22.6 C
ಪುತ್ತೂರು, ಬೆಳ್ತಂಗಡಿ
July 23, 2026
ವರದಿಶಿಕ್ಷಣ ಸಂಸ್ಥೆ

ವಾಣಿ ಕಾಲೇಜಿನ ಪರಿಸರ ಸಂಘದ ವತಿಯಿಂದ ಉಪನ್ಯಾಸ ಕಾರ್ಯಕ್ರಮ

ಬೆಳ್ತಂಗಡಿ: ಪ್ರಕೃತಿಯೊಂದಿಗೆ ಭಾವನಾತ್ಮಕ ಸಂಬಂಧವನ್ನು ಬೆಳೆಸಿಕೊಂಡು ಅದಕ್ಕೆ ಹಾನಿಯಾಗದಂತೆ ಮುಂದುವರಿಸಿಕೊಂಡು ಹೋಗುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದು ಚಿತ್ರದುರ್ಗ ಸರಕಾರಿ ವಿಜ್ಞಾನ ಪದವಿ ಕಾಲೇಜಿನ ಜೀವಶಾಸ್ತ್ರ ಸಹಾಯಕ ಪ್ರಾಧ್ಯಾಪಕ ಸುನಿಲ್ ಪಿ.ಜೆ. ಹೇಳಿದರು.

ಅವರು ವಾಣಿ ಪದವಿ ಪೂರ್ವ ಕಾಲೇಜಿನ ಪರಿಸರ ಸಂಘದ ವತಿಯಿಂದ ನಡೆದ ಉಪನ್ಯಾಸ ಕಾರ್ಯಕ್ರಮಲ್ಲಿ ಪರಿಸರ ಸಂರಕ್ಷಣೆಯ ಅಗತ್ಯತೆಯ ಕುರಿತು ಮಾತನಾಡುತ್ತಾ, ಸಾವಿರಾರು ವರ್ಷಗಳ ಇತಿಹಾಸವುಳ್ಳ ಪ್ರಕೃತಿಯಲ್ಲಿ ಮಾನವರೂ ಒಂದು ಭಾಗವಾಗಿದ್ದು ಅದನ್ನು ಪರಿಶುದ್ಧವಾಗಿ ಉಳಿಸುವ ಅನಿವಾರ್ಯತೆ ನಮ್ಮ ಮೇಲಿದೆ ಎಂದರು.

ಕಾಲೇಜಿನ ಪ್ರಾಂಶುಪಾಲ ವಿಷ್ಣುಪ್ರಕಾಶ್ ಎಂ ಅಧ್ಯಕ್ಷತೆ ವಹಿಸಿದ್ದರು. ಪರಿಸರ ಸಂಘದ ಸಂಯೋಜಕರಾದ ದೀಕ್ಷಾ ಸ್ವಾಗತಿಸಿದರು. ಸ್ವಾತಿ ಧನ್ಯವಾದವಿತ್ತರು. ವಿದ್ಯಾರ್ಥಿನಿ ಮನ್ವಿತಾ ಪೂಜಾರಿ ಕಾರ್ಯಕ್ರಮ ನಿರೂಪಿಸಿದರು.

Related posts

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಗೆ ರಾಷ್ಟ್ರೀಯ ಪ್ರತಿಷ್ಠಿತ ಸ್ಕಾಚ್ ಪ್ರಶಸ್ತಿ

Suddi Udaya

ಅಕ್ರಮ ಗೋಸಾಗಾಟ ಮಾಡಿದವನ ಮನೆ ಜಪ್ತಿ ಮಾಡಿದ ಧರ್ಮಸ್ಥಳ ಪೊಲೀಸರು

Suddi Udaya

ಬೆಳ್ತಂಗಡಿ ಅಖಿಲ ಕರ್ನಾಟಕ ರಾಜಕೇಸರಿ ಟ್ರಸ್ಟ್ ವತಿಯಿಂದ 552 ನೇ ಸೇವಾ ಯೋಜನೆ ಹಸ್ತಾಂತರ: ಬೆನ್ನುಮೂಳೆ ಮುರಿತಕ್ಕೊಳಗಾದವರಿಗೆ ಆಸರೆಯಾದ ರಾಜ ಕೇಸರಿ

Suddi Udaya

ಬಂದಾರು ಸರಕಾರಿ ಶಾಲೆಯಲ್ಲಿ ಪೋಷಕರಿಂದ ಶ್ರಮದಾನ

Suddi Udaya

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ 8 ನಿರ್ದೇಶಕರ ಸ್ಥಾನಗಳಿಗೂ ಅವಿರೋಧ ಆಯ್ಕೆ

Suddi Udaya

ಹೊಕ್ಕಾಡಿಗೋಳಿ ವೀರ ವಿಕ್ರಮ ಜೋಡುಕರೆ ಕಂಬಳದ ಪೂರ್ವಭಾವಿ ಸಭೆ

Suddi Udaya
error: Content is protected !!