23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಹಿಂದೂ ರುದ್ರಭೂಮಿಗೆ ಸಿಲಿಕಾನ್ ಚೇಂಬರ್ ಅಳವಡಿಸಲು ಸಹಾಯಧನದ ಮಂಜೂರಾತಿ ಪತ್ರ ವಿತರಣೆ

ಧರ್ಮಸ್ಥಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ ಸಿ ಟ್ರಸ್ಟ್ ಬೆಳ್ತಂಗಡಿ ತಾಲೂಕು ಧರ್ಮಸ್ಥಳ ಪುದುವೆಟ್ಟು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಹಿಂದೂರುದ್ರ ಭೂಮಿಯನ್ನು ನಿರ್ಮಿಸಿದ್ದು ಸಿಲಿಕಾನ್ ಚೇಂಬರ್ ಅಳವಡಿಸಲು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ, ರೂ.151630 ಮೊತ್ತದ ಸಹಾಯಧನದ ಮಂಜೂರಾತಿ ಪತ್ರವನ್ನು ತಾಲೂಕು ಯೋಜನಾಧಿಕಾರಿ ಯಶೋಧರ ಕೆ ರವರು ರುದ್ರಭೂಮಿ ಸಮಿತಿಯ ಅಧ್ಯಕ್ಷ ಬೊಮ್ಮಣ್ಣ ಗೌಡ ಹಾಗೂ ಪದಾಧಿಕಾರಿಗಳಿಗೆ ವಿತರಿಸಿದರು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ರವಿಬಸಪ್ಪ ಗೌಡ, ಪುದುವೆಟ್ಟು ಗ್ರಾಮ ಪಂಚಾಯಿತ್ ಅಧ್ಯಕ್ಷರಾದ ಪೂರ್ಣಾಕ್ಷ ಬಿ, ಜನಜಾಗೃತಿ ಗ್ರಾಮ ಸಮಿತಿಯ ಅಧ್ಯಕ್ಷ ದೇವನಗೌಡ ಬೊಲ್ಮಾನರು, ರುದ್ರಭೂಮಿ ಸಮಿತಿಯ ಪದಾಧಿಕಾರಿಗಳಾದ ಸಜೀವ್ ಹಾಗೂ ಚಿತ್ತರಂಜನ್ ಜೈನ್, ಪುದುವೆಟ್ಟು ಒಕ್ಕೂಟದ ಅಧ್ಯಕ್ಷ ಶಶಿಧರ ಮೀಯಾರು, ಒಕ್ಕೂಟದ ಅಧ್ಯಕ್ಷ ಅಪೂರ್ವ ಜೈನ್, ಕೆಮ್ಮಟೆ ಒಕ್ಕೂಟದ ಅಧ್ಯಕ್ಷ ಗಣೇಶ್ ಸಾಲಿಯಾನ್ ಹಾಗೂ ಪದಾಧಿಕಾರಿಗಳು, ಪುದುವೆಟ್ಟು ಶೌರ್ಯ ಘಟಕದ ಸ್ವಯಂಸೇವಕರು, ಅಶೋಕ್ ಟ್ರೇಡರ್ಸ್ ಮಾಲಕರಾದ ಅಶೋಕ್, ವಲಯ ಮೇಲ್ವಿಚಾರಕ ರವೀಂದ್ರ ಬಿ, ಸೇವಾ ಪ್ರತಿನಿಧಿಗಳಾದ ಆನಂದ್ ಹಾಗೂ ಚೈತ್ರರವರು ಉಪಸ್ಥಿತರಿದ್ದರು.

Related posts

ಉಜಿರೆ : ದ್ವಿಚಕ್ರ ವಾಹನಗಳು ಡಿಕ್ಕಿ: ಬೆಳ್ತಂಗಡಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ನಡ: ಪಣಿಕ್ಕಲ ನಿವಾಸಿ ಧರ್ಣಪ್ಪ ಪೂಜಾರಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ಮೈರೋಳ್ತಡ್ಕ ಸರಕಾರಿ ಉನ್ನತಿಕರಿಸಿದ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

Suddi Udaya

ಜನಜಾಗೃತಿ ವೇದಿಕೆ ಮಾಜಿ ಅಧ್ಯಕ್ಷ ಡಿ.ಎ ರಹಿಮಾನ್ ಅವರಿಗೆ ಪತ್ನಿ‌ ವಿಯೋಗ

Suddi Udaya

ಬಂದಾರು: ಪೆರ್ಲ ಬೈಪಾಡಿಯ ಕಾಡಂಡ ಬಳಿ ಗುಡ್ಡಕ್ಕೆ ಬೆಂಕಿ

Suddi Udaya

ಬೆಳಾಲು ಶ್ರೀ ಧ. ಮ. ಅನುದಾನಿತ ಪ್ರೌಢಶಾಲೆಯಲ್ಲಿ ಆಟಿದ ಲೇಸ್ ಕಾರ್ಯಕ್ರಮ

Suddi Udaya
error: Content is protected !!