Uncategorized

ಉಜಿರೆ ಎಸ್.ಡಿ.ಎಂ. ಬಿ.ಎಡ್. ಮತ್ತು ಡಿ.ಎಡ್ ಕಾಲೇಜಿನಲ್ಲಿ ‘ಆಟಿಡೊಂಜಿ ದಿನ’

ಉಜಿರೆ: ತುಳುನಾಡಿನಲ್ಲಿ ಬಾಳಿ ಬದುಕಿದ ಹಿರಿಯರು ಪ್ರಕೃತಿಯಲ್ಲಿ ದೊರೆಯುವ ಮರಗಿಡ, ಬಳ್ಳಿ, ಗೆಡ್ಡೆ ಮುಂತಾದವುಗಳನ್ನು ಆಹಾರವಾಗಿ, ಔಷಧಿಯಾಗಿ ಬಳಸಿಕೊಂಡು ಆಟಿ ತಿಂಗಳ ಕಷ್ಟದ ದಿನಗಳಲ್ಲಿ ರೋಗರುಜಿನಗಳು ಬಾಧಿಸದಂತೆ ಬದುಕಿದ್ದರು. ಇಲ್ಲಿನ ಎಲ್ಲಾ ಹಬ್ಬಗಳಿಗೂ ಕೃಷಿಯು ಮೂಲವಾಗಿದ್ದು ಅದಕ್ಕೆ ಸಂಬಂಧಿಸಿದಂತೆ ಹಲವಾರು ಆಚರಣೆಗಳು ಬೆಳೆದು ಬಂದಿದೆ. ಆಟಿ ತಿಂಗಳಿನಲ್ಲಿ ಯಾವುದೇ ಧಾರ್ಮಿಕ ಕಾರ್ಯಕ್ರಮಗಳು ನಡೆಯದೇ ಪ್ರಕೃತಿಯನ್ನು ಆರಾಧಿಸುವ ವಿಶಿಷ್ಟ ಪದ್ಧತಿಯು ಕಂಡು ಬರುತ್ತದೆ ಎಂದು ಶ್ರೀ ಧ. ಮಂ. ಕಾಲೇಜಿನ ಕನ್ನಡ ಸಹ ಪ್ರಾಧ್ಯಾಪಕರಾದ ಡಾ. ದಿವಾಕರ ಕೊಕ್ಕಡ ಹೇಳಿದರು.

ಅವರು ಶ್ರೀ ಧ. ಮಂ. ಬಿ.ಇಡಿ. ಹಾಗೂ ಡಿ.ಇಡಿ. ಕಾಲೇಜಿನಲ್ಲಿ ಹಮ್ಮಿಕೊಂಡ “ಆಟಿಡೊಂಜಿ ದಿನ” ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಮತ್ತೋರ್ವ ಅತಿಥಿಗಳಾದ ಯಶವಂತ್, ರಂಗ ನಿರ್ದೇಶಕರು, ಎಸ್.ಡಿ.ಎಂ. ಕಾಲೇಜು, ಉಜಿರೆ ಇವರು ಮಾತನಾಡಿ ಆಟಿ ತಿಂಗಳ ಆಚರಣೆಗಳ ಕುರಿತು ಮಾಹಿತಿ ನೀಡಿ ಆಟಿ ಕಳಂಜನ ‘ಪಾಡ್ದಾನ’ ಗಳ ಹಿಂದಿರುವ ಸಂದೇಶವನ್ನು ತಿಳಿಸಿದರು.


ಅಧ್ಯಕ್ಷೀಯ ಮಾತುಗಳನ್ನಾಡಿದ ಬಿ.ಎಡ್. ಕಾಲೇಜಿನ ಸಹಾಯಕ ಪ್ರಾಧ್ಯಾಪಕರಾದ ತಿರುಮಲೇಶ್ ರಾವ್ ಎನ್ ಕೆ ಅವರು ತುಳುನಾಡಿನ ಜನರು ಪ್ರಕೃತಿಯನ್ನು ಆರಾಧಿಸಿಕೊಂಡು ಬಂದಿದ್ದು, ಇಲ್ಲಿನ ಸಂಸ್ಕೃತಿಯು ಶ್ರೇಷ್ಠತೆಯನ್ನು ಹೊಂದಿದೆ. ಆದುದರಿಂದ ಸಂಸ್ಕೃತಿಯ ಕುರಿತು ಗುರುಹಿರಿಯರು ಆಡುವ ಮಾತುಗಳನ್ನು ಇಂದಿನ ಯುವಜನತೆ ಆಲಿಸಿ ಪಾಲಿಸಬೇಕೆಂದು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.


