July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳಾಲು: ಕೊಲ್ಪಾಡಿ ಶಾಲೆಯಲ್ಲಿ ಗಿಡ ನೆಡುವ ಕಾರ್ಯಕ್ರಮ

ಬೆಳಾಲು: ಇಲ್ಲಿನ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಅರಣ್ಯ ಇಲಾಖೆ ಹಾಗೂ ಕುಂಡಡ್ಕ ಅರಣ್ಯ ಸಮಿತಿ ವತಿಯಿಂದ ಗಿಡ ನೆಡುವ ಕಾರ್ಯಕ್ರಮವನ್ನು ಜು.23 ರಂದು ನಡೆಸಲಾಯಿತು.

ಹಲಸು, ಮಾವು, ಅಶ್ವಥ, ಹುಣಸೆ, ಕಾಡು ದಾಸವಾಳ ಸೇರಿದಂತೆ ವಿವಿಧ ಜಾತಿಯ ಗಿಡಗಳನ್ನು ಗ್ರಾಮ ಅರಣ್ಯ ಸಮಿತಿಯ ಸದಸ್ಯರು ನಾಟಿ ಮಾಡಿದರು‌. ಈ ಸಂದರ್ಭದಲ್ಲಿ ಅರಣ್ಯ ಇಲಾಖೆಯ ಉಪವಲಯ ಅರಣ್ಯಾಧಿಕಾರಿಗಳಾದ ಜೆರಾಲ್ಡ್ ಡಿಸೋಜ, ಗಸ್ತು ಅರಣ್ಯ ಪಾಲಕರಾದ ಕೆ.ಎನ್.ಜಗದೀಶ್, ಅರಣ್ಯ ವೀಕ್ಷಕ ಸಂತೋಷ್, ಕುಂಡಡ್ಕ ಗ್ರಾಮ ಅರಣ್ಯ ಸಮಿತಿಯ ಅಧ್ಯಕ್ಷರಾದ ಗಂಗಾಧರ ಗೌಡ ಸೇರಿದಂತೆ ಹೆಚ್ಚಿನ ಸದಸ್ಯರು, ವಿದ್ಯಾರ್ಥಿಗಳು, ಶಿಕ್ಷಕರು ಉಪಸ್ಥಿತರಿದ್ದರು.

ಶಾಲಾ ಮುಖ್ಯೋಪಾಧ್ಯಾಯರಾದ ಸುರೇಶ್ ಮಾಚಾರ್ ಸ್ವಾಗತಿಸಿದರು. ಶಿಕ್ಷಕರಾದ ದಿನೇಶ್,ಕೆ ಹಾಗೂ ಕರಿಯಣ್ಣ ಗೌಡ ಸಹಕರಿಸಿದರು.

Related posts

ಧರ್ಮಸ್ಥಳ : ಮುಂಡ್ರುಪ್ಪಾಡಿ ನಿವಾಸಿ ಹರೀಶ್ ಎಮ್.ಎಲ್. ನಿಧನ

Suddi Udaya

ನೀಟ್ ಪ್ರಶ್ನಾ ಪತ್ರಿಕೆ ಸೋರಿಕೆ: ವಿದ್ಯಾರ್ಥಿಗಳ ಹೋರಾಟವನ್ನು ಹತ್ತಿಕ್ಕುವುದು ಖಂಡನೀಯ -ಕೆ.ಎಂ. ನಾಗೇಶ್ ಕುಮಾರ್ ಗೌಡ

Suddi Udaya

ಬೆಳ್ತಂಗಡಿ ಬಿಜೆಪಿ ಮಂಡಲದ ವತಿಯಿಂದ 78ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆ

Suddi Udaya

ನಾಳೆ (ಫೆ.8) : ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಬೆಳ್ತಂಗಡಿಗೆ

Suddi Udaya

ಬೆಳ್ತಂಗಡಿ ಆಭರಣ ಜ್ಯುವೆಲ್ಲರ್ಸ್ ಗೆ ಐಟಿ ದಾಳಿ

Suddi Udaya

ಡಾ|| ಹೇಮಾವತಿ ವೀ. ಹೆಗ್ಗಡೆಯವರ ಹುಟ್ಟುಹಬ್ಬ: ತಣ್ಣೀರುಪಂತ ವಲಯದ ಮಾಶಾಸನ ಪಡೆಯುವ ಫಲಾನುಭವಿಗಳಿಗೆ ಹಣ್ಣು ಹಂಪಲು ವಿತರಣೆ

Suddi Udaya
error: Content is protected !!