September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮುಂಡಾಜೆ ಕೀರ್ತನ ಕಲಾತಂಡದಿಂದ ‘ಆಟಿಡೊಂಜಿ ಐತಾರಾ’ ಕಾರ್ಯಕ್ರಮ

ಮುಂಡಾಜೆ : ಇಲ್ಲಿಯ ಕೀರ್ತನ ಕಲಾತಂಡ ಇದರ ಆಶಯದಲ್ಲಿ ಆಟಿಡೊಂಜಿ ಐತಾರಾ ಕಾರ್ಯಕ್ರಮವು ಜು.20ರಂದು ಮುಂಡಾಜೆ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು.

ಕಾರ್ಯಕ್ರಮವನ್ನು ರತ್ನರಾಜ ಹೆಗಡೆ ನೆಯ್ಯಾಲ್ ದೀಪ ಪ್ರಜ್ವಲನೆಯ ಮೂಲಕ ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಾಬು ಪೂಜಾರಿ ಕೂಳೂರು ವಹಿಸಿ, ಆಟಿ ತಿಂಗಳಿನ ವಿಶೇಷತೆ ಹಾಗೂ ಆಟಿ ತಿಂಗಳಿನ ಮಹತ್ವವನ್ನು ತಿಳಿಸಿದರು.

ಈ ಸಂದರ್ಭದಲ್ಲಿ ಕುಂಜಣ್ಣ ನಾಯ್ಕ ಹುರ್ತಜೆ, ರಾಮಚಂದ್ರ ಭಟ್ ಅರೆಕಲ್, ಗಣೇಶ ಬಂಗೇರ, ಚೆನ್ನಕೇಶವ ಅರಸಮಜಲು ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಭರತ್ ಶೆಟ್ಟಿ, ಚಂದ್ರಕಾಂತ ಪ್ರಭು ನಿಡಿಗಲ್, ಜಯರಾಜ್ ಸಾಲಿಯಾನ್, ಯೋಗೀಶ್ ಗುಡಿಗಾರ್ ಕಟ್ಟಡಬೈಲು, ಶೀನಪ್ಪ ಗೌಡ, ಲೀಲಾವತಿ ಬಾಲಕೃಷ್ಣ ನಾಯ್ಕ, ಸದಾಶಿವ ನಾಯ್ಕ ಪಣಿಕ್ಕಲ್ ಇವರು ಉಪಸ್ಥಿತರಿದ್ದರು.

ಕಲಾತಂಡದ ಅಧ್ಯಕ್ಷ ಸದಾನಂದ ಬಿ ಮುಂಡಾಜೆ ಸ್ವಾಗತಿಸಿ, ವಿನಿತ್ ಧನ್ಯವಾದವಿತ್ತರು. ಕುಮಾರಿ ಜಿತೀಕ್ಷಾ ಕಾರ್ಯಕ್ರಮವನ್ನು ನಿರೂಪಿಸಿದರು. ನಂತರ ಕೀರ್ತನ ಕಲಾ ತಂಡದ ಸದಸ್ಯರಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಬಂದಂತಹ ಅತಿಥಿಗಳಿಗೆ ಹಾಗೂ ಸಭಿಕರಿಗೆ ತಂಡದ ಸದಸ್ಯರು ತಯಾರಿಸಿದಂತಹ ವಿವಿಧ ತಿಂಡಿ ತಿನಿಸುಗಳನ್ನು ನೀಡಲಾಯಿತು. ಮಧ್ಯಾಹ್ನದ ನಂತರ ವಿವಿಧ ಆಟೋಟ ಸ್ಪರ್ಧೆಗಳನ್ನು ನಡೆಸಿ, ವಿಜೇತರಿಗೆ ಬಹುಮಾನವನ್ನು ವಿತರಿಸಲಾಯಿತು.

Related posts

ಬೆಳಾಲು: ಎರಡು ಗುಂಪುಗಳ ನಡುವೆ ಗಲಾಟೆ: ಪರಸ್ಪರ ಆರೋಪ ಹೊರಿಸಿ ಪೊಲೀಸರಿಗೆ ದೂರು

Suddi Udaya

ಗುರುವಾಯನಕೆರೆ ವಿದ್ವತ್ ಪ.ಪೂ. ಕಾಲೇಜಿನಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಆಚರಣೆ

Suddi Udaya

ವರ್ಗಾವಣೆಗೊಂಡ ಶಿಕ್ಷಕ ಸುರೇಶ್ ಶೆಟ್ಟಿಯವರಿಗೆ ಕುವೆಟ್ಟು ಸ.ಉ.ಹಿ.ಪ್ರಾ. ಶಾಲಾ ವತಿಯಿಂದ ಬಿಳ್ಕೋಡುಗೆ ಸಮಾರಂಭ

Suddi Udaya

ಬೆಳ್ತಂಗಡಿ ಫೆಡರೇಷನ್ ಆಫ್ ಕರ್ನಾಟಕ ಆಟೋ ಡ್ರೈವರ್ಸ್ ಯೂನಿಯನ್ ವತಿಯಿಂದ ಬಿ.ಜಿ ಆಟೋ ಡ್ರೈವರ್ಸ್ ಯೂನಿಯನ್ ಮಹಾಸಭೆ,

Suddi Udaya

ಮಾ.3 ರಿಂದ ಮಾ.11ರವರೆಗೆ ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಂಭ್ರಮ: ಮಾ.4ರಂದು ಡಾ. ಹೆಗ್ಗಡೆಯವರಿಂದ ನೂತನ ವಿಜಯಗೋಪುರ ಲೋಕಾರ್ಪಣೆ,

Suddi Udaya

ಬಾರ್ಯ: ಎಡನೀರು ಶ್ರೀಗಳಿಗೆ ಶ್ರೀಮಹಾವಿಷ್ಣು ಯಾಗದ ಆಮಂತ್ರಣ ನೀಡಿ ಆಹ್ವಾನ

Suddi Udaya
error: Content is protected !!