25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬಿಜೆಪಿಗರೇ, ಸರ್ಕಾರದ ವಿರುದ್ಧ ಸುಳ್ಳು ಆರೋಪ ನಿಲ್ಲಿಸಿ, ತಾಲೂಕಿಗೆ ನೀಡಿದ ಅಭಿವೃದ್ಧಿ, ಯೋಜನೆ ಗಮನಿಸಿ: ಅಭಿವೃದ್ಧಿ ಅನುದಾನಗಳ ಪಟ್ಟಿಗಳೊಂದಿಗೆ ಯುವ ಕಾಂಗ್ರೆಸ್ ಬೆಳ್ತಂಗಡಿ ವತಿಯಿಂದ ಪೋಸ್ಟರ್ ಅಭಿಯಾನ

ಬೆಳ್ತಂಗಡಿ:ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಬಂದ ನಂತರ, ಗ್ಯಾರಂಟಿ ಯೋಜನೆಗಳನ್ನು ಜನತೆಗೆ ಯಶಸ್ವಿಯಾಗಿ ನೀಡಿ, ಅಭಿವೃದ್ಧಿ ಮತ್ತು ಯೋಜನೆಗಳಿಗೆ ಅನುದಾನಗಳು ನೀಡುತ್ತಿದ್ದಾರೆ.ಆದರೆ ವಿರೋಧ ಪಕ್ಷ ಬಿಜೆಪಿ ಸುಳ್ಳು ಮತ್ತು ವ್ಯರ್ಥ ಆರೋಪವನ್ನು ಮಾಡುತ್ತಿದ್ದು ಸರ್ಕಾರ ಅಭಿವೃದ್ಧಿಗೆ ಅನುದಾನವನ್ನು ನೀಡುತ್ತಿಲ್ಲ ಎಂದು ಆರೋಪ ಮಾಡುತ್ತಿದ್ದಾರೆ.

ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಬಂದ ನಂತರ ತಾಲೂಕಿಗೆ ನೀಡಿರುವ ಅಭಿವೃದ್ಧಿ ಯೋಜನೆಗಳ,ಅನುದಾನಗಳ ಪಟ್ಟಿಗಳೊಂದಿಗೆ ಜು.30 ರಂದು ಯುವ ಕಾಂಗ್ರೆಸ್ ಬೆಳ್ತಂಗಡಿ ವತಿಯಿಂದ ಪೋಸ್ಟರ್ ಅಭಿಯಾನವನ್ನು ನಡೆಸಲಿದ್ದಾರೆ.ಪೋಸ್ಟರ್ ಅಭಿಯಾನದ,ಬಿತ್ತಿ ಪತ್ರವನ್ನು ಇಂದು ಬಿಡುಗಡೆಗೊಳಿಸಲಾಯಿತು.

ಈ ಸಂದರ್ಭದಲ್ಲಿ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷರಾದ ಇಬ್ರಾಹಿಂ ನವಾಜ್, ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಅಧ್ಯಕ್ಷರಾದ ಹಕ್ಕಿಮ್ ಕೊಕ್ಕಡ, ರಾಜ್ಯ ಯುವ ಕಾಂಗ್ರೆಸ್ ಕಾರ್ಯದರ್ಶಿ ಅಭಿನಂದನ್ ಹರೀಶ್ ಕುಮಾರ್, ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ನಿತೇಶ್,ಯುವ ಕಾಂಗ್ರೆಸ್ ಗ್ರಾಮೀಣ ಸಮಿತಿಯ ಅಧ್ಯಕ್ಷರಾದ ಅಝರ್ ನಾವುರು,ಯುವ ಕಾಂಗ್ರೆಸ್ ಉಪಾಧ್ಯಕ್ಷರಾದ ಅರುಣ್ ಲೋಬೊ, ನವೀನ್ ಗೌಡ ಸವಣಾಲು,ಪ್ರಧಾನ ಕಾರ್ಯದರ್ಶಿ ರಾಘವೇಂದ್ರ ಮೆಲಂತಬೆಟ್ಟು,ಯುವ ಕಾಂಗ್ರೆಸ್ ಪದಾಧಿಕಾರಿಗಳಾದ ಮಹಮದ್ ಸಿದ್ದಿಕ್ ಮೆಲಂತಬೆಟ್ಟು, ಅವಿನಾಶ್ ಮೇಲಂತಬೆಟ್ಟು, ಜಾನ್ಸನ್ ಕೊಕ್ಕಡ, ವಿನಯ್ ಉಜಿರೆ, ಗಣೇಶ್ ಕಣಿಯೂರು ಉಪಸ್ಥಿತರಿದ್ದರು

Related posts

ಮಡಂತ್ಯಾರು ಗ್ರಾ.ಪಂ. ವ್ಯಾಪ್ತಿಯಲ್ಲಿ ಕೂಸಿನ ಮನೆ ಶಿಶುಪಾಲನಾ ಕೇಂದ್ರ ಉದ್ಘಾಟನೆ

Suddi Udaya

ಅಭಿವೃದ್ದಿ ಹೊಂದುತ್ತಿರುವ ಉಜಿರೆ ಹಳೆಪೇಟೆ ಸರಕಾರಿ ಶಾಲೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಶ್ರೀ ಕ್ಷೇತ್ರ ಧರ್ಮಸ್ಥಳದ ಮಾತೃಶ್ರೀ ಹೇಮಾವತಿ ಹೆಗ್ಗಡೆಯವರು ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ ಮೋಹನ್ ಕುಮಾರ್ ನೇತೃತ್ವದಲ್ಲಿ ಶ್ರಮದಾನ

Suddi Udaya

ಗುರುವಾಯನಕೆರೆ ಶ್ರೀ ಕ್ಷೇ.ಧ.ಗ್ರಾ. ಯೋಜನೆ ಬಿ ಸಿ ಟ್ರಸ್ಟ್ ವತಿಯಿಂದ ಟೈಲರಿಂಗ್ ತರಬೇತಿ ಕಾರ್ಯಕ್ರಮ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಶುಶ್ರೂಷ ಮಾಹಿತಿ ಕಾರ್ಯಾಗಾರ: ಜೆಸಿಐ ಪದಾಧಿಕಾರಿಗಳೊಂದಿಗೆ ಕುಟುಂಭೋತ್ಸವ ಆಚರಣೆ, ಬಹುಮಾನ ವಿತರಣೆ

Suddi Udaya

ಗುರುವಾಯನಕೆರೆ: ವಿದ್ವತ್ ಪ.ಪೂ. ಕಾಲೇಜಿನಲ್ಲಿ ಚಾರ್ಟರ್ಡ್ ಅಕೌಂಟೆಂಟ್ಸ್ ಡೇ ಆಚರಣೆ

Suddi Udaya

ತಾಲೂಕಿನಾದ್ಯಂತ ಸುರಿಯುತ್ತಿರುವ ಮಳೆಯ ಮುಂಜಾಗ್ರತಾ ಕ್ರಮವಾಗಿ ಶಾಸಕ ಹರೀಶ್ ಪೂಂಜರಿಂದ ಅಧಿಕಾರಿಗಳ ಸಭೆ

Suddi Udaya
error: Content is protected !!