ಪುದುವೆಟ್ಟು: ಇಲ್ಲಿಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಇಂಗ್ಲಿಷ್ ಇಟಾಲಿಕ್ ಬರವಣಿಗೆಯ ತರಬೇತಿ ಜು.22 ರಂದು ನಡೆಯಿತು.

ಸಂಪನ್ಮೂಲ ವ್ಯಕ್ತಿಯಾಗಿ ಶ್ರೀ ಲಕ್ಷ್ಮೀನಾರಾಯಣ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ , ಕಾಂಚನ ಇಲ್ಲಿನ ನಿವೃತ್ತ ಮುಖ್ಯ ಮುಖ್ಯೋಪಾಧ್ಯಾಯ ಹರ್ಷ ಕುಮಾರ್ ಕೆ ಎನ್ ಉಜಿರೆ ಆಗಮಿಸಿ ವಿದ್ಯಾರ್ಥಿಗಳಿಗೆ ಅಂದವಾದ ಬರವಣಿಗೆಯ ಮಹತ್ವವನ್ನು ವಿವಿಧ ಚಟುವಟಿಕೆಗಳ ಮೂಲಕ ವಿವರಿಸಿ ಇಂಗ್ಲೀಷ್ ಇಟಾಲಿಕ್ ಬರವಣಿಗೆಯ ಪ್ರಾಯೋಗಿಕ ತರಬೇತಿಯನ್ನು ಅತ್ಯುತ್ತಮವಾಗಿ ನೀಡಿದರು.
ಶಾಲಾ ಮುಖ್ಯೋಪಾಧ್ಯಾಯ ಶೀನಪ್ಪ ಗೌಡ ತರಬೇತಿಯಲ್ಲಿ ಉಪಸ್ಥಿತರಿದ್ದು ಪ್ರಾಸ್ತಾವಿಕವಾದ ಮಾತುಗಳನ್ನಾಡಿದರು. ಶಿಕ್ಷಕ ಪವನ್ ಕುಮಾರ್ ಸ್ವಾಗತಿಸಿ, ನಿರೂಪಿಸಿದರು.ಶಿಕ್ಷಕಿ ಕುಮಾರಿ ಜಿತೀಕ್ಷ ವಂದಿಸಿದರು. ನಿವೃತ್ತ ಶಿಕ್ಷಕಿ ಶ್ರೀಮತಿ ವಾರಿಜಾ ಹರ್ಷಕುಮಾರ್ ಹಾಗೂ ಶಾಲಾ ಶಿಕ್ಷಕ ವೃಂದದವರು ತರಬೇತಿಯಲ್ಲಿ ಉಪಸ್ಥಿತರಿದ್ದರು.











