32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮುಂಡಾಜೆ ಕೀರ್ತನ ಕಲಾತಂಡದಿಂದ ‘ಆಟಿಡೊಂಜಿ ಐತಾರಾ’ ಕಾರ್ಯಕ್ರಮ

ಮುಂಡಾಜೆ : ಇಲ್ಲಿಯ ಕೀರ್ತನ ಕಲಾತಂಡ ಇದರ ಆಶಯದಲ್ಲಿ ಆಟಿಡೊಂಜಿ ಐತಾರಾ ಕಾರ್ಯಕ್ರಮವು ಜು.20ರಂದು ಮುಂಡಾಜೆ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು.

ಕಾರ್ಯಕ್ರಮವನ್ನು ರತ್ನರಾಜ ಹೆಗಡೆ ನೆಯ್ಯಾಲ್ ದೀಪ ಪ್ರಜ್ವಲನೆಯ ಮೂಲಕ ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಾಬು ಪೂಜಾರಿ ಕೂಳೂರು ವಹಿಸಿ, ಆಟಿ ತಿಂಗಳಿನ ವಿಶೇಷತೆ ಹಾಗೂ ಆಟಿ ತಿಂಗಳಿನ ಮಹತ್ವವನ್ನು ತಿಳಿಸಿದರು.

ಈ ಸಂದರ್ಭದಲ್ಲಿ ಕುಂಜಣ್ಣ ನಾಯ್ಕ ಹುರ್ತಜೆ, ರಾಮಚಂದ್ರ ಭಟ್ ಅರೆಕಲ್, ಗಣೇಶ ಬಂಗೇರ, ಚೆನ್ನಕೇಶವ ಅರಸಮಜಲು ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಭರತ್ ಶೆಟ್ಟಿ, ಚಂದ್ರಕಾಂತ ಪ್ರಭು ನಿಡಿಗಲ್, ಜಯರಾಜ್ ಸಾಲಿಯಾನ್, ಯೋಗೀಶ್ ಗುಡಿಗಾರ್ ಕಟ್ಟಡಬೈಲು, ಶೀನಪ್ಪ ಗೌಡ, ಲೀಲಾವತಿ ಬಾಲಕೃಷ್ಣ ನಾಯ್ಕ, ಸದಾಶಿವ ನಾಯ್ಕ ಪಣಿಕ್ಕಲ್ ಇವರು ಉಪಸ್ಥಿತರಿದ್ದರು.

ಕಲಾತಂಡದ ಅಧ್ಯಕ್ಷ ಸದಾನಂದ ಬಿ ಮುಂಡಾಜೆ ಸ್ವಾಗತಿಸಿ, ವಿನಿತ್ ಧನ್ಯವಾದವಿತ್ತರು. ಕುಮಾರಿ ಜಿತೀಕ್ಷಾ ಕಾರ್ಯಕ್ರಮವನ್ನು ನಿರೂಪಿಸಿದರು. ನಂತರ ಕೀರ್ತನ ಕಲಾ ತಂಡದ ಸದಸ್ಯರಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಬಂದಂತಹ ಅತಿಥಿಗಳಿಗೆ ಹಾಗೂ ಸಭಿಕರಿಗೆ ತಂಡದ ಸದಸ್ಯರು ತಯಾರಿಸಿದಂತಹ ವಿವಿಧ ತಿಂಡಿ ತಿನಿಸುಗಳನ್ನು ನೀಡಲಾಯಿತು. ಮಧ್ಯಾಹ್ನದ ನಂತರ ವಿವಿಧ ಆಟೋಟ ಸ್ಪರ್ಧೆಗಳನ್ನು ನಡೆಸಿ, ವಿಜೇತರಿಗೆ ಬಹುಮಾನವನ್ನು ವಿತರಿಸಲಾಯಿತು.

Related posts

ಕಣಿಯೂರು: ಮಲ್ಲಿಗೆ ಕೃಷಿ ಮಾಹಿತಿ ಹಾಗೂ ಗಿಡ ವಿತರಣಾ ಕಾರ್ಯಕ್ರಮ

Suddi Udaya

ಕನ್ಯಾಡಿಯ ಶ್ರೀರಾಮ ಕ್ಷೇತ್ರದ ಸದ್ಗುರು ಶ್ರೀ ಬ್ರಹ್ಮಾನಂದ ಸ್ವಾಮೀಜಿಯವರಿಂದ ಮುಂಬಯಿ ಬಿಲ್ಲವ ಸಮುದಾಯ ಭವನ, ಗುರುಮಂದಿರ ಉದ್ಘಾಟನೆ

Suddi Udaya

ರಾಜ್ಯದ ಕಾಂಗ್ರೆಸ್ ಸರಕಾರದ ದುರಾಡಳಿತದ ವಿರುದ್ದ ಕಳಿಯ ಗ್ರಾ.ಪಂ. ಎದುರು ಬಿಜೆಪಿ ಪ್ರತಿಭಟನೆ

Suddi Udaya

ಪ್ರದೀಶ್ ಮಾರೋಡಿ ಇವರಿಗೆ ಕರ್ನಾಟಕ ಮಾಧ್ಯಮ ಅಕಾಡೆಮಿಯ ಪ್ರತಿಷ್ಠಿತ ಮೈಸೂರು ದಿಗಂತ ಪ್ರಶಸ್ತಿ ಪ್ರಧಾನ

Suddi Udaya

ಜೇಸಿಐ ವಲಯ ಸಮ್ಮೇಳನ: ಜೆಸಿಐ ಬೆಳ್ತಂಗಡಿ ಮಂಜುಶ್ರೀಗೆ ಸಮಗ್ರ ಪ್ರಶಸ್ತಿ

Suddi Udaya

ತಣ್ಣೀರುಪoತ: ಪಣೆಕ್ಕರ ಸುಪಾರಿ ಟ್ರೇಡರ್ಸ್ ಅಡಿಕೆ, ಕಾಡುತ್ಪತಿ ಮಳಿಗೆ ಶುಭಾರಂಭ

Suddi Udaya
error: Content is protected !!