25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಹೊಸಂಗಡಿ ಗ್ರಾಮ ಪಂಚಾಯತ್ ನ ಪ್ರಥಮ ಸುತ್ತಿನ ಗ್ರಾಮಸಭೆ

ಹೊಸಂಗಡಿ:ಹೊಸಂಗಡಿ ಗ್ರಾಮ ಪಂಚಾಯತ್ ನ 2025-26 ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮಸಭೆಯು ಪಂಚಾಯತ್ ಅಧ್ಯಕ್ಷ ಜಗದೀಶ್ ಹೆಗ್ಡೆ ಇವರ ಅಧ್ಯಕ್ಷತೆಯಲ್ಲಿ ಪಂಚಾಯತ್ ಸಭಾಂಗಣದಲ್ಲಿ ಜು.22 ರಂದು ನಡೆಯಿತು.

ಮಾರ್ಗದರ್ಶಿ ಅಧಿಕಾರಿ ಬೆಳ್ತಂಗಡಿ ಅಕ್ಷರ ದಾಸೋಹ ಯೋಜನೆಯ ಸಹಾಯಕ ನಿರ್ದೇಶಕ ರಾಜೇಂದ್ರ ಕೃಷ್ಣ ಅವರು ಸಭೆಯನ್ನು ಮುನ್ನಡೆಸಿದರು.

ಗ್ರಾಮಸಭೆಯಲ್ಲಿ ಚರಂಡಿ ದುರಸ್ತಿಯಾಗದೆ ರಸ್ತೆಯಲ್ಲಿ ಮಳೆನೀರು ಹರಿಯುವುದರಿಂದ ವಿದ್ಯಾರ್ಥಿಗಳಿಗೆ,ಸಾರ್ವಜನಿಕರು ತೊಂದರೆಗಳನ್ನು ಅನುಭವಿಸಬೇಕಾಗಿದೆ.ತುರ್ತಾಗಿ ಸಮಸ್ಯೆ ಬಗೆಹರಿಸಲು ಗ್ರಾಮಸ್ಥರು ಒತ್ತಾಯಿಸಿದರು. ‌ಬೀದಿ ದೀಪ ಸರಿಯಾಗಿ ನಿರ್ವಹಣೆಯಿಲ್ಲದೆ ಕತ್ತಲೆಯಲ್ಲಿ ಓಡಾಟ ಮಾಡುವಂತಾಗಿದೆ.ಕೆಲವು ರಸ್ತೆಗಳನ್ನು ತೋಟದ ಬಳ್ಳಿಗಳು ನುಂಗುತ್ತಿದೆ. ರಸ್ತೆ ದುರಸ್ತಿ, ಬೀದಿ ದೀಪ ವಿಸ್ತರಣೆ ಹಾಗೂ ಗ್ರಾಮದ ಅಭಿವೃದ್ಧಿಗೆ ಪೂರಕವಾಗಿ ಗ್ರಾಮಸ್ಥರು ಚರ್ಚಿಸಿದರು.

ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗಣೇಶ್ ಶೆಟ್ಟಿ,ಉಪಾಧ್ಯಕ್ಷೆ ಶಾಂತ,ಕಾರ್ಯದರ್ಶಿ ಕಾಂತಪ್ಪ, ಪಂಚಾಯತ್ ಸದಸ್ಯರಾದ ಶಾಂತಾ, ವಿಶಾಲಾಕ್ಷಿ , ಪ್ರಮೀಳಾ, ನಾಗರತ್ನ,ಲೋಕೇಶ್, ಅಬ್ದುಲ್ ರಹಿಮಾನ್, ಆನಂದ ಕೊಡಿಂಗೇರಿ, ಕರುಣಾಕರ ಪೂಜಾರಿ, ಕಮಲ ಹಾಗೂ ವಿವಿಧ ಇಲಾಖೆಯ ಇಲಾಖಾಧಿಕಾರಿಗಳು ಮಾಹಿತಿ ನೀಡಿದರು.ಪಂಚಾಯತ್ ಸಿಬ್ಬಂದಿಗಳು ಸಹಕರಿಸಿದರು. ಗ್ರಾಮಸ್ಥರು ಭಾಗವಹಿಸಿದ್ದರು

Related posts

ಶಿರ್ಲಾಲು: ಅಂಗಡಿಗೆ ಬಿದ್ದ ಬೃಹತ್ ಗಾತ್ರದ ಮರ, ಅಪಾರ ಹಾನಿ

Suddi Udaya

ಕ್ರಿಶ್ಚಿಯನ್ ಬ್ರದರ್ಸ್ ಕಳೆಂಜ ವತಿಯಿಂದ ನೂತನ ಬಿಷಪ್‌ರಿಗೆ ಸನ್ಮಾನ

Suddi Udaya

ಉಜಿರೆ ಶ್ರೀ ಜನಾರ್ದನ ದೇವಸ್ಥಾನವರ್ಷಾವಧಿ ಜಾತ್ರಾ ಮಹೋತ್ಸವ ಆರಂಭ

Suddi Udaya

ಪವರ್ ಲಿಫ್ಟಿಂಗ್ ಸ್ಪರ್ಧೆ: ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಹೇಮಚಂದ್ರರಿಗೆ ಚಿನ್ನದ ಪದಕ

Suddi Udaya

ಸೌಜನ್ಯ ಕೊಲೆ ಪ್ರಕರಣ ಮರು ತನಿಖೆ ನಡೆಸುವಂತೆ ಶಿಶಿಲ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಗ್ರಾಮ ಸಮಿತಿಯಿಂದ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಮನವಿ

Suddi Udaya

ಪ್ರಸಿದ್ಧ ಗುಜರಾತ್ ಉದ್ಯಮಿ ಶಶಿಧ‌ರ್ ಶೆಟ್ಟಿ ನವಶಕ್ತಿ ಯವರಿಗೆ ಮಾತೃ ವಿಯೋಗ

Suddi Udaya
error: Content is protected !!