರ್ಯಕ್ರಮವು ಜು.20ರಂದು ಮುಂಡಾಜೆ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು.

ಕಾರ್ಯಕ್ರಮವನ್ನು ರತ್ನರಾಜ ಹೆಗಡೆ ನೆಯ್ಯಾಲ್ ದೀಪ ಪ್ರಜ್ವಲನೆಯ ಮೂಲಕ ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಾಬು ಪೂಜಾರಿ ಕೂಳೂರು ವಹಿಸಿ, ಆಟಿ ತಿಂಗಳಿನ ವಿಶೇಷತೆ ಹಾಗೂ ಆಟಿ ತಿಂಗಳಿನ ಮಹತ್ವವನ್ನು ತಿಳಿಸಿದರು.

ಈ ಸಂದರ್ಭದಲ್ಲಿ ಕುಂಜಣ್ಣ ನಾಯ್ಕ ಹುರ್ತಜೆ, ರಾಮಚಂದ್ರ ಭಟ್ ಅರೆಕಲ್, ಗಣೇಶ ಬಂಗೇರ, ಚೆನ್ನಕೇಶವ ಅರಸಮಜಲು ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಭರತ್ ಶೆಟ್ಟಿ, ಚಂದ್ರಕಾಂತ ಪ್ರಭು ನಿಡಿಗಲ್, ಜಯರಾಜ್ ಸಾಲಿಯಾನ್, ಯೋಗೀಶ್ ಗುಡಿಗಾರ್ ಕಟ್ಟಡಬೈಲು, ಶೀನಪ್ಪ ಗೌಡ, ಲೀಲಾವತಿ ಬಾಲಕೃಷ್ಣ ನಾಯ್ಕ, ಸದಾಶಿವ ನಾಯ್ಕ ಪಣಿಕ್ಕಲ್ ಇವರು ಉಪಸ್ಥಿತರಿದ್ದರು.

ಕಲಾತಂಡದ ಅಧ್ಯಕ್ಷ ಸದಾನಂದ ಬಿ ಮುಂಡಾಜೆ ಸ್ವಾಗತಿಸಿ, ವಿನಿತ್ ಧನ್ಯವಾದವಿತ್ತರು. ಕುಮಾರಿ ಜಿತೀಕ್ಷಾ ಕಾರ್ಯಕ್ರಮವನ್ನು ನಿರೂಪಿಸಿದರು. ನಂತರ ಕೀರ್ತನ ಕಲಾ ತಂಡದ ಸದಸ್ಯರಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಬಂದಂತಹ ಅತಿಥಿಗಳಿಗೆ ಹಾಗೂ ಸಭಿಕರಿಗೆ ತಂಡದ ಸದಸ್ಯರು ತಯಾರಿಸಿದಂತಹ ವಿವಿಧ ತಿಂಡಿ ತಿನಿಸುಗಳನ್ನು ನೀಡಲಾಯಿತು. ಮಧ್ಯಾಹ್ನದ ನಂತರ ವಿವಿಧ ಆಟೋಟ ಸ್ಪರ್ಧೆಗಳನ್ನು ನಡೆಸಿ, ವಿಜೇತರಿಗೆ ಬಹುಮಾನವನ್ನು ವಿತರಿಸಲಾಯಿತು.

Related posts

ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಸಂಭ್ರಮದ ಸ್ವಾತಂತ್ರ್ಯ

Suddi Udaya

ಶ್ರೀ ಧ.ಮಂ ಪ.ಪೂ ಕಾಲೇಜು : ರಾ. ಸೇ ಯೋಜನಾ ದಿನಾಚರಣೆ ಹಾಗೂ ಪ್ರಾಚಾರ್ಯರಿಗೆ ಅಭಿನಂದನೆ

Suddi Udaya

ರಾಷ್ಟ್ರೀಯ ಸಬ್ ಜ್ಯೂನಿಯರ್ ವಾಲಿಬಾಲ್ ಪಂದ್ಯಾಟಕ್ಕೆ ವಾಣಿ ಆಂ.ಮಾ. ಶಾಲೆಯ ವಿದ್ಯಾರ್ಥಿ ಶ್ರೇಯಸ್ ಎಸ್ ಆಯ್ಕೆ

Suddi Udaya

ಕೊಕ್ರಾಡಿ ಸರಕಾರಿ ಪ್ರೌಢಶಾಲೆ ಪುಸ್ತಕ ವಿತರಣೆ ಮತ್ತು ಪೋಷಕರ ಸಭೆ

Suddi Udaya

ಎಲ್ ಸಿ ಆರ್ ಇಂಡಿಯನ್ ವಿದ್ಯಾಸಂಸ್ಥೆ ಕಕ್ಯಪದವು ಪದವಿ ವಿಭಾಗದಲ್ಲಿ ನಶಾಮುಕ್ತ ಭಾರತ ಅಭಿಯಾನ ಕುರಿತು ಪ್ರತಿಜ್ಞಾವಿಧಿ ಸ್ವೀಕಾರ

Suddi Udaya

ತೆಕ್ಕಾರು ಸರಳಿಕಟ್ಟೆ ಎಸ್.ವೈ.ಎಸ್. ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!