September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಹೊಸಂಗಡಿ ಗ್ರಾಮ ಪಂಚಾಯತ್ ನ ಪ್ರಥಮ ಸುತ್ತಿನ ಗ್ರಾಮಸಭೆ

ಹೊಸಂಗಡಿ:ಹೊಸಂಗಡಿ ಗ್ರಾಮ ಪಂಚಾಯತ್ ನ 2025-26 ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮಸಭೆಯು ಪಂಚಾಯತ್ ಅಧ್ಯಕ್ಷ ಜಗದೀಶ್ ಹೆಗ್ಡೆ ಇವರ ಅಧ್ಯಕ್ಷತೆಯಲ್ಲಿ ಪಂಚಾಯತ್ ಸಭಾಂಗಣದಲ್ಲಿ ಜು.22 ರಂದು ನಡೆಯಿತು.

ಮಾರ್ಗದರ್ಶಿ ಅಧಿಕಾರಿ ಬೆಳ್ತಂಗಡಿ ಅಕ್ಷರ ದಾಸೋಹ ಯೋಜನೆಯ ಸಹಾಯಕ ನಿರ್ದೇಶಕ ರಾಜೇಂದ್ರ ಕೃಷ್ಣ ಅವರು ಸಭೆಯನ್ನು ಮುನ್ನಡೆಸಿದರು.

ಗ್ರಾಮಸಭೆಯಲ್ಲಿ ಚರಂಡಿ ದುರಸ್ತಿಯಾಗದೆ ರಸ್ತೆಯಲ್ಲಿ ಮಳೆನೀರು ಹರಿಯುವುದರಿಂದ ವಿದ್ಯಾರ್ಥಿಗಳಿಗೆ,ಸಾರ್ವಜನಿಕರು ತೊಂದರೆಗಳನ್ನು ಅನುಭವಿಸಬೇಕಾಗಿದೆ.ತುರ್ತಾಗಿ ಸಮಸ್ಯೆ ಬಗೆಹರಿಸಲು ಗ್ರಾಮಸ್ಥರು ಒತ್ತಾಯಿಸಿದರು. ‌ಬೀದಿ ದೀಪ ಸರಿಯಾಗಿ ನಿರ್ವಹಣೆಯಿಲ್ಲದೆ ಕತ್ತಲೆಯಲ್ಲಿ ಓಡಾಟ ಮಾಡುವಂತಾಗಿದೆ.ಕೆಲವು ರಸ್ತೆಗಳನ್ನು ತೋಟದ ಬಳ್ಳಿಗಳು ನುಂಗುತ್ತಿದೆ. ರಸ್ತೆ ದುರಸ್ತಿ, ಬೀದಿ ದೀಪ ವಿಸ್ತರಣೆ ಹಾಗೂ ಗ್ರಾಮದ ಅಭಿವೃದ್ಧಿಗೆ ಪೂರಕವಾಗಿ ಗ್ರಾಮಸ್ಥರು ಚರ್ಚಿಸಿದರು.

ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗಣೇಶ್ ಶೆಟ್ಟಿ,ಉಪಾಧ್ಯಕ್ಷೆ ಶಾಂತ,ಕಾರ್ಯದರ್ಶಿ ಕಾಂತಪ್ಪ, ಪಂಚಾಯತ್ ಸದಸ್ಯರಾದ ಶಾಂತಾ, ವಿಶಾಲಾಕ್ಷಿ , ಪ್ರಮೀಳಾ, ನಾಗರತ್ನ,ಲೋಕೇಶ್, ಅಬ್ದುಲ್ ರಹಿಮಾನ್, ಆನಂದ ಕೊಡಿಂಗೇರಿ, ಕರುಣಾಕರ ಪೂಜಾರಿ, ಕಮಲ ಹಾಗೂ ವಿವಿಧ ಇಲಾಖೆಯ ಇಲಾಖಾಧಿಕಾರಿಗಳು ಮಾಹಿತಿ ನೀಡಿದರು.ಪಂಚಾಯತ್ ಸಿಬ್ಬಂದಿಗಳು ಸಹಕರಿಸಿದರು. ಗ್ರಾಮಸ್ಥರು ಭಾಗವಹಿಸಿದ್ದರು

Related posts

ಪಾರೆoಕಿ ಗ್ರಾಮದ ಹಾರಬೆ ಶ್ರೀ ದುಗಲಾಯ ಮತ್ತು ಗುಳಿಗ ದೈವಗಳ ವಾರ್ಷಿಕ ನೇಮೋತ್ಸವ

Suddi Udaya

ಕಣಿಯೂರು: ಚಂದ್ರಯ್ಯ ಆಚಾರ್ಯ ನಿಧನ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ಅಧ್ಯಕ್ಷ ಲ| ದೇವದಾಸ್ ಶೆಟ್ಟಿ ರವರಿಗೆ ಬೆಸ್ಟ್ ಪ್ರೆಸಿಡೆಂಟ್ ಮಲ್ಟಿಪಲ್ ಜಿಲ್ಲಾ ಅವಾರ್ಡ್

Suddi Udaya

ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಕನ್ನಡ ಭಾಷಣ ಸ್ಪರ್ಧೆ: ಧರ್ಮಸ್ಥಳ ಶ್ರೀ ಮಂ.ಅ. ಪ್ರೌ. ಶಾಲೆ ಶಾಲೆಯ ವಿದ್ಯಾರ್ಥಿನಿ ಕು| ಪ್ರಜ್ಞಾ ದ್ವಿತೀಯ ಸ್ಥಾನ

Suddi Udaya

ಕಬ್ಬಡಿ ಆಟಗಾರ ಪ್ರೀತಮ್ ಶೆಟ್ಟಿ ಹೃದಯಾಘಾತದಿಂದ ನಿಧನ

Suddi Udaya

ಇಳಂತಿಲ: ಬೃಹತ್ ಗಾತ್ರದಲ್ಲಿ ಗುಡ್ಡ ಕುಸಿತ : ಗ್ರಾ.ಪಂ. ಸದಸ್ಯ ತಿಮ್ಮಪ್ಪ ಗೌಡರ ನೇತೃತ್ವದಲ್ಲಿ ತೆರವು ಕಾರ್ಯ

Suddi Udaya
error: Content is protected !!