25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಹೊಸಂಗಡಿ ಗ್ರಾಮ ಪಂಚಾಯತ್ ನ ಪ್ರಥಮ ಸುತ್ತಿನ ಗ್ರಾಮಸಭೆ

ಹೊಸಂಗಡಿ:ಹೊಸಂಗಡಿ ಗ್ರಾಮ ಪಂಚಾಯತ್ ನ 2025-26 ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮಸಭೆಯು ಪಂಚಾಯತ್ ಅಧ್ಯಕ್ಷ ಜಗದೀಶ್ ಹೆಗ್ಡೆ ಇವರ ಅಧ್ಯಕ್ಷತೆಯಲ್ಲಿ ಪಂಚಾಯತ್ ಸಭಾಂಗಣದಲ್ಲಿ ಜು.22 ರಂದು ನಡೆಯಿತು.

ಮಾರ್ಗದರ್ಶಿ ಅಧಿಕಾರಿ ಬೆಳ್ತಂಗಡಿ ಅಕ್ಷರ ದಾಸೋಹ ಯೋಜನೆಯ ಸಹಾಯಕ ನಿರ್ದೇಶಕ ರಾಜೇಂದ್ರ ಕೃಷ್ಣ ಅವರು ಸಭೆಯನ್ನು ಮುನ್ನಡೆಸಿದರು.

ಗ್ರಾಮಸಭೆಯಲ್ಲಿ ಚರಂಡಿ ದುರಸ್ತಿಯಾಗದೆ ರಸ್ತೆಯಲ್ಲಿ ಮಳೆನೀರು ಹರಿಯುವುದರಿಂದ ವಿದ್ಯಾರ್ಥಿಗಳಿಗೆ,ಸಾರ್ವಜನಿಕರು ತೊಂದರೆಗಳನ್ನು ಅನುಭವಿಸಬೇಕಾಗಿದೆ.ತುರ್ತಾಗಿ ಸಮಸ್ಯೆ ಬಗೆಹರಿಸಲು ಗ್ರಾಮಸ್ಥರು ಒತ್ತಾಯಿಸಿದರು. ‌ಬೀದಿ ದೀಪ ಸರಿಯಾಗಿ ನಿರ್ವಹಣೆಯಿಲ್ಲದೆ ಕತ್ತಲೆಯಲ್ಲಿ ಓಡಾಟ ಮಾಡುವಂತಾಗಿದೆ.ಕೆಲವು ರಸ್ತೆಗಳನ್ನು ತೋಟದ ಬಳ್ಳಿಗಳು ನುಂಗುತ್ತಿದೆ. ರಸ್ತೆ ದುರಸ್ತಿ, ಬೀದಿ ದೀಪ ವಿಸ್ತರಣೆ ಹಾಗೂ ಗ್ರಾಮದ ಅಭಿವೃದ್ಧಿಗೆ ಪೂರಕವಾಗಿ ಗ್ರಾಮಸ್ಥರು ಚರ್ಚಿಸಿದರು.

ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗಣೇಶ್ ಶೆಟ್ಟಿ,ಉಪಾಧ್ಯಕ್ಷೆ ಶಾಂತ,ಕಾರ್ಯದರ್ಶಿ ಕಾಂತಪ್ಪ, ಪಂಚಾಯತ್ ಸದಸ್ಯರಾದ ಶಾಂತಾ, ವಿಶಾಲಾಕ್ಷಿ , ಪ್ರಮೀಳಾ, ನಾಗರತ್ನ,ಲೋಕೇಶ್, ಅಬ್ದುಲ್ ರಹಿಮಾನ್, ಆನಂದ ಕೊಡಿಂಗೇರಿ, ಕರುಣಾಕರ ಪೂಜಾರಿ, ಕಮಲ ಹಾಗೂ ವಿವಿಧ ಇಲಾಖೆಯ ಇಲಾಖಾಧಿಕಾರಿಗಳು ಮಾಹಿತಿ ನೀಡಿದರು.ಪಂಚಾಯತ್ ಸಿಬ್ಬಂದಿಗಳು ಸಹಕರಿಸಿದರು. ಗ್ರಾಮಸ್ಥರು ಭಾಗವಹಿಸಿದ್ದರು

Related posts

ಶ್ರೀರಾಮ ಶಾಲೆ ಸುಲ್ಕೇರಿಯ ವಿದ್ಯಾರ್ಥಿನಿ ಕು.ನಿಷ್ಕಾ ಜೈನ್ ಕಥೆ ಹೇಳುವ ಸ್ಪರ್ಧೆಯಲ್ಲಿ ಪ್ರಥಮ

Suddi Udaya

ಗುಂಡೇರಿ ಲಯನ್ಸ್ ಬಸ್ ತಂಗುದಾನದಲ್ಲಿದ್ದ ಶ್ರೀ ಕೃಷ್ಣನ ಮೂರ್ತಿ ತೆರವು,: ಲಯನ್ಸ್ ಕ್ಲಬ್ ಅದ್ಯಕ್ಷ ದೇವದಾಸ್ ಶೆಟ್ಟಿ ನೇತೃತ್ವದಲ್ಲಿ ಪವಿತ್ರ ಪಲ್ಗುಣಿ ನದಿಯಲ್ಲಿ ಮೂರ್ತಿ ವಿಸರ್ಜನೆ

Suddi Udaya

ಜ.4: ಸುಲ್ಕೇರಿ ನೂತನ ಶ್ರೀ ನೇಮಿನಾಥ ಸಭಾಭವನ ಉದ್ಘಾಟನೆ

Suddi Udaya

ಎಸ್.ಡಿ.ಎಂ ಕಾಲೇಜಿನಲ್ಲಿ ಎರಡು ದಿನಗಳ ಅಂತಾರಾಷ್ಟ್ರೀಯ ವಿಚಾರ ಸಂಕಿರಣ ಸಮಾರೋಪ ಸಮಾರಂಭ

Suddi Udaya

ಕಡಿರುದ್ಯಾವರ: 30 ಅಡಿ ಆಳದ ಬಾವಿಗೆ ಬಿದ್ದ ಗಬ್ಬದ ಹಸು

Suddi Udaya

ಇಂದಬೆಟ್ಟು : ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಬೊಲೆರೋ

Suddi Udaya
error: Content is protected !!