23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪುದುವೆಟ್ಟು ಶ್ರೀಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ಇಂಗ್ಲೀಷ್ ಇಟಾಲಿಕ್ ಬರವಣಿಗೆಯ ತರಬೇತಿ

ಪುದುವೆಟ್ಟು: ಇಲ್ಲಿಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಇಂಗ್ಲಿಷ್ ಇಟಾಲಿಕ್ ಬರವಣಿಗೆಯ ತರಬೇತಿ ಜು.22 ರಂದು ನಡೆಯಿತು.

ಸಂಪನ್ಮೂಲ ವ್ಯಕ್ತಿಯಾಗಿ ಶ್ರೀ ಲಕ್ಷ್ಮೀನಾರಾಯಣ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ , ಕಾಂಚನ ಇಲ್ಲಿನ ನಿವೃತ್ತ ಮುಖ್ಯ ಮುಖ್ಯೋಪಾಧ್ಯಾಯ ಹರ್ಷ ಕುಮಾರ್ ಕೆ ಎನ್ ಉಜಿರೆ ಆಗಮಿಸಿ ವಿದ್ಯಾರ್ಥಿಗಳಿಗೆ ಅಂದವಾದ ಬರವಣಿಗೆಯ ಮಹತ್ವವನ್ನು ವಿವಿಧ ಚಟುವಟಿಕೆಗಳ ಮೂಲಕ ವಿವರಿಸಿ ಇಂಗ್ಲೀಷ್ ಇಟಾಲಿಕ್ ಬರವಣಿಗೆಯ ಪ್ರಾಯೋಗಿಕ ತರಬೇತಿಯನ್ನು ಅತ್ಯುತ್ತಮವಾಗಿ ನೀಡಿದರು.

ಶಾಲಾ ಮುಖ್ಯೋಪಾಧ್ಯಾಯ ಶೀನಪ್ಪ ಗೌಡ ತರಬೇತಿಯಲ್ಲಿ‌ ಉಪಸ್ಥಿತರಿದ್ದು ಪ್ರಾಸ್ತಾವಿಕವಾದ ಮಾತುಗಳನ್ನಾಡಿದರು. ಶಿಕ್ಷಕ ಪವನ್ ಕುಮಾರ್ ಸ್ವಾಗತಿಸಿ, ನಿರೂಪಿಸಿದರು.ಶಿಕ್ಷಕಿ ಕುಮಾರಿ ಜಿತೀಕ್ಷ ವಂದಿಸಿದರು. ನಿವೃತ್ತ ಶಿಕ್ಷಕಿ ಶ್ರೀಮತಿ ವಾರಿಜಾ ಹರ್ಷಕುಮಾರ್ ಹಾಗೂ ಶಾಲಾ ಶಿಕ್ಷಕ ವೃಂದದವರು ತರಬೇತಿಯಲ್ಲಿ ಉಪಸ್ಥಿತರಿದ್ದರು.

Related posts

ಬಿಜೆಪಿ ಮಹಿಳಾ ಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ರಾಷ್ಟ್ರಮಟ್ಟದ ವೆಯ್ಟ್ ಲಿಫ್ಟರ್ ತೇಜಸ್ವಿನಿ ಪೂಜಾರಿಯವರಿಗೆ ಸನ್ಮಾನ

Suddi Udaya

ಧರ್ಮಸ್ಥಳ: ನೇತ್ರಾವತಿ ಅಜಿಕುರಿ ಬಳಿ ರಸ್ತೆಗೆ ಬಿದ್ದ ಮರ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದಲ್ಲಿ ತಾಲೂಕಿಗೆ ಪ್ರಥಮ ಸ್ಥಾನ ಪಡೆದ ಮುಸ್ಕಾನ್ ಕೌಸರ್ ರಿಗೆ ಸನ್ಮಾನ

Suddi Udaya

ನಡ: ಸ್ಟಾರ್ ಲೈನ್ ವಿದ್ಯಾ ಸಂಸ್ಥೆಯಲ್ಲಿ ಪ್ರತಿಭಾವಂತ ‘ಯತೀಂ’ ವಿದ್ಯಾರ್ಥಿಗಳಿಗೆ ಹಾಗೂ ಕ್ರೀಡಾಪಟುಗಳಿಗೆ ಉಚಿತ ಶಿಕ್ಷಣಕ್ಕೆ ಅರ್ಜಿ ಆಹ್ವಾನ

Suddi Udaya

ಶಿಶಿಲ ಪೇಟೆಯಲ್ಲಿ ಒಂಟಿ ಸಲಗ ಸಂಚಾರ

Suddi Udaya

ಮೇಲಂತಬೆಟ್ಟು ಗ್ರಾ.ಪಂ. ನಲ್ಲಿ ವಿಶೇಷ ಗ್ರಾಮ ಸಭೆ

Suddi Udaya
error: Content is protected !!