September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮುಂಡಾಜೆ ಕೀರ್ತನ ಕಲಾತಂಡದಿಂದ ‘ಆಟಿಡೊಂಜಿ ಐತಾರಾ’ ಕಾರ್ಯಕ್ರಮ

ಮುಂಡಾಜೆ : ಇಲ್ಲಿಯ ಕೀರ್ತನ ಕಲಾತಂಡ ಇದರ ಆಶಯದಲ್ಲಿ ಆಟಿಡೊಂಜಿ ಐತಾರಾ ಕಾರ್ಯಕ್ರಮವು ಜು.20ರಂದು ಮುಂಡಾಜೆ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು.

ಕಾರ್ಯಕ್ರಮವನ್ನು ರತ್ನರಾಜ ಹೆಗಡೆ ನೆಯ್ಯಾಲ್ ದೀಪ ಪ್ರಜ್ವಲನೆಯ ಮೂಲಕ ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಾಬು ಪೂಜಾರಿ ಕೂಳೂರು ವಹಿಸಿ, ಆಟಿ ತಿಂಗಳಿನ ವಿಶೇಷತೆ ಹಾಗೂ ಆಟಿ ತಿಂಗಳಿನ ಮಹತ್ವವನ್ನು ತಿಳಿಸಿದರು.

ಈ ಸಂದರ್ಭದಲ್ಲಿ ಕುಂಜಣ್ಣ ನಾಯ್ಕ ಹುರ್ತಜೆ, ರಾಮಚಂದ್ರ ಭಟ್ ಅರೆಕಲ್, ಗಣೇಶ ಬಂಗೇರ, ಚೆನ್ನಕೇಶವ ಅರಸಮಜಲು ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಭರತ್ ಶೆಟ್ಟಿ, ಚಂದ್ರಕಾಂತ ಪ್ರಭು ನಿಡಿಗಲ್, ಜಯರಾಜ್ ಸಾಲಿಯಾನ್, ಯೋಗೀಶ್ ಗುಡಿಗಾರ್ ಕಟ್ಟಡಬೈಲು, ಶೀನಪ್ಪ ಗೌಡ, ಲೀಲಾವತಿ ಬಾಲಕೃಷ್ಣ ನಾಯ್ಕ, ಸದಾಶಿವ ನಾಯ್ಕ ಪಣಿಕ್ಕಲ್ ಇವರು ಉಪಸ್ಥಿತರಿದ್ದರು.

ಕಲಾತಂಡದ ಅಧ್ಯಕ್ಷ ಸದಾನಂದ ಬಿ ಮುಂಡಾಜೆ ಸ್ವಾಗತಿಸಿ, ವಿನಿತ್ ಧನ್ಯವಾದವಿತ್ತರು. ಕುಮಾರಿ ಜಿತೀಕ್ಷಾ ಕಾರ್ಯಕ್ರಮವನ್ನು ನಿರೂಪಿಸಿದರು. ನಂತರ ಕೀರ್ತನ ಕಲಾ ತಂಡದ ಸದಸ್ಯರಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಬಂದಂತಹ ಅತಿಥಿಗಳಿಗೆ ಹಾಗೂ ಸಭಿಕರಿಗೆ ತಂಡದ ಸದಸ್ಯರು ತಯಾರಿಸಿದಂತಹ ವಿವಿಧ ತಿಂಡಿ ತಿನಿಸುಗಳನ್ನು ನೀಡಲಾಯಿತು. ಮಧ್ಯಾಹ್ನದ ನಂತರ ವಿವಿಧ ಆಟೋಟ ಸ್ಪರ್ಧೆಗಳನ್ನು ನಡೆಸಿ, ವಿಜೇತರಿಗೆ ಬಹುಮಾನವನ್ನು ವಿತರಿಸಲಾಯಿತು.

Related posts

ಬಳ್ಳಮಂಜ ಶ್ರೀ ಮಹತೋಭಾರ ಅನಂತೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಬ್ರಹ್ಮಕಲಶದ ವೈಭವ – ಹೊರೆಕಾಣಿಕೆ ಸಮರ್ಪಣೆ

Suddi Udaya

ಇಂದಬೆಟ್ಟು: ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಸೌತಡ್ಕ ಕ್ಷೇತ್ರಕ್ಕೆ ಯುವ ವಾಗ್ಮಿ ಹಾರಿಕಾ ಮಂಜುನಾಥ್ ಭೇಟಿ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಾಗೂ ರೋಟರಿ ಕ್ಲಬ್ ಮಡಂತ್ಯಾರು ವತಿಯಿಂದ ಪರಿಸರ ಜಾಗೃತಿ ಕಾರ್ಯಕ್ರಮ

Suddi Udaya

ಪುತ್ತಿಲ ಕುಂಡಡ್ಕ : ಮನೆಯ ದಾರಂದ ಬಿದ್ದು ಶಾಲಾ ಬಾಲಕಿ ಅಲ್ಫಿಯಾ ಮೃತ್ಯು

Suddi Udaya

ಬೆಳ್ತಂಗಡಿ-ಹೆಬೆಬೈಲ್ ರಸ್ತೆಯಲ್ಲಿ ಅಪಾಯದ ಸ್ಥಿತಿಯಲ್ಲಿ ತಡೆಗೋಡೆ ಹಾಗೂ ವಿದ್ಯುತ್ ಕಂಬ

Suddi Udaya
error: Content is protected !!