July 23, 2026
ವರದಿ

ಯುವವಾಹಿನಿ ಬೆಂಗಳೂರು ಘಟಕದ ಪದಪ್ರದಾನ ಸಮಾರಂಭ

ಬೆಳ್ತಂಗಡಿ: ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ಬೆಂಗಳೂರು ಘಟಕದ 2025-26ನೇ ಸಾಲಿನ ಪದಗ್ರಹಣ ಸಮಾರಂಭವು ಜು.13 ರಂದು ಬಿಬಿಎಂಪಿ ಜ್ಞಾನಸೌಧ, ಹೆಚ್.ಎನ್ಅನಂತ ಕುಮಾರ್ ಸಭಾಂಗಣ ನಾಗರಬಾವಿಯಲ್ಲಿ ಅಧ್ಯಕ್ಷರಾದ ಪ್ರಸಾದ್ ಕುಮಾರ್ ಕಲ್ಲಾಜೆರವರ ಅಧ್ಯಕ್ಷತೆಯಲ್ಲಿ ನಡೆಯಿತು.

ಬೆಳಗ್ಗೆ ಬ್ರಹ್ಮಶ್ರೀ ನಾರಾಯಣ ಗುರುಗಳಿಗೆ ದೀಪವನ್ನು ಬೆಳಗುವ ಮೂಲಕ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಲಾಯಿತು. ಘಟಕದ ಸದಸ್ಯರಿಂದ ಸಾಂಸ್ಕೃತಿಕ ಕಾರ್ಯಕ್ರಮ ಜರುಗಿತು. ಆರ್ಯ ಈಡಿಗ ಮಹಾಸಂಸ್ಥಾನ ಮಠ ಸೋಲೂರು, ರಾಮನಗರದ ಮಠಾಧೀಶರಾದ ಶ್ರೀ ವಿಖ್ಯಾತಾನಂದ ಸ್ವಾಮೀಜಿ ನೂತನ ಪದಾಧಿಕಾರಿಗಳಿಗೆ ಶುಭ ಹಾರೈಸಿದರು.ಬೆಳ್ತಂಗಡಿ ಬೆಸ್ಟ್ ಪೌಂಡೇಶನ್ ಅಧ್ಯಕ್ಷ ರಕ್ಷಿತ್ ಶಿವರಾಂ ದೀಪ ಪ್ರಜ್ವಲಿಸಿ ಪದಗ್ರಹಣ ನೇರವೇರಿಸಿ ಶುಭ ಕೋರಿದರು. ಘಟಕದ ವತಿಯಿಂದ ಅವರನ್ನು ಸನ್ಮಾನಿಸಲಾಯಿತು.

ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಾದ ಲೋಕೇಶ್ ಕೋಟ್ಯಾನ್ ಕೂಳೂರು, ಮೂಡಬಿದ್ರೆ ಶಾಸಕರಾದ ಉಮನಾಥ ಕೋಟ್ಯಾನ್,ನಂದಗುಡಿ ಹೊಸಕೋಟೆ ಬೆಂಗಳೂರಿನ ಸರ್ಕಲ್ ಇನ್ಸ್ಪೆಕ್ಟರ್ ಶಾಂತರಾಮ್,ಉದ್ಯಮಿ ದಯಾನಂದ ಬಂಗೇರ ಮುಖ್ಯ ಅತಿಥಿಗಳಾಗಿ ಭಾಗವಹಿಸಿದರು.2025-26 ನೇ ಸಾಲಿನ ಚುನಾವಣಾ ಸಮಿತಿಯ ಸಂಚಾಲಕ ಶ್ರೀಧರ್ ಡಿ ಪೂಜಾರಿ ನೂತನ ಪದಾಧಿಕಾರಿಗಳನ್ನು ವೇದಿಕೆಗೆ ಬರಮಾಡಿಕೊಂಡರು.ಕೇಂದ್ರ ಸಮಿತಿಯ ಅಧ್ಯಕ್ಷರಾದ ಲೋಕೇಶ್ ಕೋಟ್ಯಾನ್ ಅವರು ನೂತನ ಪದಾಧಿಕಾರಿಗಳಿಗೆ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು. ಡೆನ್ನಾನ ಡೆನ್ನನ 2024 ಸ್ಪರ್ಧೆಯಲ್ಲಿ ಪ್ರಥಮ ಸ್ಥಾನವನ್ನು ಪಡೆದ ಸವಿ ನೆನಪಿಗಾಗಿ ವಿಡಿಯೋ ಪ್ರದರ್ಶಿಸಲಾಯಿತು, ಡೆನ್ನಾನ ಚಾಂಪಿಯನ್ ಪಟ್ಟವನ್ನು ಅಲಂಕರಿಸಲು ಕಾರಣಿಕರ್ತರಾದ ನಿರ್ದೇಶಕರಾದ ಸ್ಮಿತೇಶ್ ಬಾರ್ಯ,ಅನೀಶ್ ಪೂಜಾರಿ ವೇಣೂರು ಇವರನ್ನು ಗೌರವಿಸಲಾಯಿತು.

