25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮುಂಡಾಜೆ ಕೀರ್ತನ ಕಲಾತಂಡದಿಂದ ‘ಆಟಿಡೊಂಜಿ ಐತಾರಾ’ ಕಾರ್ಯಕ್ರಮ

ಮುಂಡಾಜೆ : ಇಲ್ಲಿಯ ಕೀರ್ತನ ಕಲಾತಂಡ ಇದರ ಆಶಯದಲ್ಲಿ ಆಟಿಡೊಂಜಿ ಐತಾರಾ ಕಾರ್ಯಕ್ರಮವು ಜು.20ರಂದು ಮುಂಡಾಜೆ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು.

ಕಾರ್ಯಕ್ರಮವನ್ನು ರತ್ನರಾಜ ಹೆಗಡೆ ನೆಯ್ಯಾಲ್ ದೀಪ ಪ್ರಜ್ವಲನೆಯ ಮೂಲಕ ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಾಬು ಪೂಜಾರಿ ಕೂಳೂರು ವಹಿಸಿ, ಆಟಿ ತಿಂಗಳಿನ ವಿಶೇಷತೆ ಹಾಗೂ ಆಟಿ ತಿಂಗಳಿನ ಮಹತ್ವವನ್ನು ತಿಳಿಸಿದರು.

ಈ ಸಂದರ್ಭದಲ್ಲಿ ಕುಂಜಣ್ಣ ನಾಯ್ಕ ಹುರ್ತಜೆ, ರಾಮಚಂದ್ರ ಭಟ್ ಅರೆಕಲ್, ಗಣೇಶ ಬಂಗೇರ, ಚೆನ್ನಕೇಶವ ಅರಸಮಜಲು ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಭರತ್ ಶೆಟ್ಟಿ, ಚಂದ್ರಕಾಂತ ಪ್ರಭು ನಿಡಿಗಲ್, ಜಯರಾಜ್ ಸಾಲಿಯಾನ್, ಯೋಗೀಶ್ ಗುಡಿಗಾರ್ ಕಟ್ಟಡಬೈಲು, ಶೀನಪ್ಪ ಗೌಡ, ಲೀಲಾವತಿ ಬಾಲಕೃಷ್ಣ ನಾಯ್ಕ, ಸದಾಶಿವ ನಾಯ್ಕ ಪಣಿಕ್ಕಲ್ ಇವರು ಉಪಸ್ಥಿತರಿದ್ದರು.

ಕಲಾತಂಡದ ಅಧ್ಯಕ್ಷ ಸದಾನಂದ ಬಿ ಮುಂಡಾಜೆ ಸ್ವಾಗತಿಸಿ, ವಿನಿತ್ ಧನ್ಯವಾದವಿತ್ತರು. ಕುಮಾರಿ ಜಿತೀಕ್ಷಾ ಕಾರ್ಯಕ್ರಮವನ್ನು ನಿರೂಪಿಸಿದರು. ನಂತರ ಕೀರ್ತನ ಕಲಾ ತಂಡದ ಸದಸ್ಯರಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಬಂದಂತಹ ಅತಿಥಿಗಳಿಗೆ ಹಾಗೂ ಸಭಿಕರಿಗೆ ತಂಡದ ಸದಸ್ಯರು ತಯಾರಿಸಿದಂತಹ ವಿವಿಧ ತಿಂಡಿ ತಿನಿಸುಗಳನ್ನು ನೀಡಲಾಯಿತು. ಮಧ್ಯಾಹ್ನದ ನಂತರ ವಿವಿಧ ಆಟೋಟ ಸ್ಪರ್ಧೆಗಳನ್ನು ನಡೆಸಿ, ವಿಜೇತರಿಗೆ ಬಹುಮಾನವನ್ನು ವಿತರಿಸಲಾಯಿತು.

Related posts

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ ವಾರ್ಷಿಕ ಕ್ರೀಡಾಕೂಟ

Suddi Udaya

ಬೆಳ್ತಂಗಡಿ ಗ್ರಾಹಕರ ವಿವಿಧೋದ್ದೇಶ ಸಹಕಾರ ಸಂಘದ ವಾರ್ಷಿಕ ಮಹಾಸಭೆ:

Suddi Udaya

ಆದಿಚುಂಚನಗಿರಿ ಶಾಖಾ ಮಠದ ಶ್ರೀ ಧರ್ಮಪಾಲನಾಥ ಸ್ವಾಮೀಜಿರವರನ್ನುಭೇಟಿ ಮಾಡಿದ ಕಿರಣ್ ಚಂದ್ರ ಪುಷ್ಪಗಿರಿ

Suddi Udaya

ಬೆಳ್ತಂಗಡಿ ರೋಟರಿ ಕ್ಲಬ್ ನ ವತಿಯಿಂದ ವೈದ್ಯಕೀಯ ನೆರವು

Suddi Udaya

ಬೆಳ್ತಂಗಡಿ ತಹಶೀಲ್ದಾರ್ ಟಿ.ಸುರೇಶ್ ಕುಮಾರ್ ವರ್ಗಾವಣೆ

Suddi Udaya

ಬೆಳ್ತಂಗಡಿ: ಹಿರಿಯ ವಕೀಲ ಶ್ರೀಧರ ಗೌಡ ನಿಧನ

Suddi Udaya
error: Content is protected !!