25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜು.23: ದೆಹಲಿಯಲ್ಲಿ ಬಿಎಮ್ಎಸ್ ಇದರ 70ನೇ ವರ್ಷದ ಕಾರ್ಯಕ್ರಮಗಳ ಸಮಾರೋಪ : ಬೆಳ್ತಂಗಡಿ ಶ್ರೀ ಮಂಜುನಾಥೇಶ್ವರ ಸಭಾಭಾವನದಲ್ಲಿ ನೇರಪ್ರಸಾರ

ಬೆಳ್ತಂಗಡಿ : ಭಾರತೀಯ ಮಾಜ್ದೂರ್ ಸಂಘ ಇದರ ನೇತೃತ್ವದಲ್ಲಿ ಭಾರತೀಯ ಮಾಜ್ದೂರು ಸಂಘ ಬೆಳ್ತಂಗಡಿ ತಾಲೂಕು ಸಮಿತಿಯ ಸಹಭಾಗಿತ್ವದಲ್ಲಿ ಬಿಎಮ್ಎಸ್ ಇದರ 70ನೇ ವರ್ಷದ ಕಾರ್ಯಕ್ರಮಗಳ ಸಮಾರೋಪ ಸಮಾರಂಭ ದೆಹಲಿಯಲ್ಲಿ ನಡೆಯಲಿದೆ.

ಇದರಲ್ಲಿ ರಾಷ್ಟೀಯ ಸ್ವಯಂಸೇವಕ ಸಂಘ ಇದರ ಸರ ಸಂಘ ಚಾಲಕರಾದ ಡಾ. ಮೋಹನ್ ಜೀ ಭಾಗವತ್ ರವರು ಸಮಾರೋಪ ಭಾಷಣವನ್ನು ಮಾಡಲಿದ್ದಾರೆ ಇದರ ನೇರಪ್ರಸಾರದ ಕಾರ್ಯಕ್ರಮ ಶ್ರೀ ಮಂಜುನಾಥೇಶ್ವರ ಪಿನಾಕಿ ಸಭಾಭಾವನ ಸಂತೆಕಟ್ಟೆ ಬೆಳ್ತಂಗಡಿ ಇಲ್ಲಿ ಜು.23 ರಂದು ಬೆಳ್ಳಿಗೆ ಸಮಯ 11 ಗಂಟೆಗೆ ನಡೆಯಲಿದೆ.

ಇದರ ನೇರ ಪ್ರಸಾರ ಕಾರ್ಯಕ್ರಮದ ಅಧ್ಯಕ್ಷತೆಯನ್ನು ತಾಲೂಕು ಸಮಿತಿ ಅಧ್ಯಕ್ಷ ಉದಯ ಬಿ ಕೆ, ಮುಖ್ಯ ಅತಿಥಿಗಳಿಗಾಗಿ ಆರ್ ಎಸ್.ಎಸ್ ಇದರ ಪುತ್ತೂರು ಜಿಲ್ಲೆಯ ಜಿಲ್ಲಾ ಸಹ ಬೌದ್ದಿಕ್ ಪ್ರಮುಖರಾದ ಸುಬ್ರಾಯ ಪುಣಚ, ಬಿ.ಎಮ್.ಎಸ್ ಜಿಲ್ಲಾಧ್ಯಕ್ಷ ಅನಿಲ್ ಕುಮಾರ್ ಯು, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಕುಮಾರ್ ನಾಥ್ ಉಜಿರೆ, ಆಟೋ ರಿಕ್ಷಾ ಯೂನಿಯನ್ ಇದರ ತಾಲೂಕು ಸಮಿತಿಯ ಅಧ್ಯಕ್ಷ ಕೃಷ್ಣ ಬೆಳಾಲು, ರಬ್ಬರ್ ಟ್ಯಾಪರ್ ಜಿಲ್ಲಾ ಸಮಿತಿಯ ಪ್ರಧಾನ ಕಾರ್ಯದರ್ಶಿ ನಾಗರಾಜ ಪಿ ಇವರುಗಳು ವೇದಿಕೆಯಲ್ಲಿ ಉಪಸ್ಥಿತರಿರುವರು.

ಕಾರ್ಯಕ್ರಮದಲ್ಲಿ ಬೆಳ್ತಂಗಡಿ ತಾಲೂಕಿನ ಸಮಸ್ತ ಬಿ.ಎಮ್.ಎಸ್ ಸಂಘಟನೆಯ ಕಾರ್ಯಕರ್ತರು, ಕಾರ್ಮಿಕ ಬಂಧುಗಳು, ರಾಷ್ಟ್ರ ಚಿಂತನೆಯ ಸಂಘ ಪರಿವಾರ ಸಂಘಟನೆಯ ಎಲ್ಲಾ ಹಿರಿಯರು, ಪ್ರಮುಖರು, ಉಪಸ್ಥಿತಿರುತ್ತಾರೆ.

Related posts

ಕೊಕ್ಕಡ ಗ್ರಾ.ಪಂ. ನಲ್ಲಿ ಉದ್ಯೋಗಕಾತರಿ ಯೋಜನೆಯಡಿ ಆರೋಗ್ಯ ತಪಾಸಣಾ ಶಿಬಿರ

Suddi Udaya

ದ.ಕ. ಜಿಲ್ಲಾ ನೂತನ ಎಸ್ಪಿಯಾಗಿ ಡಾ. ಅರುಣ್ ಕೆ. ಅಧಿಕಾರ ಸ್ವೀಕಾರ

Suddi Udaya

ಪಜಿರಡ್ಕ ಶ್ರೀ ಸದಾಶೀವೇಶ್ವರ ದೇವಸ್ಥಾನದಲ್ಲಿ ಶ್ರೀ ರಾಮಚಂದ್ರ ನ ಪ್ರಾಣಪ್ರತಿಷ್ಠೆಯ ಅಂಗವಾಗಿ ವಿವಿಧ ಕಾರ್ಯಕ್ರಮ ಹಾಗೂ ಕರಸೇವಕರಿಗೆ ಗೌರವಾರ್ಪಣೆ

Suddi Udaya

ಜ.7 : ಧರ್ಮಸ್ಥಳದಲ್ಲಿ ನೂತನ ಸಂಕೀರ್ಣ ಶ್ರೀ ಸಾನ್ನಿಧ್ಯ ಉದ್ಘಾಟನೆ ಹಾಗೂ ಜ್ಞಾನ ದೀಪ ಕಾರ್ಯಕ್ರಮ

Suddi Udaya

ಸುಲ್ಕೇರಿ ಗ್ರಾ. ಪಂ. ವ್ಯಾಪ್ತಿಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ವೇಣೂರು: ಪೆರ್ಮುಡದಲ್ಲಿ 31ನೇ ವರ್ಷದ ಸೂರ್ಯ-ಚಂದ್ರ ಜೋಡುಕರೆ ಕಂಬಳಕ್ಕೆ ಚಾಲನೆ

Suddi Udaya
error: Content is protected !!