July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತಾಲೂಕಿನ ಹಲವು ಶಾಲೆಗಳನ್ನು ಕರ್ನಾಟಕ ಪಬ್ಲಿಕ್ ಸ್ಕೂಲ್ಆಗಿ ಉನ್ನತೀಕರಿಸುವಂತೆ ಶಾಸಕ ಹರೀಶ್ ಪೂಂಜರಿಂದ ಮನವಿ

ಬೆಳ್ತಂಗಡಿ: ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಬರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮಚ್ಚಿನ, ಕೊರಂಜ, ಸರ್ಕಾರಿ ಪ್ರೌಢಶಾಲೆ ವೇಣೂರು, ಅಳದಂಗಡಿ, ಪದ್ಮುಂಜ, ಕೊಕ್ರಾಡಿ, ಅರಸಿನಮಕ್ಕಿ ಮುಂತಾದ ಹಿರಿಯ ಪ್ರಾಥಮಿಕ ಶಾಲೆ, ಪ್ರೌಢ ಶಾಲೆ, ಹಾಗೂ ಹಲವು ಪದವಿ ಪೂರ್ವ ಕಾಲೇಜುಗಳನ್ನು ಉನ್ನತಿಕರಿಸಿ ಕರ್ನಾಟಕ ಪಬ್ಲಿಕ್ ಶಾಲೆ ಗಳನ್ನಾಗಿ ಪ್ರಾರಂಭಿಸಲು ಮಂಜೂರು ಮಾಡಿ ಆದೇಶಿಸುವಂತೆ ಜು.18 ರಂದು ಶಾಸಕ ಹರೀಶ್ ಪೂಂಜ ಅವರು ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ಅವರನ್ನು ಭೇಟಿ ಮಾಡಿ ಮನವಿ ಮಾಡಿದ್ದರು.

ಜು.23ರಂದು ವಿಷಯವಾಗಿ ಶಿಕ್ಷಣ ಇಲಾಖೆಯ ಮುಖ್ಯ ಕಾರ್ಯದರ್ಶಿಗಳಾದ ರಶ್ಮಿ ಹಾಗೂ ಶಿಕ್ಷಣ ಇಲಾಖೆಯ ಕಮಿಷನರ್ ಆಗಿರುವ ತ್ರಿಲೋಕ್ ಚಂದ್ರ ಅವರನ್ನು ಶಾಸಕರಾದ ಹರೀಶ್ ಪೂಂಜರವರು ಭೇಟಿಯಾಗಿ ಅತೀ ಶೀಘ್ರದಲ್ಲಿ ಮೆಲ್ಕಾಣಿಸಿರುವ ಶಾಲೆಗಳನ್ನು ಕರ್ನಾಟಕ ಪಬ್ಲಿಕ್ ಶಾಲೆ ಗಳನ್ನಾಗಿ ಪ್ರಾರಂಭಿಸಲು ಮಂಜೂರು ಮಾಡಿ ಆದೇಶಿಸುವಂತೆ ವಿನಂತಿಸಿದರು.

Related posts

ಕನ್ಯಾನ ಸದಾಶಿವ ಶೆಟ್ಟಿಯವರ ತೀರ್ಮಾನ ಸಂತಸ ತಂದಿದೆ: ಸಂದೀಪ್ ಶೆಟ್ಟಿ ಮಂದರ್ಸ

Suddi Udaya

ಕಣಿಯೂರು ಬಿಜೆಪಿ ಯುವ ಮೋರ್ಚಾ ವತಿಯಿಂದ ವಿಶ್ವ ಯೋಗ ದಿನ ದಿನಾಚರಣೆ ಹಾಗೂ ಸನ್ಮಾನ ಕಾರ್ಯಕ್ರಮ

Suddi Udaya

ಬಟ್ಲಡ್ಕ ಜಮಾಅತ್ ನ ಉರೂಸ್ ಕಾರ್ಯಕ್ರಮದ ಪೋಸ್ಟರ್ ಬಿಡುಗಡೆ

Suddi Udaya

ಮಚ್ಚಿನ ಸಪರಿವಾರ ಶ್ರೀ ಶಾಸ್ತಾರ ದೇವಸ್ಥಾನ ಮಾಣೂರು ನೂತನ ದೇವಾಲಯದ ಶಿಲಾನ್ಯಾಸ ಪ್ರಯಕ್ತ ಸಂಘ ಸಂಸ್ಥೆಗಳು ಹಾಗೂ ಊರವರಿಂದ ಶ್ರಮದಾನ

Suddi Udaya

ಧಮ೯ಸ್ಥಳ ಬುರುಡೆ ಷಡ್ಯಂತ್ರ ಪ್ರಕರಣ: ವರದಿಯ ಆದೇಶ ಡಿ.29ಕ್ಕೆ ಮುಂದೂಡಿದ ನ್ಯಾಯಾಲಯ

Suddi Udaya

ಮುಂಡಾಜೆ ಸ.ಹಿ.ಪ್ರಾ. ಶಾಲಾ ವಿದ್ಯಾರ್ಥಿನಿ ದ್ವಿಷಾ ಯು.ಡಿ ಗೆ ರಾಜ್ಯ ಪ್ರಶಸ್ತಿ

Suddi Udaya
error: Content is protected !!