ಅಕಾಲಿಕವಾಗಿ ಅಗಲಿದ ಕಾಮಿಡಿ ಕಿಲಾಡಿ ರಾಕೇಶ್ ಪೂಜಾರಿಯವರ ಕುಟುಂಬಕ್ಕೆ ಸಾಂತ್ವನ ನಿಧಿಯನ್ನು ಹಸ್ತಾಂತರಿಸಲಾಯಿತು.ಅರ್ಹಬಡ ವಿದ್ಯಾರ್ಥಿಗಳಿಗೆ ವಿದ್ಯಾ ನಿಧಿಯನ್ನು ನೀಡಲಾಯಿತು.ಘಟಕದ ಸಂಘಟನೆ ಬಲವರ್ಧನೆಗೆ, ಹಾಗೂ ಘಟಕದ ಬೆಳವಣಿಗೆ, ಘಟಕದ ಪ್ರತಿ ಕಾರ್ಯಕ್ರಮಕ್ಕೆ ಸಹಕಾರವನ್ನು ನೀಡಿ ಯುವವಾಹಿನಿಗೆ ಶಕ್ತಿಯಾಗಿರುವ ಸದಸ್ಯರ ಸೇವೆಯನ್ನು ಗೌರವಿಸಿ ಯುವಶ್ರಮಿಕ 2024 ಪುರಸ್ಕಾರದೊಂದಿಗೆ ಶ್ರೀಯುತ ಸುಧೀರ್ ಎಸ್ ಪೂಜಾರಿ ಸಚಿಂದ್ರ ಕೋಟ್ಯಾನ್,ಶರತ್ ಕೆ ಪೂಜಾರಿ,ದೀಪಿಕಾ,ಪವಿತ್ರ ಚೇತನ್ ಇವರನ್ನು ಗೌರವಿಸಿ ಸನ್ಮಾನಿಸಲಾಯಿತು.ಅಕ್ಷತಾ ಸುಧೀರ್ ಪ್ರಾರ್ಥನೆ ಹಾಡಿದರು.ಘಟಕಾಧ್ಯಕ್ಷ ಪ್ರಸಾದ್ ಕುಮಾರ್ ಕಲ್ಲಾಜೆ ಸ್ವಾಗತಿಸಿದರು. ಕಾರ್ಯದರ್ಶಿ ಧನುಷ್ ಘಟಕದ 2024-25 ನೇ ಸಾಲಿನ ವಾರ್ಷಿಕ ವರದಿಯನ್ನು ವೀಡಿಯೋ ಮೂಲಕ ಸಭೆಗೆ ಮಂಡಿಸಿದರು.ನೂತನ ಕಾರ್ಯದರ್ಶಿ ಸಂತೋಷ್ ಪೂಜಾರಿ ಧನ್ಯವಾದವಿತ್ತರು.

Related posts

ಇಂದಬೆಟ್ಟು: ಹೆಬ್ಬಾವನ್ನು ಬೇಟೆಯಾಡಿದ ಕಾಳಿಂಗ ಸರ್ಪ: ಸ್ನೇಕ್ ಅಶೋಕ್ ರವರಿಂದ ಹೆಬ್ಬಾವು ರಕ್ಷಣೆ

Suddi Udaya

ಮೇಲಂತಬೆಟ್ಟುವಿನ ಮನೆಯಂಗಳದಲ್ಲಿ ಭಾರಿಗಾತ್ರದ ಕಾಳಿಂಗ ಸರ್ಪ: ಕಾಳಿಂಗ ಸರ್ಪವನ್ನು ರಕ್ಷಿಸಿ ಸುರಕ್ಷಿತವಾಗಿ ಕಾಡಿಗೆ ಬಿಟ್ಟ ಸ್ನೇಕ್ ಅಶೋಕ್

Suddi Udaya

ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆಯಲ್ಲಿ ಮುಗೇರಡ್ಕ ನೇತ್ರಾವತಿ ನದಿಯಲ್ಲಿ ಉತ್ತಮ ತಳಿಯ ಮೀನು ಮರಿಗಳ ಬಿತ್ತನೆ ಮಾಡಿದ ಶಾಸಕ ಹರೀಶ್ ಪೂಂಜ

Suddi Udaya

ಭಾರೀ ಮಳೆಗೆ ತೆಕ್ಕಾರು ಜುಮ್ಮಾ ಮಸೀದಿಯ ಆವರಣದ ತಡೆಗೋಡೆ ಕುಸಿತ

Suddi Udaya

ಡಾ. ವೈ .ಉಮಾನಾಥ ಶೆಣೈ ಯವರಿಗೆ ಆರ್ಯಭಟ ಅಂತಾರಾಷ್ಟ್ರೀಯ ಪ್ರಶಸ್ತಿ       

Suddi Udaya

ಕಕ್ಕಿಂಜೆಯಲ್ಲಿ ವಿಜಯ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಸ್ಥಳಾಂತರಿತ ಶಾಖೆ ಉದ್ಘಾಟನೆ

Suddi Udaya
error: Content is protected !!