25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮುಂಡಾಜೆ ಕೀರ್ತನ ಕಲಾತಂಡದಿಂದ ‘ಆಟಿಡೊಂಜಿ ಐತಾರಾ’ ಕಾರ್ಯಕ್ರಮ

ಮುಂಡಾಜೆ : ಇಲ್ಲಿಯ ಕೀರ್ತನ ಕಲಾತಂಡ ಇದರ ಆಶಯದಲ್ಲಿ ಆಟಿಡೊಂಜಿ ಐತಾರಾ ಕಾರ್ಯಕ್ರಮವು ಜು.20ರಂದು ಮುಂಡಾಜೆ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು.

ಕಾರ್ಯಕ್ರಮವನ್ನು ರತ್ನರಾಜ ಹೆಗಡೆ ನೆಯ್ಯಾಲ್ ದೀಪ ಪ್ರಜ್ವಲನೆಯ ಮೂಲಕ ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಾಬು ಪೂಜಾರಿ ಕೂಳೂರು ವಹಿಸಿ, ಆಟಿ ತಿಂಗಳಿನ ವಿಶೇಷತೆ ಹಾಗೂ ಆಟಿ ತಿಂಗಳಿನ ಮಹತ್ವವನ್ನು ತಿಳಿಸಿದರು.

ಈ ಸಂದರ್ಭದಲ್ಲಿ ಕುಂಜಣ್ಣ ನಾಯ್ಕ ಹುರ್ತಜೆ, ರಾಮಚಂದ್ರ ಭಟ್ ಅರೆಕಲ್, ಗಣೇಶ ಬಂಗೇರ, ಚೆನ್ನಕೇಶವ ಅರಸಮಜಲು ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಭರತ್ ಶೆಟ್ಟಿ, ಚಂದ್ರಕಾಂತ ಪ್ರಭು ನಿಡಿಗಲ್, ಜಯರಾಜ್ ಸಾಲಿಯಾನ್, ಯೋಗೀಶ್ ಗುಡಿಗಾರ್ ಕಟ್ಟಡಬೈಲು, ಶೀನಪ್ಪ ಗೌಡ, ಲೀಲಾವತಿ ಬಾಲಕೃಷ್ಣ ನಾಯ್ಕ, ಸದಾಶಿವ ನಾಯ್ಕ ಪಣಿಕ್ಕಲ್ ಇವರು ಉಪಸ್ಥಿತರಿದ್ದರು.

ಕಲಾತಂಡದ ಅಧ್ಯಕ್ಷ ಸದಾನಂದ ಬಿ ಮುಂಡಾಜೆ ಸ್ವಾಗತಿಸಿ, ವಿನಿತ್ ಧನ್ಯವಾದವಿತ್ತರು. ಕುಮಾರಿ ಜಿತೀಕ್ಷಾ ಕಾರ್ಯಕ್ರಮವನ್ನು ನಿರೂಪಿಸಿದರು. ನಂತರ ಕೀರ್ತನ ಕಲಾ ತಂಡದ ಸದಸ್ಯರಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಬಂದಂತಹ ಅತಿಥಿಗಳಿಗೆ ಹಾಗೂ ಸಭಿಕರಿಗೆ ತಂಡದ ಸದಸ್ಯರು ತಯಾರಿಸಿದಂತಹ ವಿವಿಧ ತಿಂಡಿ ತಿನಿಸುಗಳನ್ನು ನೀಡಲಾಯಿತು. ಮಧ್ಯಾಹ್ನದ ನಂತರ ವಿವಿಧ ಆಟೋಟ ಸ್ಪರ್ಧೆಗಳನ್ನು ನಡೆಸಿ, ವಿಜೇತರಿಗೆ ಬಹುಮಾನವನ್ನು ವಿತರಿಸಲಾಯಿತು.

Related posts

ಗುರುವಾಯನಕೆರೆ: ವಿದ್ವತ್ ಪ.ಪೂ. ಕಾಲೇಜಿನಲ್ಲಿ ಚಾರ್ಟರ್ಡ್ ಅಕೌಂಟೆಂಟ್ಸ್ ಡೇ ಆಚರಣೆ

Suddi Udaya

ಮದ್ದಡ್ಕ, ನೇರಳಕಟ್ಟೆ, ಪಣಕಜೆ ಭಾಗದಲ್ಲಿ ಪ್ರಯೋಜನಕ್ಕೆ ಬಾರದ ಏರ್ ಟೆಲ್ ಹಾಗೂ ಬಿಎಸ್.ಎನ್.ಎಲ್ ಟವರ್: ನೆಟ್ವರ್ಕ್ ಸಮಸ್ಯೆಯಿಂದ ಸಂಕಷ್ಟಕ್ಕೆ ಒಳಗಾದ ಸ್ಥಳೀಯರು

Suddi Udaya

ಎ.2: ಬಿಜೆಪಿ ಬೆಳ್ತಂಗಡಿ ಮಂಡಲ ಪದಾಧಿಕಾರಿಗಳ, ವಿವಿಧ ಮೋರ್ಚಾಗಳ, ಮಹಾಶಕ್ತಿಕೇಂದ್ರ, ಶಕ್ತಿಕೇಂದ್ರ ಹಾಗೂ ಬೂತ್ ಸಮಿತಿ ಪದಾಧಿಕಾರಿಗಳ ಪದಗ್ರಹಣ ಹಾಗೂ ಕಾರ್ಯಕರ್ತರ ಸಮಾವೇಶ

Suddi Udaya

ತಾಲೂಕು ಯುವಜನ ಒಕ್ಕೂಟದಿಂದ ತಾಲೂಕು ಮಟ್ಟದ ಕೆಸರು ಗದ್ದೆ ಕ್ರೀಡಾಕೂಟ

Suddi Udaya

ಗಾಳಿ ಮಳೆ: ಕಳಿಯ-ನ್ಯಾಯತರ್ಪು ವ್ಯಾಪಕ ಹಾನಿ15ಕ್ಕೂ ಹೆಚ್ಚು ವಿದ್ಯುತ್ ಕಂಬಗಳು ಧರೆಗೆ

Suddi Udaya

ನಡ ಪ್ರೌಢ ಶಾಲೆ ಹಾಗೂ ಕಾಲೇಜಿಗೆ ನುಗ್ಗಿದ ಕಳ್ಳರು: ಸಿಸಿ ಕ್ಯಾಮರ ಹಾಗೂ ದಾಖಲೆ ಪತ್ರಗಳಿಗೆ ಹಾನಿ

Suddi Udaya
error: Content is protected !!