23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಗುಡ್ ಫ್ಯೂಚರ್ ಚೈಲ್ಡ್ ಆಂಗ್ಲ ಮಾಧ್ಯಮ‌ ಶಾಲೆಯ ಶಿಕ್ಷಕ – ರಕ್ಷಕ ಸಂಘದ ಸಭೆ

ಪಿಲ್ಯ : ಗುಡ್ ಫ್ಯೂಚರ್ ಚೈಲ್ಡ್ ಆಂಗ್ಲ ಮಾಧ್ಯಮ‌ ಶಾಲೆಯ 2025-26 ನೇ ಶೈಕ್ಷಣಿಕ ಸಾಲಿನ ಸಭೆಯು ಜು. 21 ರಂದು ನಡೆಯಿತು.

ಶಾಲಾ ಮುಖ್ಯೋಪಾಧ್ಯಾಯ ಪ್ರಭಾಕರ್ ಶೆಟ್ಟಿ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಈ ಸಂದರ್ಭದಲ್ಲಿ ನೂತನ ಶಿಕ್ಷಕ – ರಕ್ಷಕ ಸಂಘದ ರಚನೆ ಮಾಡಲಾಯಿತು. ಅಧ್ಯಕ್ಷರಾಗಿ ಅಬ್ದುಲ್ ಶುಕುರ್ ಸಾಹೇಬ್ , ಉಪಾಧ್ಯಕ್ಷರಾಗಿ ಧನಕೀರ್ತಿ ಜೈನ್ ಹಾಗೂ ಶ್ರೀಮತಿ ವಿನಯಾ ಆಯ್ಕೆಯಾದರು. ಸದಸ್ಯರುಗಳಾಗಿ ರೆಹಮತ್, ಮೊಹಮ್ಮದ್ ಅಶ್ರಫ್, ಯಶೋಧರ್, ಬಿಂದು, ಯಶೋದ, ಸುರೇಖಾ, ಸಬೀನ ಪರ್ವಿನ್, ಗೀತಾ, ಗಿರೀಶ್, ರಮೀಝಾ ಹಾಗೂ ರಾಜೇಶ್, ಕಾರ್ಯದರ್ಶಿಯಾಗಿ ಶಾಲಾ ಮುಖ್ಯೋಪಾಧ್ಯಾಯ ಪ್ರಭಾಕರ್ ಶೆಟ್ಟಿಯವರು ಆಯ್ಕೆಯಾಗಿದ್ದಾರೆ.

ನೂತನ ಶಿಕ್ಷಕ – ರಕ್ಷಕ ಸಮಿತಿಯ ರಚನೆಯ ಕುರಿತು ಶಾಲಾ ಸಂಚಾಲಕ ನಸೀರ್ ಅಹಮ್ಮದ್ ಖಾನ್ ಅವರು ಶಾಲಾ ಅಭಿವೃದ್ಧಿಯ ಬಗೆಗೆ ಮನದ ಮಾತುಗಳನ್ನಾಡಿದರು. ಪ್ರಾರ್ಥನೆಯನ್ನು ಶ್ರುತನ್ ಜೈನ್, ಅನುಷ್ಕಾ, ಮಹಾನ್, ಅವನೀಶ್ ನೆರವೇರಿಸಿದರು. ಶ್ರೀಮತಿ ಫೈಝಾನ್ ಸ್ವಾಗತಿಸಿದರು. ಕಾರ್ಯಕ್ರಮದ ನಿರೂಪಣೆಯನ್ನು ಶ್ರೀಮತಿ ಸರ್ವಾಣಿಯವರು ನೆರವೇರಿಸಿದರು. ರಕ್ಷಿತಾ ಧನ್ಯವಾದ ಸಮರ್ಪಿಸಿದರು.

Related posts

ಮಡಂತ್ಯಾರು ಶ್ರೀ ಕ್ಷೇ.ಧ.ಗ್ರಾ. ಯೋಜನೆ ಹಾಗೂ ವಿವಿಧ ಸಮಿತಿಯಿಂದ ಸತ್ಯ ನಾರಾಯಣ ಪೂಜೆ ಮತ್ತು ಪದಗ್ರಹಣ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ಜೈನ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

Suddi Udaya

ನಕಲಿ ಸಹಿ ಮಾಡಿ ಅಕ್ಷರ ದಾಸೋಹ ಮತ್ತು ಎಸ್.ಎಸ್.ಎ. ಖಾತೆಯ ಹಣ ಡ್ರಾ; ಮುಖ್ಯ ಶಿಕ್ಷಕಿಯ ವಿರುದ್ಧ ಎಸ್.ಡಿ.ಎಂ.ಸಿ ಅಧ್ಯಕ್ಷೆ ದೂರು: ಪೋಜ೯ರಿ ಸಹಿ ಮಾಡಿ ಶಾಲೆಯ ಖಾತೆಯಿಂದ ಯಾವತ್ತೂ ಹಣವನ್ನು ಡ್ರಾ ಮಾಡಿರುವುದಿಲ್ಲ : ಮುಖ್ಯ ಶಿಕ್ಷಕಿ ಸ್ಪಷ್ಟನೆ

Suddi Udaya

ಶ್ರೀ ಕ್ಷೇ.ಧ.ಗ್ರಾ.ಯೋಜನೆ ಹಾಗೂ ಪಾಲೇದು ಸ. ಹಿ. ಪ್ರಾ. ಶಾಲೆಯ ಸಹಯೋಗದೊಂದಿಗೆ ವಿಶ್ವ ಪರಿಸರ ದಿನಾಚರಣೆ

Suddi Udaya

ಧರ್ಮಸ್ಥಳ: ನೇರ್ತನೆ ಪ್ರದೇಶದಲ್ಲಿ ಕಾಡಾನೆ ದಾಳಿ

Suddi Udaya

ಜೂ.13: ಗುರುವಾಯನಕೆರೆ 11ಕೆವಿ ಫೀಡರಿನಲ್ಲಿ ವಿದ್ಯುತ್ ನಿಲುಗಡೆ

Suddi Udaya
error: Content is protected !!