25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಾಶಿಪಟ್ಣ ಗ್ರಾಮ ಪಂಚಾಯತ್ ನ ಪ್ರಥಮ ಸುತ್ತಿನ ಗ್ರಾಮಸಭೆ

ಕಾಶಿಪಟ್ಣ:ಕಾಶಿಪಟ್ಣ ಗ್ರಾಮ ಪಂಚಾಯತ್ ನ 2025-26 ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮಸಭೆಯು ಪಂಚಾಯತ್ ಅಧ್ಯಕ್ಷ ಸತೀಶ್ ಕೆ ಕಾಶಿಪಟ್ಣ ಇವರ ಅಧ್ಯಕ್ಷತೆಯಲ್ಲಿ ಪಂಚಾಯತ್ ಸಭಾಂಗಣದಲ್ಲಿ ಜು.21 ರಂದು ನಡೆಯಿತು.

ಮಾರ್ಗದರ್ಶಿ ಅಧಿಕಾರಿ ಬೆಳ್ತಂಗಡಿ ತೋಟಗಾರಿಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಚಂದ್ರಶೇಖರ್ ಸಭೆಯನ್ನು ಮುನ್ನಡೆಸಿದರು.

ಗ್ರಾಮಸಭೆಯಲ್ಲಿ ಅಕ್ರಮ ಮದ್ಯ ಮಾರಾಟ ಮಾಡುವವರ ವಿರುದ್ದ ಕಾನೂನು ಕ್ರಮ ಕೈಗೊಳ್ಳಲು ಗ್ರಾಮಸ್ಥರು ಆಗ್ರಹಿಸಿದರು. ಬೀದಿ ದೀಪ ವಿಸ್ತರಣೆ, ರಸ್ತೆ ಸರಿಪಡಿಸುವಿಕೆ, ಪೊಲೀಸರು ರಾತ್ರಿ ಹೊತ್ತು ಗಸ್ತು ತಿರುಗುವಿಕೆ ಮಾಡಬೇಕು.ಕಾಶಿಪಟ್ಣದಲ್ಲಿ ಪಶು ಆಸ್ಪತ್ರೆ ನಿರ್ಮಿಸಬೇಕೆಂದು ಗ್ರಾಮಸ್ಥರು ಒತ್ತಾಯಿಸಿದರು.

ಪಂಚಾಯತ್ ಅಧ್ಯಕ್ಷ ಸತೀಶ್ ಕಾಶಿಪಟ್ಣ ಮಾತನಾಡಿ ಗ್ರಾಮದ ಸರ್ವತೋಮುಖ ಬೆಳವಣಿಗೆಗೆ ಸದಾ ಗ್ರಾಮಸ್ಥರು, ಅಧಿಕಾರಿಗಳು ಸಹಕಾರ ನೀಡಿದ್ದು ಸಂತೋಷ ತಂದಿದೆ‌.ನಾನು ಕಳೆದ ಹಲವಾರು ವರ್ಷಗಳಿಂದ ಪಂಚಾಯತ್ ಅಧ್ಯಕ್ಷನಾಗಿ, ಸದಸ್ಯನಾಗಿ ಸುಮಾರು 50 ಗ್ರಾಮ ಸಭೆಯಲ್ಲಿ ಭಾಗವಹಿಸಿದ್ದೇನೆ. ಗ್ರಾಮದ ಜನರ ಕಷ್ಟ ಸುಖಗಳಿಗೆ ಪ್ರಾಮಾಣಿಕವಾಗಿ ಸ್ಪಂದಿಸಿದ್ದೇನೆ ಎಂದರು.

