September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಹೊಸಂಗಡಿ ಗ್ರಾಮ ಪಂಚಾಯತ್ ನ ಪ್ರಥಮ ಸುತ್ತಿನ ಗ್ರಾಮಸಭೆ

ಹೊಸಂಗಡಿ:ಹೊಸಂಗಡಿ ಗ್ರಾಮ ಪಂಚಾಯತ್ ನ 2025-26 ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮಸಭೆಯು ಪಂಚಾಯತ್ ಅಧ್ಯಕ್ಷ ಜಗದೀಶ್ ಹೆಗ್ಡೆ ಇವರ ಅಧ್ಯಕ್ಷತೆಯಲ್ಲಿ ಪಂಚಾಯತ್ ಸಭಾಂಗಣದಲ್ಲಿ ಜು.22 ರಂದು ನಡೆಯಿತು.

ಮಾರ್ಗದರ್ಶಿ ಅಧಿಕಾರಿ ಬೆಳ್ತಂಗಡಿ ಅಕ್ಷರ ದಾಸೋಹ ಯೋಜನೆಯ ಸಹಾಯಕ ನಿರ್ದೇಶಕ ರಾಜೇಂದ್ರ ಕೃಷ್ಣ ಅವರು ಸಭೆಯನ್ನು ಮುನ್ನಡೆಸಿದರು.

ಗ್ರಾಮಸಭೆಯಲ್ಲಿ ಚರಂಡಿ ದುರಸ್ತಿಯಾಗದೆ ರಸ್ತೆಯಲ್ಲಿ ಮಳೆನೀರು ಹರಿಯುವುದರಿಂದ ವಿದ್ಯಾರ್ಥಿಗಳಿಗೆ,ಸಾರ್ವಜನಿಕರು ತೊಂದರೆಗಳನ್ನು ಅನುಭವಿಸಬೇಕಾಗಿದೆ.ತುರ್ತಾಗಿ ಸಮಸ್ಯೆ ಬಗೆಹರಿಸಲು ಗ್ರಾಮಸ್ಥರು ಒತ್ತಾಯಿಸಿದರು. ‌ಬೀದಿ ದೀಪ ಸರಿಯಾಗಿ ನಿರ್ವಹಣೆಯಿಲ್ಲದೆ ಕತ್ತಲೆಯಲ್ಲಿ ಓಡಾಟ ಮಾಡುವಂತಾಗಿದೆ.ಕೆಲವು ರಸ್ತೆಗಳನ್ನು ತೋಟದ ಬಳ್ಳಿಗಳು ನುಂಗುತ್ತಿದೆ. ರಸ್ತೆ ದುರಸ್ತಿ, ಬೀದಿ ದೀಪ ವಿಸ್ತರಣೆ ಹಾಗೂ ಗ್ರಾಮದ ಅಭಿವೃದ್ಧಿಗೆ ಪೂರಕವಾಗಿ ಗ್ರಾಮಸ್ಥರು ಚರ್ಚಿಸಿದರು.

ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗಣೇಶ್ ಶೆಟ್ಟಿ,ಉಪಾಧ್ಯಕ್ಷೆ ಶಾಂತ,ಕಾರ್ಯದರ್ಶಿ ಕಾಂತಪ್ಪ, ಪಂಚಾಯತ್ ಸದಸ್ಯರಾದ ಶಾಂತಾ, ವಿಶಾಲಾಕ್ಷಿ , ಪ್ರಮೀಳಾ, ನಾಗರತ್ನ,ಲೋಕೇಶ್, ಅಬ್ದುಲ್ ರಹಿಮಾನ್, ಆನಂದ ಕೊಡಿಂಗೇರಿ, ಕರುಣಾಕರ ಪೂಜಾರಿ, ಕಮಲ ಹಾಗೂ ವಿವಿಧ ಇಲಾಖೆಯ ಇಲಾಖಾಧಿಕಾರಿಗಳು ಮಾಹಿತಿ ನೀಡಿದರು.ಪಂಚಾಯತ್ ಸಿಬ್ಬಂದಿಗಳು ಸಹಕರಿಸಿದರು. ಗ್ರಾಮಸ್ಥರು ಭಾಗವಹಿಸಿದ್ದರು

Related posts

ತೋಟತ್ತಾಡಿ: ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವದ ಪೂರ್ವಸಿದ್ಧತಾ ಸಭೆ ಹಾಗೂ ಸಮಿತಿ ರಚನೆ

Suddi Udaya

ಮಹಾತೋಭಾರ ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಪಂಚಮಿಯಂದು ಕೊಪ್ಪರಿಗೆ ಮುಹೂರ್ತ, ಅಂಗಪ್ರದಕ್ಷಣೆ

Suddi Udaya

ಜೋಗಿ ಪುರುಷರ ವೃಂದ ನಿಟ್ಟಡ್ಕ ನಾಲ್ಕೂರು ವತಿಯಿಂದ ರಾಶಿಪೂಜೆ: ನಾಲ್ಕು ಪುರುಷ ಕಲಾವಿದರಿಗೆ ಸನ್ಮಾನ, ಪೂಜೆಯಲ್ಲಿ ನೂರಾರು ಭಕ್ತರು ಭಾಗಿ

Suddi Udaya

ಪೆರ್ಲ ಬೈಪಾಡಿ ಸಿದ್ಧಿಶ್ರೀ ಲೀಫ್ ಕಪ್ ಇಂಡಸ್ಟ್ರೀಸ್ ನವೀಕೃತ ಯಂತ್ರದ ಉದ್ಘಾಟನೆ

Suddi Udaya

ನಾವೂರು ಆಟೋ ಚಾಲಕ ಲಿಂಗಪ್ಪಗೌಡರ ಚಿಕಿತ್ಸಾ ನೆರವಿಗೆ ಮನವಿ

Suddi Udaya

ಸೇವಾಭಾರತಿಯಿಂದ ಈ ವರ್ಷದ “ಸೇವಾ ಶ್ರೇಷ್ಠ -2024” ಪುರಸ್ಕಾರ:

Suddi Udaya
error: Content is protected !!