22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಗುಡ್ ಫ್ಯೂಚರ್ ಚೈಲ್ಡ್ ಆಂಗ್ಲ ಮಾಧ್ಯಮ‌ ಶಾಲೆಯ ಶಿಕ್ಷಕ – ರಕ್ಷಕ ಸಂಘದ ಸಭೆ

ಪಿಲ್ಯ : ಗುಡ್ ಫ್ಯೂಚರ್ ಚೈಲ್ಡ್ ಆಂಗ್ಲ ಮಾಧ್ಯಮ‌ ಶಾಲೆಯ 2025-26 ನೇ ಶೈಕ್ಷಣಿಕ ಸಾಲಿನ ಸಭೆಯು ಜು. 21 ರಂದು ನಡೆಯಿತು.

ಶಾಲಾ ಮುಖ್ಯೋಪಾಧ್ಯಾಯ ಪ್ರಭಾಕರ್ ಶೆಟ್ಟಿ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಈ ಸಂದರ್ಭದಲ್ಲಿ ನೂತನ ಶಿಕ್ಷಕ – ರಕ್ಷಕ ಸಂಘದ ರಚನೆ ಮಾಡಲಾಯಿತು. ಅಧ್ಯಕ್ಷರಾಗಿ ಅಬ್ದುಲ್ ಶುಕುರ್ ಸಾಹೇಬ್ , ಉಪಾಧ್ಯಕ್ಷರಾಗಿ ಧನಕೀರ್ತಿ ಜೈನ್ ಹಾಗೂ ಶ್ರೀಮತಿ ವಿನಯಾ ಆಯ್ಕೆಯಾದರು. ಸದಸ್ಯರುಗಳಾಗಿ ರೆಹಮತ್, ಮೊಹಮ್ಮದ್ ಅಶ್ರಫ್, ಯಶೋಧರ್, ಬಿಂದು, ಯಶೋದ, ಸುರೇಖಾ, ಸಬೀನ ಪರ್ವಿನ್, ಗೀತಾ, ಗಿರೀಶ್, ರಮೀಝಾ ಹಾಗೂ ರಾಜೇಶ್, ಕಾರ್ಯದರ್ಶಿಯಾಗಿ ಶಾಲಾ ಮುಖ್ಯೋಪಾಧ್ಯಾಯ ಪ್ರಭಾಕರ್ ಶೆಟ್ಟಿಯವರು ಆಯ್ಕೆಯಾಗಿದ್ದಾರೆ.

ನೂತನ ಶಿಕ್ಷಕ – ರಕ್ಷಕ ಸಮಿತಿಯ ರಚನೆಯ ಕುರಿತು ಶಾಲಾ ಸಂಚಾಲಕ ನಸೀರ್ ಅಹಮ್ಮದ್ ಖಾನ್ ಅವರು ಶಾಲಾ ಅಭಿವೃದ್ಧಿಯ ಬಗೆಗೆ ಮನದ ಮಾತುಗಳನ್ನಾಡಿದರು. ಪ್ರಾರ್ಥನೆಯನ್ನು ಶ್ರುತನ್ ಜೈನ್, ಅನುಷ್ಕಾ, ಮಹಾನ್, ಅವನೀಶ್ ನೆರವೇರಿಸಿದರು. ಶ್ರೀಮತಿ ಫೈಝಾನ್ ಸ್ವಾಗತಿಸಿದರು. ಕಾರ್ಯಕ್ರಮದ ನಿರೂಪಣೆಯನ್ನು ಶ್ರೀಮತಿ ಸರ್ವಾಣಿಯವರು ನೆರವೇರಿಸಿದರು. ರಕ್ಷಿತಾ ಧನ್ಯವಾದ ಸಮರ್ಪಿಸಿದರು.

Related posts

ಜೆಸಿಐ ಉಜಿರೆ ಸಿಟಿ ವತಿಯಿಂದ ಪರಿಸರ ದಿನಾಚರಣೆ- ಗೋ ಗ್ರೀನ್ ಕಾರ್ಯಕ್ರಮ ಮತ್ತು ಸಾಧಕರಿಗೆ ಸನ್ಮಾನ

Suddi Udaya

ಬೆಳ್ತಂಗಡಿ: ಕ್ಯಾಂಪ್ಕೊ ಸಂಸ್ಥೆಯ ‘ಸಾಂತ್ವನ’ ಯೋಜನೆಯಡಿಯಲ್ಲಿ ಸಹಾಯಧನ ವಿತರಣೆ

Suddi Udaya

ಸ್ಟಾರ್ ಲೈನ್ ಶಾಲೆಯಲ್ಲಿ ಸಂಭ್ರಮದ ಫಿಟ್ ಫೆಸ್ಟ್ : ವಾರ್ಷಿಕ ಕ್ರೀಡಾಕೂಟ :

Suddi Udaya

ತ್ರೋಬಾಲ್ ಪಂದ್ಯಾಟ: ವಾಣಿ ಆಂಗ್ಲ ಮಾಧ್ಯಮ ಶಾಲೆಯ ಬಾಲಕ – ಬಾಲಕಿಯರ ತಂಡ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಮಂಗಳೂರು ಆದರ್ಶ್ ಫ್ರೆಂಡ್ ಅಸೋಸಿಯೇಶನ್ ಅಧ್ಯಕ್ಷರಾಗಿ ಸಾಮಾಜಿಕ, ಧಾರ್ಮಿಕ ಕ್ಷೇತ್ರದ ಮುಂದಾಳು ಕಾಪಿನಡ್ಕ ರವಿ ಪೂಜಾರಿ ಚಿಲಿಂಬಿ ಆಯ್ಕೆ

Suddi Udaya

ವನಮಹೋತ್ಸವ ಆಚರಣೆ: ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದ ಪರಿಸರದಲ್ಲಿ ಗಿಡ ನೆಟ್ಟು ಪರಿಸರ ಸಂರಕ್ಷಣೆಯ ಸಂದೇಶ

Suddi Udaya
error: Content is protected !!