ಪಂಚಾಯತ್ ಅಭಿವೃದ್ಧಿ ಅಧಿಕಾರಿ ಆಶಾಲತಾ ಎಚ್, ಉಪಾಧ್ಯಕ್ಷೆ ಶುಭವಿ ,ಕಾರ್ಯದರ್ಶಿ ಲೀನಾ ಬೆನಡಿಕ್ಟ ಲೋಬೋ, ಪಂಚಾಯತ್ ಸದಸ್ಯರಾದ ಶಿಲ್ಪಾ, ಸುಶೀಲ, ಅಶೋಕ್ ಕುಮಾರ್, ರವೀಂದ್ರ ಪಿ, ಸವಿತಾ ಹಾಗೂ ವಿವಿಧ ಇಲಾಖೆಯ ಇಲಾಖಾಧಿಕಾರಿಗಳು ಉಪಸ್ಥಿತರಿದ್ದರು.

ಪಂಚಾಯತ್ ಸಿಬ್ಬಂದಿಗಳು ಸಹಕರಿಸಿದರು. ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

Related posts

ಉಜಿರೆ: ಶ್ರೀ ಧ.ಮಂ.ಇಂಜಿನಿಯರಿಂಗ್ ಕಾಲೇಜಿನ ಇಲೆಕ್ಟ್ರಾನಿಕ್ಸ್ ಆಂಡ್ ಕಮ್ಯೂನಿಕೇಶನ್ಸ್ ವಿಭಾಗದ ಉಪನ್ಯಾಸಕ ಪ್ರತಾಪಚಂದ್ರ ರವರಿಗೆ ಪಿ.ಎಚ್.ಡಿ ಪದವಿ

Suddi Udaya

ಇಂದಬೆಟ್ಟು: ಕುಡಿಯುವ ನೀರಿಗಾಗಿ ಗ್ರಾ.ಪಂ. ಮಾಜಿ ಸದಸ್ಯ ವೆಂಕಪ್ಪ ಕೋಟ್ಯಾನ್ ರಿಂದ ಪಂಚಾಯತ್ ಎದುರು ಪ್ರತಿಭಟನೆ: ಶೀಘ್ರವಾಗಿ ದುರಸ್ತಿ ಮಾಡಿಸಿಕೊಡುವುದಾಗಿ ಗ್ರಾ.ಪಂ. ಅಧ್ಯಕ್ಷೆ ಭರವಸೆ

Suddi Udaya

ತೋಟತ್ತಾಡಿ ಶ್ರೀ ಗುರು ನಾರಾಯಣಸ್ವಾಮಿ ಸೇವಾ ಸಂಘ ಮಹಿಳಾ ಬಿಲ್ಲವ ವೇದಿಕೆಯ ನೂತನ ಸಮಿತಿ ರಚನೆ

Suddi Udaya

ಯಕ್ಷಭಾರತಿ ಕನ್ಯಾಡಿ ಸಂಸ್ಥೆಯು ಪುರಸ್ಕರಿಸುವ ಯಕ್ಷಭಾರತಿ ಪ್ರಶಸ್ತಿಗೆ ಮೂಡಬಿದರೆಯ ಕೆ ಶ್ರೀಪತಿ ಭಟ್ ಆಯ್ಕೆ

Suddi Udaya

ತಾಲೂಕಿನಲ್ಲಿ ಮಾಜಿ ಸೈನಿಕರ ಸಂಘ ಬೆಳ್ತಂಗಡಿ ಇದಕ್ಕೆ ಪರ್ಯಾಯವಾದ ಯಾವುದೇ ಮಾಜಿ ಸೈನಿಕರ ಸಂಘವಿರುವುದಿಲ್ಲ: ಪತ್ರಿಕಾಗೋಷ್ಠಿಯಲ್ಲಿ ಸಂಘದ ಅಧ್ಯಕ್ಷ ಮಹಮ್ಮದ್ ರಫೀ ಸ್ವಷ್ಟನೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ. ಬಿ.ಎಸ್. ಇ) ಶಾಲೆಯಲ್ಲಿ “ಪ್ರತಿಭಾ ಸಂಗಮ” ಕಾರ್ಯಕ್ರಮ

Suddi Udaya
error: Content is protected !!