25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತಾಲೂಕಿನ ಹಲವು ಶಾಲೆಗಳನ್ನು ಕರ್ನಾಟಕ ಪಬ್ಲಿಕ್ ಸ್ಕೂಲ್ಆಗಿ ಉನ್ನತೀಕರಿಸುವಂತೆ ಶಾಸಕ ಹರೀಶ್ ಪೂಂಜರಿಂದ ಮನವಿ

ಬೆಳ್ತಂಗಡಿ: ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಬರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮಚ್ಚಿನ, ಕೊರಂಜ, ಸರ್ಕಾರಿ ಪ್ರೌಢಶಾಲೆ ವೇಣೂರು, ಅಳದಂಗಡಿ, ಪದ್ಮುಂಜ, ಕೊಕ್ರಾಡಿ, ಅರಸಿನಮಕ್ಕಿ ಮುಂತಾದ ಹಿರಿಯ ಪ್ರಾಥಮಿಕ ಶಾಲೆ, ಪ್ರೌಢ ಶಾಲೆ, ಹಾಗೂ ಹಲವು ಪದವಿ ಪೂರ್ವ ಕಾಲೇಜುಗಳನ್ನು ಉನ್ನತಿಕರಿಸಿ ಕರ್ನಾಟಕ ಪಬ್ಲಿಕ್ ಶಾಲೆ ಗಳನ್ನಾಗಿ ಪ್ರಾರಂಭಿಸಲು ಮಂಜೂರು ಮಾಡಿ ಆದೇಶಿಸುವಂತೆ ಜು.18 ರಂದು ಶಾಸಕ ಹರೀಶ್ ಪೂಂಜ ಅವರು ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ಅವರನ್ನು ಭೇಟಿ ಮಾಡಿ ಮನವಿ ಮಾಡಿದ್ದರು.

ಜು.23ರಂದು ವಿಷಯವಾಗಿ ಶಿಕ್ಷಣ ಇಲಾಖೆಯ ಮುಖ್ಯ ಕಾರ್ಯದರ್ಶಿಗಳಾದ ರಶ್ಮಿ ಹಾಗೂ ಶಿಕ್ಷಣ ಇಲಾಖೆಯ ಕಮಿಷನರ್ ಆಗಿರುವ ತ್ರಿಲೋಕ್ ಚಂದ್ರ ಅವರನ್ನು ಶಾಸಕರಾದ ಹರೀಶ್ ಪೂಂಜರವರು ಭೇಟಿಯಾಗಿ ಅತೀ ಶೀಘ್ರದಲ್ಲಿ ಮೆಲ್ಕಾಣಿಸಿರುವ ಶಾಲೆಗಳನ್ನು ಕರ್ನಾಟಕ ಪಬ್ಲಿಕ್ ಶಾಲೆ ಗಳನ್ನಾಗಿ ಪ್ರಾರಂಭಿಸಲು ಮಂಜೂರು ಮಾಡಿ ಆದೇಶಿಸುವಂತೆ ವಿನಂತಿಸಿದರು.

Related posts

ಜೆಸಿಐ ಕೊಕ್ಕಡ ಕಪಿಲಾ ವತಿಯಿಂದ ಸ.ಕಿ.ಪ್ರಾ. ಶಾಲೆಯಲ್ಲಿ ಜನಗಣಮನ ಬರವಣಿಗೆ ಸ್ಪರ್ಧೆ

Suddi Udaya

ಬೆಳ್ತಂಗಡಿ ಮಾತೃಶ್ರೀ ಟೆಕ್ಸ್ ಟೈಲ್ಸ್ ನಲ್ಲಿ ಮಾನ್ಸೂನ್ ಸೇಲ್, ಪ್ರತಿ ಖರೀದಿಗೆ ಶೇ. 50 ರಷ್ಟು ರಿಯಾಯಿತಿ, ಗ್ರಾಹಕರಿಂದ ಉತ್ತಮ‌ ಪ್ರತಿಕ್ರಿಯೆ

Suddi Udaya

ಶಿಬಾಜೆ ಶ್ರೀ ಕ್ಷೇತ್ರ ಮೊಂಟೆತ್ತಡ್ಕ ದುರ್ಗಾಪರಮೇಶ್ವರೀ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ:ಧಾರ್ಮಿಕ ಸಭೆ

Suddi Udaya

ಕಸ್ತೂರಿ ರಂಗನ್ ವರದಿಯ ವಿರುದ್ಧ ನಡೆಯಲಿರುವ ಹೋರಾಟಗಳಿಗೆ ಬೆಳ್ತಂಗಡಿ ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ವತಿಯಿಂದ ಬೆಂಬಲ

Suddi Udaya

ಕರ್ನಾಟಕ ಸ್ಟೇಟ್ ಟೈಲರ್ಸ್ ಅಸೋಸಿಯೇಷನ್ ಮಡಂತ್ಯಾರು ವಲಯದ ಅಧ್ಯಕ್ಷರಾಗಿ ವಸಂತಿ ಲಕ್ಷ್ಮಣ್, ಕಾರ್ಯದರ್ಶಿಯಾಗಿ ಸುಮಲತಾ

Suddi Udaya

ಎಸ್.ಡಿ.ಎಂ ಸ್ವಾಯತ್ತ ಕಾಲೇಜು : ವಿದ್ಯಾರ್ಥಿಗಳಿಂದ ಪ್ರಾಯೋಗಿಕ ‘ಮಾದರಿ ಸಂಸತ್ತು 2025 -26’

Suddi Udaya
error: Content is protected !!