ಕಾರ್ಯಕ್ರಮವನ್ನು ಹಿಂಗಾರ ಹೂವನ್ನು ಅರಳಿಸುವ ಮೂಲಕ ವಿನೂತನವಾಗಿ ಉದ್ಘಾಟಿಸಿ, ತುಳುನಾಡಿನ ವಿಶೇಷತೆಯ ಕುರಿತು ನೃತ್ಯ ಹಾಗೂ ವೀಡಿಯೋ ಪ್ರದರ್ಶನ ಮಾಡಲಾಯಿತು. ಪ್ರಥಮ ವರ್ಷದ ಪ್ರಶಿಕ್ಷಣಾರ್ಥಿ ಪ್ರಶ್ವಿತ್ ಆಟಿ ತಿಂಗಳ ವಿಶೇಷತೆಯನ್ನು ಕುರಿತು ಹಲವಾರು ಸ್ಪರ್ಧೆಗಳನ್ನು ಏರ್ಪಡಿಸಿದ್ದರು. ತುಳುನಾಡಿನ ತಿನಿಸುಗಳನ್ನು ಸವಿಯುವುದರೊಂದಿಗೆ ಪಾರಂಪರಿಕ ವಸ್ತುಗಳನ್ನು ಪ್ರದರ್ಶಿಸಲಾಯಿತು. ಕಾರ್ಯಕ್ರಮದಲ್ಲಿ ಬಿ.ಎಡ್. ಹಾಗೂ ಡಿ.ಎಡ್. ಕಾಲೇಜಿನ ಎಲ್ಲಾ ಉಪನ್ಯಾಸಕರು, ಪ್ರಶಿಕ್ಷಣಾರ್ಥಿಗಳು ಉಪಸ್ಥಿತರಿದ್ದರು. ಬಳಿಕ ತುಳುನಾಡಿನ ಸಂಸ್ಕೃತಿಯನ್ನು ಆಧರಿಸಿ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.


ಪ್ರಶಿಕ್ಷಣಾರ್ಥಿಯಾದ ದಿವ್ಯಾ ಸ್ವಾಗತಿಸಿ, ಪ್ರಜ್ಞಾ ಧನ್ಯವಾದವಿತ್ತು, ರಶ್ಮಿ ಕೆ ಪಿ ಅತಿಥಿ ಪರಿಚಯಿಸಿದರು. ಚೈತನ್ಯ ಮತ್ತು ಪ್ರಭಾವತಿ ಕಾರ್ಯಕ್ರಮವನ್ನು ನಿರೂಪಿಸಿದರು.

Related posts

ದೀಪಾವಳಿ ಹಬ್ಬದ ಪ್ರಯುಕ್ತ ಬೆಳ್ತಂಗಡಿ ತಾಲೂಕು ಆರೋಗ್ಯಾಧಿಕಾರಿಯವರಿಂದ ಸಾರ್ವಜನಿಕರಿಗೆ ಸೂಚನೆ

Suddi Udaya

ಸರಳಿಕಟ್ಟೆ ಗೈಸ್ ವತಿಯಿಂದ 175 ಕುಟುಂಬಗಳಿಗೆ ರಂಝಾನ್ ಕಿಟ್ ವಿತರಣೆ.

Suddi Udaya

ಉಜಿರೆ ಎಸ್‌ಡಿಎಂ ತಾಂತ್ರಿಕ ಮಹಾವಿದ್ಯಾಲಯದಲ್ಲಿ
ಎಕ್ಸ್‌ಪೀರಿಯ-2ಕೆ22 ರಾಜ್ಯ ಮಟ್ಟದ ವಿಜ್ಞಾನ ಮೇಳ ಉದ್ಘಾಟನೆ

Suddi Udaya

ಅಂಡಿಂಜೆ ಪಾಂಡೀಲು ಹೊಸಮನೆ ಎಂಬಲ್ಲಿ ಮನೆಯ ಬೀಗವನ್ನು ಒಡೆದು ಒಳಗಿದ್ದ ಕಳ್ಳರು: ನಗ-ನಗದು ಸೇರಿದಂತೆ ‌ರೂ. 80 ಸಾವಿರ ಮೌಲ್ಯದ ಸೊತ್ತುಗಳ ಕಳವು

Suddi Udaya

ಉಡುಪಿಯ ಪೇಜಾವರ ಮಠಾಧೀಶರು ಪವಿತ್ರ ಕ್ಷೇತ್ರವಾದ ಶ್ರೀ ಮಧ್ವ ಮಂಟಪಕ್ಕೆ ಭೇಟಿ

Suddi Udaya

ವಾಣಿ ಕಾಲೇಜಿನ ವಿಜ್ಞಾನ ವಿಭಾಗಕ್ಕೆ ಉತ್ತಮ ಫಲಿತಾಂಶ: ವಿದ್ಯಾರ್ಥಿನಿ ನವಮಿ ಗೆ 588 ಅಂಕ

Suddi Udaya
error: Content is protected !!